ಜಿಲ್ಲೆಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿಲ್ಲ


Team Udayavani, Mar 18, 2020, 3:00 AM IST

jilleyall-co

ಹಾಸನ: ಜಿಲ್ಲೆಯಲ್ಲಿ ಇದುವರೆಗೂ ಶಂಕಿತ 152 ಜನರ ತಪಾಸಣೆ ನಡೆಸಲಾಗಿದೆ. 13 ಶಂಕಿತರ ರಕ್ತ, ಕಫ‌ದ ಪರೀಕ್ಷೆಯನ್ನೂ ನಡೆಸಲಾಗಿದ್ದು, ಯಾರೊಬ್ಬರಲ್ಲೂ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 50 ಮಂದಿ ದೇಶಿಯರು, 102 ವಿದೇಶಿಗರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಸುಮಾರು 13 ಶಂಕಿತರ ಪರೀಕ್ಷೆ ನಡೆಸಲಾಗಿದ್ದು ಯಾರಲ್ಲಿಯೂ ಸೋಂಕು ಇಲ್ಲವೆಂದು ಖಾತರಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬೇಲೂರು, ಹಳೆಬೀಡು ಹಾಗೂ ಶ್ರವಣಬೆಳಗೊಳದಲ್ಲಿ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಕೊರೊನಾ ಪರೀಕ್ಷಾ ಕೇಂದ್ರ ಸ್ಥಾಪನೆ: ಹಾಸನದಲ್ಲಿ ಕೊರೊನಾ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಇಲ್ಲಿಯವರೆಗೆ ಜಿಲ್ಲೆ ಹಾಗೂ ಹೊರಜಿಲ್ಲೆಗಳಿಂದ ಬಂದ 45 ಜನರ ಸ್ಯಾಂಪಲ್ಸ್‌ ಗಳನ್ನು ಪರೀಕ್ಷೆ ನಡೆಸಿದ್ದು ಸೋಂಕು ಇಲ್ಲವೆಂದು ವರದಿ ಬಂದಿದೆ. ಸಾರ್ವಜನಿಕರು ಗಾಬರಿಯಾಗುವ ಅವಶ್ಯಕತೆ ಇಲ್ಲ ಆದರೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಹೇಳಿದರು. ಇಲ್ಲಿಯವರೆಗೆ ಶಂಕಿತರೆಂದು ಗುರುತಿಸಲಾಗಿರುವವರೆಲ್ಲರೂ ಬೇರೆ ಕಡೆಯಿಂದ ಬಂದವರಾಗಿದ್ದಾರೆ. ಬೇರೆ ವಿದೇಶಗಳಿಂದ ಬಂದ ಭಾರತೀಯರನ್ನು ರೋಗ ಲಕ್ಷಣಗಳು ಕಂಡುಬಂದಲ್ಲಿ 14 ದಿನಗಳು ಐಸೋಲೇಷನ್‌ನಲ್ಲಿ ಇಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಹಿಮ್ಸ್‌ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್‌: ಹಾಸನ ಹಿಮ್ಸ್‌ ಆಸ್ಪತ್ರೆಯಲ್ಲಿ ಪ್ರಸ್ತುತ 20 ಹಾಸಿಗೆಗಳ ಪ್ರತ್ಯೇಕ ವಾರ್ಡ್‌ ಸ್ಥಾಪನೆಯಾಗಿದ್ದು ಅವಶ್ಯಕತೆ ಇದ್ದಲ್ಲಿ ಅದನ್ನು 300 ಹಾಸಿಗೆಗಳವರೆಗೂ ವಿಸ್ತರಿಸಬಹುದು. ವಾರ್ಡ್‌ನಲ್ಲಿ ಈಗ ಯಾವೊಬ್ಬ ಶಂಕಿತರೂ ದಾಖಲಾಗಿಲ್ಲ. ಸರ್ಕಾರದ ಆದೇಶದಂತೆ ಈಗಾಗಲೇ ಶಂಕಿತರಿಗಾಗಿ 50 ಹಾಸಿಗೆಗಳ ಕ್ವಾರಂಟೈನ್‌ (ಪ್ರತ್ಯೇಕ) ವಾರ್ಡ್‌ನ್ನು, 100 ಹಾಸಿಗೆಗಳ ವಾರ್ಡ್‌ ಗೆ ವಿಸ್ತರಿಸಲಾಗುವುದು. ಇಲ್ಲಿಯವರೆಗೆ 14 ಜನರು ಹೋಮ್‌ ಐಸೋಲೇಷನ್‌ ಮುಗಿಸಿದ್ದಾರೆ.

