ಅರಣ್ಯ ಕೃಷಿಗೆ ಸಸಿ ಬೇಕೇ? ಬೆಲಸಿಂದ ಸಸ್ಯಕಾಶಿಗೆ ಬನ್ನಿ

ಅರಣ್ಯ ಕೃಷಿಗೆ ಪ್ರಾಮುಖ್ಯತೆ ನೀಡಲು ರಾಜ್ಯ ಸರ್ಕಾರ ಕ್ರಮ , ತಾಲೂಕು ಅರಣ್ಯ ಇಲಾಖೆಯಿಂದ ಕಡಿಮೆ ಬೆಲೆಗೆ ಗಿಡ ವಿತರಣೆ

Team Udayavani, Jun 10, 2019, 10:50 AM IST

hasan-tdy-1..

ಚನ್ನರಾಯಪಟ್ಟಣ: ಅರಣ್ಯ ಕೃಷಿಗೆ ಹೆಚ್ಚು ಪ್ರಾಮುಖ್ಯತೆ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು ಒಂದು ಹಾಗೂ ಮೂರು ರೂ.ಗೆ ಗಿಡವನ್ನು ತಾಲೂಕಿನ ಅರಣ್ಯ ಇಲಾಖೆ ವತಿಯಿಂದ ನೀಡಲು ಮುಂದಾಗಿದ್ದು, ರೈತರು ಹಾಗೂ ವೃಕ್ಷ ಪ್ರಿಯರು ಇದರ ಲಾಭ ಪಡೆಯಲು ಜೂ.10 ರಂದು ಬೆಲಸಿಂದ ಸಸ್ಯಕಾಶಿಗೆ ಆಗಮಿಸಬೇಕಿದೆ.

ಇಂದೇ ಆಗಮಿಸಿ: ಸಸಿಗಳನ್ನು ಪಡೆಯಲು ಆಸಕ್ತರು ಕೃಷಿ ಭೂಮಿ ಪಹಣಿ, ಬ್ಯಾಂಕ್‌ ಖಾತೆಯ ಪುಸ್ತಕ ಹಾಗೂ ಎರಡು ಭಾವ ಚಿತ್ರದೊಂದಿಗೆ ಬೆಲಸಿಂದ ಸಸ್ಯಕಾಶಿಗೆ ಆಗಮಿಸಿ ಒಂದು ರೂ. ನಂತೆ ತಮಗೆ ಅಗತ್ಯವಿರುವಷ್ಟು ಸಸಿಗಳನ್ನು ಪಡೆಯಬಹುದು. ಹೀಗೆ ಕಡಿಮೆ ಬೆಲೆಗೆ ಕೊಂಡ ಸಸಿಗಳನ್ನು ಮೂರು ವರ್ಷಗಳು ಪೋಷಣೆ ಮಾಡುವುದಕ್ಕೆ ಸರ್ಕಾರ ಪ್ರೋತ್ಸಾಹ ಧನವನ್ನು ನೀಡಲಿದೆ. ಇಂತಹ ಸದವಕಾಶವನ್ನು ತಾಲೂಕಿನ ರೈತರು ಸದುಪಯೋಗ ಪಡೆದುಕೊಳ್ಳಬೇಕೆಂದರೆ ಇಂದೇ ಬೆಲಸಿಂದ ಸಸ್ಯಕಾಶಿಗೆ ಬನ್ನಿ.

ಬ್ಯಾಂಕ್‌ ಖಾತೆಗೆ ಹಣ ಜಮಾ: ಕಡಿಮೆ ಬೆಲೆಗೆ ಸಸಿಗಳು ದೊರೆಯುತ್ತವೆ ಎಂದು ಅಗತ್ಯಕ್ಕಿಂತ ಹೆಚ್ಚು ಕೊಳ್ಳುವಂತಿಲ್ಲ. ತಾವು ಕೊಂಡ ಸಸಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಖಲು ಮಾಡಿಕೊಂಡು ಮುಂದಿನ ವರ್ಷ ತಮ್ಮ ಕೃಷಿ ಭೂಮಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ. ಗಿಡಗಳು ಉತ್ತಮವಾಗಿ ಬೆಳೆದಿದ್ದರೆ ತಲಾ ಗಿಡಕ್ಕೆ ಪ್ರಥಮ ವರ್ಷ 30 ರೂ. ದ್ವಿತೀಯ ವರ್ಷ 30 ರೂ. ಹಾಗೂ ತೃತೀಯ ವರ್ಷ 40 ರೂ.ನಂತೆ ನೇರವಾಗಿ ತಮ್ಮ ಬ್ಯಾಂಕ್‌ ಖಾತೆಗೆ ಹಣ ಜಮಾ ಮಾಡಲಿದ್ದಾರೆ.

