ಹೇಮೆ ನದಿಯಲ್ಲಿ ನವ ದಂಪತಿ ಶವ ಪತ್ತೆ

ನದಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದೇ ದುರಂತಕ್ಕೆ ಕಾರಣ?

Team Udayavani, May 9, 2020, 12:28 PM IST

ಹೇಮೆ ನದಿಯಲ್ಲಿ ನವ ದಂಪತಿ ಶವ ಪತ್ತೆ

ಸಕಲೇಶಪುರ: ತಿರುಗಾಡಲು ಹೋಗಿದ್ದ ನವ ದಂಪತಿಗಳು ಆಕಸ್ಮಿಕವಾಗಿ ಹೇಮಾವತಿ ನದಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಪಟ್ಟಣಕ್ಕೆ ಸಮೀಪವಿರುವ ತಾಲೂಕಿನ ಹೆನ್ನಲಿ ಗ್ರಾಮದ ಸಮೀಪ ನಡೆದಿದೆ. ಬೇಲೂರು ತಾಲೂಕು ಮುರಳ್ಳಿ ಗ್ರಾಮದ ಅರ್ಥೇಶ್‌ (27), ಹೆನ್ನಲಿ ಗ್ರಾಮದ ಕೃತಿಕಾ (23) ಮೃತಪಟ್ಟ ದುರ್ದೈವಿಗಳು. ಕಳೆದ 2 ತಿಂಗಳ ಹಿಂದೆ ಯಷ್ಟೇ ಮದುವೆಯಾಗಿದ್ದು ಅರ್ಥೇಶ್‌ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.

ಕೋವಿಡ್ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತನ್ನ ಸ್ವಗ್ರಾಮ ಬೇಲೂರು ತಾಲೂಕಿನ ಮುರಳ್ಳಿ ಗ್ರಾಮಕ್ಕೆ ಕಳೆದ ಕೆಲವು ದಿನಗಳ ಹಿಂದಯಷ್ಟೇ ಬಂದಿದ್ದು ಬುಧವಾರ ಹೆನ್ನಲಿ ಗ್ರಾಮದ ಪತ್ನಿ ಮನೆಗೆ ಬಂದಿದ್ದ. ಗುರುವಾರ ಸಂಜೆ ದಂಪತಿ ತಿರುಗಾಡಿ ಕೊಂಡು ಬರುತ್ತೇವೆ ಎಂದು ಬೈಕ್‌ನಲ್ಲಿ ಹೊರ ಹೋಗಿದ್ದು ಎಷ್ಟೊತ್ತು ಆದರೂ ಹಿಂತಿರುಗಿ ಬಾರದ ಕಾರಣ ಮನೆಯವರು ಮೊಬೈಲ್‌ಗೆ ಕರೆ ಮಾಡಿದ್ದರು. ಆದರೆ, ಎರಡೂ ಮೊಬೈಲ್‌ ಸ್ವಿಚ್‌ ಆಫ್ ಆಗಿದ್ದರಿಂದ ಮನೆಯವರು ಹಾಗೆಯೇ ಹುಡುಕಿ ಕೊಂಡು ಬಂದಾಗ, ಹೇಮಾವತಿ ನದಿ ಸಮೀಪದ ರಸ್ತೆಯಲ್ಲಿ ಬೈಕ್‌ ಕಾಣಿಸಿದೆ. ಹೀಗೆ ಬೈಕ್‌ ಸುತ್ತಮುತ್ತ ಹುಡುಕಿದಾಗ, ಅಲ್ಲೇ ಪಕ್ಕದಲ್ಲಿ ಮೀನುಗಾರರು ಹಾಕಿದ್ದ ಬಲೆಗೆ ಯುವತಿ ಶವ ಸಿಲುಕಿದ್ದು ತಕ್ಷಣ ಶವವನ್ನು ಮೇಲೆತ್ತಿ ಪೊಲೀಸರ ಮುಖಾಂತರ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು.

ಕತ್ತಲಾಗಿದ್ದರಿಂದ ಪತಿಯ ಶವವನ್ನು ಹೊರ ತೆಗೆಯಲು ಆಗಿರಲಿಲ್ಲ. ಶುಕ್ರವಾರ ಮುಂಜಾನೆ ಈಜುಗಾರರ ಸಹಾಯದಿಂದ ಅರ್ಥೇಶ್‌ ಶವವನ್ನು ಹೊರ ತೆಗೆಯಲಾಗಿದೆ. ಗುರುವಾರ ರಾತ್ರಿ ಭರ್ಜರಿಯಾಗಿ ಮಳೆ ಸುರಿದಿದ್ದರೂ ಈಜುಗಾರರು ಶವವನ್ನು ಹುಡುಕಿ ಹೊರ ತೆಗೆದಿದ್ದಾರೆ. ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರಿನಲ್ಲಿ ಮುಳುಗಿದ್ದಾರೆ ಎಂದು ಕೆಲವರು ಹೇಳುತ್ತಿದ್ದು ಹೇಮಾವತಿ ನದಿ ತೀರದಲ್ಲಿ ಇಟ್ಟಿಗೆ, ಮರಳು ಗಣಿಗಾರಿಕೆಗೆ ಗುಂಡಿ ತೆಗೆಯುವುದರಿಂದ ಈ ರೀತಿ ಘಟನೆಯಾಗಳು ಕಾರಣ ಎಂದೂ ಕೆಲವರು ಆರೋಪಿಸಿದ್ದಾರೆ.

ಕಳೆದ ಕೆಲವು ತಿಂಗಳ ಹಿಂದಷ್ಟೇ ಪಟ್ಟಣದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ನಾನ ಮಾಡಲು ಹೋಗಿ ಕೌಡಹಳ್ಳಿ ಸಮೀಪದ ಹೇಮಾವತಿ ನದಿ ತೀರದಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಈ ಘಟನೆಯಿಂದ ಹೊರ ಬರುವ ಮುನ್ನವೇ ನವ ದಂಪತಿ ಹೇಮೆ ನದಿಯಲ್ಲಿ ಸಾವನ್ನಪ್ಪಿರುವುದು ವಿಷಾದಕರ. ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು ಡಿವೈಎಸ್‌ಪಿ ಗೋಪಿ, ಸರ್ಕಲ್‌ ಇನ್ಸ್‌ಪೆಕ್ಟರ್‌ ಗಿರೀಶ್‌, ನಗರ ಠಾಣೆ ಪಿಎಸ್‌ಐ ರಾಘವೇಂದ್ರ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.