ಅರಣ್ಯ ಕೃಷಿಗೆ ಸಸಿ ಬೇಕೇ? ಬೆಲಸಿಂದ ಸಸ್ಯಕಾಶಿಗೆ ಬನ್ನಿ

ಅರಣ್ಯ ಕೃಷಿಗೆ ಪ್ರಾಮುಖ್ಯತೆ ನೀಡಲು ರಾಜ್ಯ ಸರ್ಕಾರ ಕ್ರಮ , ತಾಲೂಕು ಅರಣ್ಯ ಇಲಾಖೆಯಿಂದ ಕಡಿಮೆ ಬೆಲೆಗೆ ಗಿಡ ವಿತರಣೆ

Team Udayavani, Jun 10, 2019, 10:50 AM IST

hasan-tdy-1..

ಚನ್ನರಾಯಪಟ್ಟಣ: ಅರಣ್ಯ ಕೃಷಿಗೆ ಹೆಚ್ಚು ಪ್ರಾಮುಖ್ಯತೆ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು ಒಂದು ಹಾಗೂ ಮೂರು ರೂ.ಗೆ ಗಿಡವನ್ನು ತಾಲೂಕಿನ ಅರಣ್ಯ ಇಲಾಖೆ ವತಿಯಿಂದ ನೀಡಲು ಮುಂದಾಗಿದ್ದು, ರೈತರು ಹಾಗೂ ವೃಕ್ಷ ಪ್ರಿಯರು ಇದರ ಲಾಭ ಪಡೆಯಲು ಜೂ.10 ರಂದು ಬೆಲಸಿಂದ ಸಸ್ಯಕಾಶಿಗೆ ಆಗಮಿಸಬೇಕಿದೆ.

ಇಂದೇ ಆಗಮಿಸಿ: ಸಸಿಗಳನ್ನು ಪಡೆಯಲು ಆಸಕ್ತರು ಕೃಷಿ ಭೂಮಿ ಪಹಣಿ, ಬ್ಯಾಂಕ್‌ ಖಾತೆಯ ಪುಸ್ತಕ ಹಾಗೂ ಎರಡು ಭಾವ ಚಿತ್ರದೊಂದಿಗೆ ಬೆಲಸಿಂದ ಸಸ್ಯಕಾಶಿಗೆ ಆಗಮಿಸಿ ಒಂದು ರೂ. ನಂತೆ ತಮಗೆ ಅಗತ್ಯವಿರುವಷ್ಟು ಸಸಿಗಳನ್ನು ಪಡೆಯಬಹುದು. ಹೀಗೆ ಕಡಿಮೆ ಬೆಲೆಗೆ ಕೊಂಡ ಸಸಿಗಳನ್ನು ಮೂರು ವರ್ಷಗಳು ಪೋಷಣೆ ಮಾಡುವುದಕ್ಕೆ ಸರ್ಕಾರ ಪ್ರೋತ್ಸಾಹ ಧನವನ್ನು ನೀಡಲಿದೆ. ಇಂತಹ ಸದವಕಾಶವನ್ನು ತಾಲೂಕಿನ ರೈತರು ಸದುಪಯೋಗ ಪಡೆದುಕೊಳ್ಳಬೇಕೆಂದರೆ ಇಂದೇ ಬೆಲಸಿಂದ ಸಸ್ಯಕಾಶಿಗೆ ಬನ್ನಿ.

ಬ್ಯಾಂಕ್‌ ಖಾತೆಗೆ ಹಣ ಜಮಾ: ಕಡಿಮೆ ಬೆಲೆಗೆ ಸಸಿಗಳು ದೊರೆಯುತ್ತವೆ ಎಂದು ಅಗತ್ಯಕ್ಕಿಂತ ಹೆಚ್ಚು ಕೊಳ್ಳುವಂತಿಲ್ಲ. ತಾವು ಕೊಂಡ ಸಸಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಖಲು ಮಾಡಿಕೊಂಡು ಮುಂದಿನ ವರ್ಷ ತಮ್ಮ ಕೃಷಿ ಭೂಮಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ. ಗಿಡಗಳು ಉತ್ತಮವಾಗಿ ಬೆಳೆದಿದ್ದರೆ ತಲಾ ಗಿಡಕ್ಕೆ ಪ್ರಥಮ ವರ್ಷ 30 ರೂ. ದ್ವಿತೀಯ ವರ್ಷ 30 ರೂ. ಹಾಗೂ ತೃತೀಯ ವರ್ಷ 40 ರೂ.ನಂತೆ ನೇರವಾಗಿ ತಮ್ಮ ಬ್ಯಾಂಕ್‌ ಖಾತೆಗೆ ಹಣ ಜಮಾ ಮಾಡಲಿದ್ದಾರೆ.

ಯಾವ ಸಸಿ ಲಭ್ಯ: ತೇಗ, ಕಾಡು ಗೋಡಂಬಿ, ಹೊಂಗೆ, ಬೀಟೆ, ಗೋಣಿ, ಆಲ, ಬಸರಿ, ತಾರೆ, ಹತ್ತಿ, ಶಿವನೆ, ಮಹಗನಿ, ಆರ್ಥಿಕವಾಗಿ ಲಾಭ ತರುವ ಶ್ರೀಗಂಧ, ಹೊನ್ನೆ, ರಕ್ತಚಂದನ, ಸಿಲ್ವರ್‌, ಬೇವು, ಹೆಬ್ಬೇವು, ಹಣ್ಣಿನ ಗಿಡಗಳಾದ ಹಲಸು, ನೇರಳೆ ಸಿತಾಫ‌ಲ, ಸಪೋಟಾ ಗಿಡಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ನರ್ಸರಿ ಮಾಡಿ ಬೆಳೆಸಿದ್ದಾರೆ. ಇವುಗಳಲ್ಲಿ ಕೆಲವು ಒಂದು ರೂ.ಗೆ ದೊರೆತರೆ ಇನ್ನು ಹಲವು ಮೂರು ರೂ.ಗೆ ನಿಮ್ಮ ಕೈ ಸೇರಲಿವೆ.