ಯಾವ ಸಸಿ ಲಭ್ಯ: ತೇಗ, ಕಾಡು ಗೋಡಂಬಿ, ಹೊಂಗೆ, ಬೀಟೆ, ಗೋಣಿ, ಆಲ, ಬಸರಿ, ತಾರೆ, ಹತ್ತಿ, ಶಿವನೆ, ಮಹಗನಿ, ಆರ್ಥಿಕವಾಗಿ ಲಾಭ ತರುವ ಶ್ರೀಗಂಧ, ಹೊನ್ನೆ, ರಕ್ತಚಂದನ, ಸಿಲ್ವರ್‌, ಬೇವು, ಹೆಬ್ಬೇವು, ಹಣ್ಣಿನ ಗಿಡಗಳಾದ ಹಲಸು, ನೇರಳೆ ಸಿತಾಫ‌ಲ, ಸಪೋಟಾ ಗಿಡಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ನರ್ಸರಿ ಮಾಡಿ ಬೆಳೆಸಿದ್ದಾರೆ. ಇವುಗಳಲ್ಲಿ ಕೆಲವು ಒಂದು ರೂ.ಗೆ ದೊರೆತರೆ ಇನ್ನು ಹಲವು ಮೂರು ರೂ.ಗೆ ನಿಮ್ಮ ಕೈ ಸೇರಲಿವೆ.

ಎಲ್ಲೆಲ್ಲಿಗೆ ಮೀಸಲು: ಅರಣ್ಯ ಇಲಾಖೆ ಬೆಳೆದಿರುವ ಲಕ್ಷಾಂತರ ಸಸಿಗಳಲ್ಲಿ ಒಂದು ಲಕ್ಷ ಸಸಿಗಳು ರಸ್ತೆಯ ಇಕ್ಕೆಲಗಳಲ್ಲಿ ನಾಟಿ ಮಾಡಿ ಪೋಷಣೆ ಮಾಡಲು ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಮಗುವಿ ಗೊಂದು ಮರ, ಶಾಲೆಗೊಂದು ವನ ಯೋಜನೆ ಅಡಿಯಲ್ಲಿ ವನ ನಿರ್ಮಾಣಕ್ಕೆ ಪೂರಕವಾದ ಪ್ರದೇಶ ಹೊಂದಿರುವ ಶಾಲೆಗಳಿಗೆ ನೀಡಲಾಗುವುದು. ಇದಲ್ಲದೇ ಅರಣ್ಯ ಕೃಷಿ ಪೋತ್ಸಾಹಕ್ಕಾಗಿ ರೈತರಿಗೆ ಕಡಿಮೆ ದರದಲ್ಲಿ ಸಸಿಗಳನ್ನು ವಿತರಣೆ ಮಾಡಲಾಗುತ್ತದೆ.

ಅರಣ್ಯ-ಕೃಷಿಗೆ ಆದ್ಯತೆ: ಅರಣ್ಯ ಕೃಷಿ ಪ್ರೋತ್ಸಾಹ ಯೋಜನೆಯಡಿ ಪ್ರತಿ ರೈತರಿಗೆ 400 ಸಸಿಗಳನ್ನು ನಿಗದಿ ಮಾಡಿದ್ದು, ಯೋಜನೆ ಹೊರತುಪಡಿಸಿ ಸಾಮಾನ್ಯರು ಎಕರೆಗೆ 160 ಸಸಿಗಳನ್ನು ಪಡೆಯಬಹುದಾಗಿದೆ. ಸಸಿಗಳನ್ನು ಸಮರ್ಪಕವಾಗಿ ಪಾಲನೆ ಮಾಡುವವರಿಗೆ ಮಾತ್ರ ಈ ಸೌಲಭ್ಯ ದೊರೆಯಲಿದೆ, ಇತ್ತಿಚಿನ ದಿವಸಗಳಲ್ಲಿ ಕೃಷಿ ಅರಣ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ಪಡೆಯುತ್ತಿದ್ದು, ಜಮೀನಿನಲ್ಲಿ ಮರಗಳನ್ನು ಬೆಳೆಸಿ ಮಧ್ಯದಲ್ಲಿ ತೋಟಗಾರಿಕಾ ಬೆಳೆಯನ್ನು ಬೆಳೆಯುವ ಪದ್ಧತಿ ಚಾಲ್ತಿಯಲ್ಲಿದ್ದು ಅಂತಹ ರೈತರಿಗೂ ಸಸಿಗಳನ್ನು ವಿತರಣೆ ಮಾಡಲಾಗುವುದು. ಕೃಷಿ-ಅರಣ್ಯ ಪ್ರೋತ್ಸಾಹ ಯೋಜನೆಯಡಿ ಸಸಿಗಳನ್ನು ಪಡೆಯಲು ರೈತರು ಇಂದಿನಿಂದಲೇ ಇಲಾಖೆಗೆ ಅರ್ಜಿಯನ್ನು ಸಲ್ಲಿಸುವುದು ಸೂಕ್ತ.

● ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.