ಜೊತೆಗೆ ಪ್ರವಾಸಕ್ಕೆ ಬರುವ ವಿದೇಶಿಗರ ಮೇಲೆ ನಿಗಾ ವಹಿಸಲಾಗಿದೆ ಎಂದರು. ಜಾತ್ರಾ ಮಹೋತ್ಸವಗಳಿಗೆ ಹೆಚ್ಚು ಜನರು ಸೇರಬಾರದು ಎಂದು ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ದೇವಸ್ಥಾನದ ಆಡಳಿತ ಮಂಡಳಿಗಳಿಗೆ ಹೆಚ್ಚು ಜನರು ಸೇರದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಜಾತ್ರಾ ಮಹೋತ್ಸವ ನಡೆಯುವ ಹಿಂದಿನ ದಿನ ಜನರಲ್ಲಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸುವಂತೆ ತಿಳಿಸಲಾಗಿದೆ ಎಂದು ತಿಳಿಸಿದರು.

ಸಂತೆಯಲ್ಲಿ ಕೊರೊನಾ ಜಾಗೃತಿ: ಹಾಸನ ನಗರದಲ್ಲಿ ಎಲ್ಲ ಸೂಪರ್‌ ಮಾರ್ಕೆಟ್‌ಗಳನ್ನು ಮುಚ್ಚಲಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗಬಾರದು ಎನ್ನುವ ನಿಟ್ಟಿನಲ್ಲಿ ಬುಧವಾರದಿಂದ ದಿನ ಬಿಟ್ಟು ದಿನ ತೆರೆಯುವಂತೆ ಆದೇಶಿಸಲಾಗಿದೆ. ಸಂತೆ ಹಾಗೂ ಇತರೆ ಜನ ಸೇರುವ ಜಾಗಗಳಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳು ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಮದುವೆ ಮತ್ತು ಇತರೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವಂತಿಲ್ಲ ಎಂದು ತಿಳಿಸಿದರು.

ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕೇಸ್‌: ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿಗಳು ಹರಿದಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು ಆ ರೀತಿ ಮಾಡುವವರ ವಿರುದ್ಧ ಸೈಬರ್‌ ಕ್ರೆçಮ್‌ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ ಅವರು, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ಕುಮಾರ್‌ ಅವರೂ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಸರಾಗವಾಗಿ ನಡೆದ ವಾರದ ಸಂತೆ: ಕೊರೊನಾ ವೈರಸ್‌ ಹರಡದಂತೆ ಹೆಚ್ಚು ಜನರು ಸೇರುವ ಎಲ್ಲ ಕಾರ್ಯಕ್ರಮಗಳ ಮೇಲೂ ನಿರ್ಬಂಧ ವಿಧಿಸಲಾಗಿದೆ. ಆದರೆ ಹಾಸನನಲ್ಲಿ ಮಂಗಳವಾರದ ಸಂತೆಯ ಮೇಲೆ ನಿರ್ಬಂಧ ಪರಿಣಾಮ ಬೀರಲಿಲ್ಲ. ಹಾಸನದಲ್ಲಿ ಎಂ.ಜಿ.ರಸ್ತೆಗೆ ಹೊಂದಿಕೊಂಡಂತಿರುವ ಮಹಿಳಾ ಕಾಲೇಜು ರಸ್ತೆ, ಬಿ.ಎಂ.ರಸ್ತೆಯ ರೇಷ್ಮೆ ಮಾರುಕಟ್ಟೆಯ ಆವರಣ, ಸಂತೆಪೇಟೆಯಲ್ಲಿ ಮಂಗಳವಾರದ ಸಂತೆ ನಡೆಯುತ್ತವೆ. ಈ ಮಂಗಳವಾರವೂ ಸಂತೆ ಸರಾಗವಾಗಿ ನಡೆಯಿತು. ಸಾವಿರಾರು ಜನರು ಸಂತೆಗೆ ಬಂದು ದಿನ ನಿತ್ಯದ ವಸ್ತುಗಳನ್ನು ಖರೀದಿಸಿದರು. ಕೊರೊನಾ ಬಗ್ಗೆ ಯಾರಬ್ಬರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಿಲ್ಲ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hassan

Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sakaleshpura

National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.