ಯೋಧನ ಮನೆಗಿಲ್ಲ ಕರೆಂಟ್‌ ಭಾಗ್ಯ


Team Udayavani, Jan 2, 2021, 7:16 PM IST

ಯೋಧನ ಮನೆಗಿಲ್ಲ ಕರೆಂಟ್‌ ಭಾಗ್ಯ

ಸಕಲೇಶಪುರ: ತಮ್ಮ ಪ್ರಾಣದ ಹಂಗು ತೊರೆದು ದೇಶ ರಕ್ಷಣೆ ಮಾಡುವ ಯೋಧನ ಮನೆಗೆ ಎರಡು ವರ್ಷವಾದ್ರೂ ವಿದ್ಯುತ್‌ ಸಂಪರ್ಕ ಕಲ್ಪಿಸದೇ ಸೆಸ್ಕ್ನವರು ಸತಾಯಿಸುತ್ತಿದ್ದಾರೆ. ಇದರಿಂದ ಯೋಧನ ಕುಟುಂಬ ಕತ್ತಲೆಯಲ್ಲೇ ಜೀವನ ಸಾಗಿಸಬೇಕಾದ ಪರಿಸ್ಥಿತಿ ಇದೆ.

ತಾಲೂಕಿನ ಹೆತ್ತೂರು ಹೋಬಳಿ ಹೊಂಗಡಹಳ್ಳ ಸಮೀಪದ ಕೊಂತನ ಮನೆ ಗ್ರಾಮದ ಎ.ಒ.ಉಮೇಶ್‌ 9 ವರ್ಷದಿಂದ ಜಮ್ಮು ಮತ್ತು ಕಾಶ್ಮೀರದ ಪೂಂಛ್ ಸೆಕ್ಟರ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಎರಡೂವರೆ ವರ್ಷಗಳ ಹಿಂದೆ ಕುಟುಂಬದ ಅನುಕೂಲಕ್ಕಾಗಿ ಮನೆಯನ್ನು ನಿರ್ಮಿಸಿದ್ದು, ಅದರಲ್ಲಿ ವಯಸ್ಸಾದ ಅಪ್ಪ-ಅಮ್ಮ, ಹೆಂಡತಿ ಮತ್ತು ಚಿಕ್ಕ ಮಗು ವಾಸುತ್ತಿದೆ.

ಜೀವ ಭಯದಲ್ಲೇ ಜೀವನ: ಕೊಂತನಮನೆ ಗ್ರಾಮ ಪಶ್ಚಿಮಘಟ್ಟದ ತಪ್ಪಲಿನಲ್ಲಿದ್ದು, ಕಾಡು ಪ್ರಾಣಿಗಳ ಕಾಟ ಹೆಚ್ಚಿದೆ. ಯೋಧನ ಮನೆಅಕ್ಕಪಕ್ಕ ಯಾವುದೇ ಮನೆ ಇಲ್ಲ, ಇತ್ತ ವಿದ್ಯುತ್‌ ಸಂಪರ್ಕವೂ ಇಲ್ಲದ ಕಾರಣ, ಯೋಧನ ಕುಟುಂಬ ಕತ್ತಲೆಯಲ್ಲೇ ಜೀವ ಭಯದೊಂದಿಗೆ ಬದುಕು ದೂಡುವಂತಾಗಿದೆ. ಮನೆಗೆ ವಿದ್ಯುತ್‌ ಸಂಪರ್ಕ ಕೊಡಿ ಎಂದು ಸಂಬಂಧಪಟ್ಟ ಇಲಾಖೆಗೆ, ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ರೂ ಪ್ರಯೋಜನವಾಗಿಲ್ಲ. ಯೋಧ ಉಮೇಶ್‌ ಅವರ ಕುಟುಂಬದವರಿಗೆ ಅಷ್ಟೊಂದು ಜನ ಸಂಪರ್ಕ ಇಲ್ಲ, ಹೊರ ಪ್ರಪಂಚದ ಅರಿವೂ ಅಷ್ಟಕಷ್ಟೆ. ಸೌಲಭ್ಯಕ್ಕೆ ಯಾರ ಬಳಿ ಹೋಗಬೇಕೆಂಬ ಮಾಹಿತಿಯೂ ಅವರಿಗೆ ಸಿಗುತ್ತಿಲ್ಲ, ಸ್ಥಳೀಯ ಜನಪ್ರತಿನಿಧಿಗಳೂ ಅವರಿಗೆ ಸಹಕಾರ ನೀಡುತ್ತಿಲ್ಲ. ವಿದ್ಯುತ್‌ ಸಂಪರ್ಕಕ್ಕಾಗಿ ಅಲೆದಾಡಿ ಸುಸ್ತಾದ ಕುಟುಂಬ, ತಮ್ಮ ಹಣೆ ಬರಹ ಇದ್ದಂತೆ ಆಗಲಿ ಎಂದು ಕತ್ತಲಿನಲ್ಲೆ ಕಾಲ ಕಳೆಯುತ್ತಿದೆ.

