ಜಿಲ್ಲೆಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿಲ್ಲ


Team Udayavani, Mar 18, 2020, 3:00 AM IST

jilleyall-co

ಹಾಸನ: ಜಿಲ್ಲೆಯಲ್ಲಿ ಇದುವರೆಗೂ ಶಂಕಿತ 152 ಜನರ ತಪಾಸಣೆ ನಡೆಸಲಾಗಿದೆ. 13 ಶಂಕಿತರ ರಕ್ತ, ಕಫ‌ದ ಪರೀಕ್ಷೆಯನ್ನೂ ನಡೆಸಲಾಗಿದ್ದು, ಯಾರೊಬ್ಬರಲ್ಲೂ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 50 ಮಂದಿ ದೇಶಿಯರು, 102 ವಿದೇಶಿಗರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಸುಮಾರು 13 ಶಂಕಿತರ ಪರೀಕ್ಷೆ ನಡೆಸಲಾಗಿದ್ದು ಯಾರಲ್ಲಿಯೂ ಸೋಂಕು ಇಲ್ಲವೆಂದು ಖಾತರಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬೇಲೂರು, ಹಳೆಬೀಡು ಹಾಗೂ ಶ್ರವಣಬೆಳಗೊಳದಲ್ಲಿ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಕೊರೊನಾ ಪರೀಕ್ಷಾ ಕೇಂದ್ರ ಸ್ಥಾಪನೆ: ಹಾಸನದಲ್ಲಿ ಕೊರೊನಾ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಇಲ್ಲಿಯವರೆಗೆ ಜಿಲ್ಲೆ ಹಾಗೂ ಹೊರಜಿಲ್ಲೆಗಳಿಂದ ಬಂದ 45 ಜನರ ಸ್ಯಾಂಪಲ್ಸ್‌ ಗಳನ್ನು ಪರೀಕ್ಷೆ ನಡೆಸಿದ್ದು ಸೋಂಕು ಇಲ್ಲವೆಂದು ವರದಿ ಬಂದಿದೆ. ಸಾರ್ವಜನಿಕರು ಗಾಬರಿಯಾಗುವ ಅವಶ್ಯಕತೆ ಇಲ್ಲ ಆದರೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಹೇಳಿದರು. ಇಲ್ಲಿಯವರೆಗೆ ಶಂಕಿತರೆಂದು ಗುರುತಿಸಲಾಗಿರುವವರೆಲ್ಲರೂ ಬೇರೆ ಕಡೆಯಿಂದ ಬಂದವರಾಗಿದ್ದಾರೆ. ಬೇರೆ ವಿದೇಶಗಳಿಂದ ಬಂದ ಭಾರತೀಯರನ್ನು ರೋಗ ಲಕ್ಷಣಗಳು ಕಂಡುಬಂದಲ್ಲಿ 14 ದಿನಗಳು ಐಸೋಲೇಷನ್‌ನಲ್ಲಿ ಇಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಹಿಮ್ಸ್‌ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್‌: ಹಾಸನ ಹಿಮ್ಸ್‌ ಆಸ್ಪತ್ರೆಯಲ್ಲಿ ಪ್ರಸ್ತುತ 20 ಹಾಸಿಗೆಗಳ ಪ್ರತ್ಯೇಕ ವಾರ್ಡ್‌ ಸ್ಥಾಪನೆಯಾಗಿದ್ದು ಅವಶ್ಯಕತೆ ಇದ್ದಲ್ಲಿ ಅದನ್ನು 300 ಹಾಸಿಗೆಗಳವರೆಗೂ ವಿಸ್ತರಿಸಬಹುದು. ವಾರ್ಡ್‌ನಲ್ಲಿ ಈಗ ಯಾವೊಬ್ಬ ಶಂಕಿತರೂ ದಾಖಲಾಗಿಲ್ಲ. ಸರ್ಕಾರದ ಆದೇಶದಂತೆ ಈಗಾಗಲೇ ಶಂಕಿತರಿಗಾಗಿ 50 ಹಾಸಿಗೆಗಳ ಕ್ವಾರಂಟೈನ್‌ (ಪ್ರತ್ಯೇಕ) ವಾರ್ಡ್‌ನ್ನು, 100 ಹಾಸಿಗೆಗಳ ವಾರ್ಡ್‌ ಗೆ ವಿಸ್ತರಿಸಲಾಗುವುದು. ಇಲ್ಲಿಯವರೆಗೆ 14 ಜನರು ಹೋಮ್‌ ಐಸೋಲೇಷನ್‌ ಮುಗಿಸಿದ್ದಾರೆ.