ಎಲ್ಲೆಲ್ಲಿಗೆ ಮೀಸಲು: ಅರಣ್ಯ ಇಲಾಖೆ ಬೆಳೆದಿರುವ ಲಕ್ಷಾಂತರ ಸಸಿಗಳಲ್ಲಿ ಒಂದು ಲಕ್ಷ ಸಸಿಗಳು ರಸ್ತೆಯ ಇಕ್ಕೆಲಗಳಲ್ಲಿ ನಾಟಿ ಮಾಡಿ ಪೋಷಣೆ ಮಾಡಲು ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಮಗುವಿ ಗೊಂದು ಮರ, ಶಾಲೆಗೊಂದು ವನ ಯೋಜನೆ ಅಡಿಯಲ್ಲಿ ವನ ನಿರ್ಮಾಣಕ್ಕೆ ಪೂರಕವಾದ ಪ್ರದೇಶ ಹೊಂದಿರುವ ಶಾಲೆಗಳಿಗೆ ನೀಡಲಾಗುವುದು. ಇದಲ್ಲದೇ ಅರಣ್ಯ ಕೃಷಿ ಪೋತ್ಸಾಹಕ್ಕಾಗಿ ರೈತರಿಗೆ ಕಡಿಮೆ ದರದಲ್ಲಿ ಸಸಿಗಳನ್ನು ವಿತರಣೆ ಮಾಡಲಾಗುತ್ತದೆ.

ಅರಣ್ಯ-ಕೃಷಿಗೆ ಆದ್ಯತೆ: ಅರಣ್ಯ ಕೃಷಿ ಪ್ರೋತ್ಸಾಹ ಯೋಜನೆಯಡಿ ಪ್ರತಿ ರೈತರಿಗೆ 400 ಸಸಿಗಳನ್ನು ನಿಗದಿ ಮಾಡಿದ್ದು, ಯೋಜನೆ ಹೊರತುಪಡಿಸಿ ಸಾಮಾನ್ಯರು ಎಕರೆಗೆ 160 ಸಸಿಗಳನ್ನು ಪಡೆಯಬಹುದಾಗಿದೆ. ಸಸಿಗಳನ್ನು ಸಮರ್ಪಕವಾಗಿ ಪಾಲನೆ ಮಾಡುವವರಿಗೆ ಮಾತ್ರ ಈ ಸೌಲಭ್ಯ ದೊರೆಯಲಿದೆ, ಇತ್ತಿಚಿನ ದಿವಸಗಳಲ್ಲಿ ಕೃಷಿ ಅರಣ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ಪಡೆಯುತ್ತಿದ್ದು, ಜಮೀನಿನಲ್ಲಿ ಮರಗಳನ್ನು ಬೆಳೆಸಿ ಮಧ್ಯದಲ್ಲಿ ತೋಟಗಾರಿಕಾ ಬೆಳೆಯನ್ನು ಬೆಳೆಯುವ ಪದ್ಧತಿ ಚಾಲ್ತಿಯಲ್ಲಿದ್ದು ಅಂತಹ ರೈತರಿಗೂ ಸಸಿಗಳನ್ನು ವಿತರಣೆ ಮಾಡಲಾಗುವುದು. ಕೃಷಿ-ಅರಣ್ಯ ಪ್ರೋತ್ಸಾಹ ಯೋಜನೆಯಡಿ ಸಸಿಗಳನ್ನು ಪಡೆಯಲು ರೈತರು ಇಂದಿನಿಂದಲೇ ಇಲಾಖೆಗೆ ಅರ್ಜಿಯನ್ನು ಸಲ್ಲಿಸುವುದು ಸೂಕ್ತ.

● ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

ಟಾಪ್ ನ್ಯೂಸ್

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsad

Hassan; ನೀರಿಗಾಗಿ ಪ್ರತಿಭಟನೆ ನಡೆಸಿದ ಜೆಡಿಎಸ್: ಎಚ್ಚರಿಕೆ

Lok Sabha Election: ತಪ್ಪು ತಿದ್ದಿಕೊಳ್ಳಲು ಅವಕಾಶ ಕೊಡಿ: ಎಚ್‌ಡಿಕೆ

Lok Sabha Election: ತಪ್ಪು ತಿದ್ದಿಕೊಳ್ಳಲು ಅವಕಾಶ ಕೊಡಿ: ಎಚ್‌ಡಿಕೆ

ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ… ಗ್ಯಾಸ್ ಸೋರಿಕೆ, ಅಗ್ನಿಶಾಮಕ ಸಿಬ್ಬಂದಿ ದೌಡು

ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ… ಗ್ಯಾಸ್ ಸೋರಿಕೆ, ಅಗ್ನಿಶಾಮಕ ಸಿಬ್ಬಂದಿ ದೌಡು

Stamp paper: ರೈತರು, ಜನರಿಗೆ ಛಾಪಾಕಾಗದ ದರ ಏರಿಕೆ ಬರೆ

Stamp paper: ರೈತರು, ಜನರಿಗೆ ಛಾಪಾಕಾಗದ ದರ ಏರಿಕೆ ಬರೆ

21

Hijab controversy: ಹಾಸನದ ಖಾಸಗಿ ಕಾಲೇಜಿನಲ್ಲಿ  ಹಿಜಾಬ್‌- ಕೇಸರಿ ಶಾಲು ವಿವಾದ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.