ಸಂಪರ್ಕ ಇಲ್ಲ: ಹೊಂಗಡಹಳ್ಳ ಪಂಚಾಯ್ತಿ ಒಂದರಲ್ಲೇ ಜಗಾಟ, ಬಾಗೆಮನೆ, ವರದಹಳ್ಳಿ, ಜಗಾಟೆ ಸೇರಿ 31ಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್‌ ಸಂಪರ್ಕ ನೀಡಲು ಸೆಸ್ಕ್ ಕ್ರಮ ಕೈಗೊಳ್ಳಬೇಕಾಗಿದೆ. ಜನವಸತಿಪ್ರದೇಶದಿಂದ ದೂರದಲ್ಲಿರುವ ರೆಸಾರ್ಟ್‌, ಹೋಂಸ್ಟೇಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸುವ ಅಧಿಕಾರಿಗಳು, ದೇಶ ಕಾಯುವ ಯೋಧನ ಮನೆಗೆ, ಬಡ ರೈತರಿಗೆ ಕರೆಂಟ್‌ ವ್ಯವಸ್ಥೆ ಮಾಡದಿರುವುದು ವಿಪರ್ಯಾಸ.

ಯೋಧನ ಕುಟುಂಬ ಇರುವ ಮನೆ ಒಂಟಿ ಯಾಗಿದೆ. ಅವರು ವಿದ್ಯುತ್‌ ಸಂಪರ್ಕಕ್ಕೆ ಅರ್ಜಿ ಸಲ್ಲಿಸಿರುವುದುತಡವಾಗಿದೆ. ನಾನು ಇತ್ತೀಚೆಗಷ್ಟೆ ಇಲ್ಲಿಅಧಿಕಾರವಹಿಸಿಕೊಂಡಿದ್ದೇನೆ. ಕೂಡಲೇ ಅವರ ಮನೆಗೆವಿದ್ಯುತ್‌ ಸಂಪರ್ಕ ಒದಗಿಸಲು ಕ್ರಮ ಕೈಗೊಳ್ಳುತ್ತೇನೆ. ಭಾರತಿ, ಕಾರ್ಯಪಾಲಕ ಅಭಿಯಂತರರು, ಸೆಸ್ಕ್, ಸಕಲೇಶಪುರ ವಿಭಾಗ.

ದೇಶ ಕಾಯುವ ಯೋಧನ ಮನೆಗೆ ವಿದ್ಯುತ್‌ ನೀಡದ ಅಧಿಕಾರಿಗಳು, ಇನ್ನು ಜನಸಾಮಾನ್ಯರಿಗೆ ಎಷ್ಟರ ಮಟ್ಟಿಗೆಸೇವೆ ಒದಗಿಸುತ್ತಾರೆ. ಕೂಡಲೇ ಸಂಬಂಧಪಟ್ಟ ಸೆಸ್ಕ್ ಎಂಜಿನಿಯರ್‌ ಕ್ರಮಕೈಗೊಳ್ಳಬೇಕಿದೆ. ಚಿದನ್‌, ಹೊಂಗಡಹಳ್ಳ ಗ್ರಾಮಸ್ಥ.

ಅರ್ಜಿ ಸಲ್ಲಿಸಿ ಹಲವು ತಿಂಗಳಾಗಿದ್ರೂ ವಿದ್ಯುತ್‌ ಸಂಪರ್ಕ ಸಿಕ್ಕಿಲ್ಲ. ಸದ್ಯ ಜಮ್ಮು – ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಮನೆಯವರ ಪರಿಸ್ಥಿತಿ ನೋಡಿದ್ರೆ ಆತಂಕ ಕಾಡುತ್ತದೆ. ಉಮೇಶ್‌, ಯೋಧ.

 

-ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.