ಜೊತೆಗೆ ಪ್ರವಾಸಕ್ಕೆ ಬರುವ ವಿದೇಶಿಗರ ಮೇಲೆ ನಿಗಾ ವಹಿಸಲಾಗಿದೆ ಎಂದರು. ಜಾತ್ರಾ ಮಹೋತ್ಸವಗಳಿಗೆ ಹೆಚ್ಚು ಜನರು ಸೇರಬಾರದು ಎಂದು ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ದೇವಸ್ಥಾನದ ಆಡಳಿತ ಮಂಡಳಿಗಳಿಗೆ ಹೆಚ್ಚು ಜನರು ಸೇರದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಜಾತ್ರಾ ಮಹೋತ್ಸವ ನಡೆಯುವ ಹಿಂದಿನ ದಿನ ಜನರಲ್ಲಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸುವಂತೆ ತಿಳಿಸಲಾಗಿದೆ ಎಂದು ತಿಳಿಸಿದರು.

ಸಂತೆಯಲ್ಲಿ ಕೊರೊನಾ ಜಾಗೃತಿ: ಹಾಸನ ನಗರದಲ್ಲಿ ಎಲ್ಲ ಸೂಪರ್‌ ಮಾರ್ಕೆಟ್‌ಗಳನ್ನು ಮುಚ್ಚಲಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗಬಾರದು ಎನ್ನುವ ನಿಟ್ಟಿನಲ್ಲಿ ಬುಧವಾರದಿಂದ ದಿನ ಬಿಟ್ಟು ದಿನ ತೆರೆಯುವಂತೆ ಆದೇಶಿಸಲಾಗಿದೆ. ಸಂತೆ ಹಾಗೂ ಇತರೆ ಜನ ಸೇರುವ ಜಾಗಗಳಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳು ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಮದುವೆ ಮತ್ತು ಇತರೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವಂತಿಲ್ಲ ಎಂದು ತಿಳಿಸಿದರು.

ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕೇಸ್‌: ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿಗಳು ಹರಿದಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು ಆ ರೀತಿ ಮಾಡುವವರ ವಿರುದ್ಧ ಸೈಬರ್‌ ಕ್ರೆçಮ್‌ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ ಅವರು, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ಕುಮಾರ್‌ ಅವರೂ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಸರಾಗವಾಗಿ ನಡೆದ ವಾರದ ಸಂತೆ: ಕೊರೊನಾ ವೈರಸ್‌ ಹರಡದಂತೆ ಹೆಚ್ಚು ಜನರು ಸೇರುವ ಎಲ್ಲ ಕಾರ್ಯಕ್ರಮಗಳ ಮೇಲೂ ನಿರ್ಬಂಧ ವಿಧಿಸಲಾಗಿದೆ. ಆದರೆ ಹಾಸನನಲ್ಲಿ ಮಂಗಳವಾರದ ಸಂತೆಯ ಮೇಲೆ ನಿರ್ಬಂಧ ಪರಿಣಾಮ ಬೀರಲಿಲ್ಲ. ಹಾಸನದಲ್ಲಿ ಎಂ.ಜಿ.ರಸ್ತೆಗೆ ಹೊಂದಿಕೊಂಡಂತಿರುವ ಮಹಿಳಾ ಕಾಲೇಜು ರಸ್ತೆ, ಬಿ.ಎಂ.ರಸ್ತೆಯ ರೇಷ್ಮೆ ಮಾರುಕಟ್ಟೆಯ ಆವರಣ, ಸಂತೆಪೇಟೆಯಲ್ಲಿ ಮಂಗಳವಾರದ ಸಂತೆ ನಡೆಯುತ್ತವೆ. ಈ ಮಂಗಳವಾರವೂ ಸಂತೆ ಸರಾಗವಾಗಿ ನಡೆಯಿತು. ಸಾವಿರಾರು ಜನರು ಸಂತೆಗೆ ಬಂದು ದಿನ ನಿತ್ಯದ ವಸ್ತುಗಳನ್ನು ಖರೀದಿಸಿದರು. ಕೊರೊನಾ ಬಗ್ಗೆ ಯಾರಬ್ಬರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಿಲ್ಲ.

Ad

ಟಾಪ್ ನ್ಯೂಸ್

1-aa-alka-raj

Wimbledon:ಅಲ್ಕರಾಜ್‌ ಹ್ಯಾಟ್ರಿಕ್‌ ಫೈನಲ್‌

ಬಿ.ಟಿ.ಲಲಿತಾ ನಾಯಕ್‌ ಕಾಂಗ್ರೆಸ್‌ಗೆ

ಕಾಂಗ್ರೆಸ್‌ ಸೇರಿದ ಮಾಜಿ ಸಚಿವೆ ಬಿಟಿ ಲಲಿತಾ ನಾಯಕ್

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

1-aa-des

Mangaluru: ಬ್ರಾಸ್ಲೈಟ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

1-desss

ಹೊಸನಗರ; ಮಳೆ ರಜೆ ಕುರಿತು ನಕಲಿ‌ ಸರ್ಕಾರಿ ಆದೇಶ: ಪೊಲೀಸರಿಗೆ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R.Ashok

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ: ಆರ್‌.ಅಶೋಕ್‌

KNrajanna

ಹಾಸನದಲ್ಲಿ ಎಚ್‌.ಡಿ.ದೇವೇಗೌಡ, ರೇವಣ್ಣರನ್ನು ಹಾಡಿ ಹೊಗಳಿದ ಸಚಿವ ಕೆ.ಎನ್‌.ರಾಜಣ್ಣ!

Hassan: ಹೃದಯಾಘಾತದಿಂದ ಮೃತಪಟ್ಟವರ ಮನೆಗೆ ವೈದ್ಯರ ತಂಡ ಭೇಟಿ

Hassan: ಹೃದಯಾಘಾತದಿಂದ ಮೃತಪಟ್ಟವರ ಮನೆಗೆ ವೈದ್ಯರ ತಂಡ ಭೇಟಿ

heart attack

Hassan; ಎಲ್ಲ ಸಾವುಗಳಿಗೆ ಹೃದಯಾಘಾತವೇ ಕಾರಣವಲ್ಲ: ಹಾಸನ ಡಿಎಚ್‌ಒ

three more passed away of heart attacks in Hassan

Hassan: ಮುಂದುವರಿದ ಸಾವಿನ ಸರಣಿ.. ಹೃದಯಾಘಾತಕ್ಕೆ ಮತ್ತೆ ಮೂವರು ಬಲಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

1-aa-alka-raj

Wimbledon:ಅಲ್ಕರಾಜ್‌ ಹ್ಯಾಟ್ರಿಕ್‌ ಫೈನಲ್‌

ಬಿ.ಟಿ.ಲಲಿತಾ ನಾಯಕ್‌ ಕಾಂಗ್ರೆಸ್‌ಗೆ

ಕಾಂಗ್ರೆಸ್‌ ಸೇರಿದ ಮಾಜಿ ಸಚಿವೆ ಬಿಟಿ ಲಲಿತಾ ನಾಯಕ್

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.