ಪೇಜಾವರ ಶ್ರೀಗಳದ್ದು ಸಲಹೆ, ಟೀಕೆಯಲ್ಲ: ಡಿವಿಎಸ್
Team Udayavani, Jun 5, 2018, 6:20 AM IST
ಹಾಸನ: “ಪೇಜಾವರ ಶ್ರೀಗಳು ಕೇಂದ್ರ ಸರ್ಕಾರದ ಸಾಧನೆಯ ಬಗ್ಗೆ ಪ್ರತಿಕ್ರಿಯಿಸಿರುವುದನ್ನು ಟೀಕೆ, ಅಸಮಾಧಾನ ಎಂದು ಪರಿಗಣಿಸುವುದಿಲ್ಲ. ಅವರ ಸಲಹೆ, ಸೂಚನೆ ಎಂದು ಪರಿಗಣಿಸಿ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಲು ಪ್ರಯತ್ನಿಸುತ್ತೇವೆ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಳೆದ ನಾಲ್ಕು ವರ್ಷಗಳ ಸಾಧನೆಯ ಪಟ್ಟಿಯನ್ನು ಜನ ಸಾಮಾನ್ಯರ ಮುಂದೆ ಮಂಡಿಸಿ ಅವರಿಂದ ಮತ್ತಷ್ಟು ಸಲಹೆ ಸೂಚನೆಗಳನ್ನು ಪಡೆದು ಕಾರ್ಯೋನ್ಮುಖರಾಗಲು ಪ್ರಧಾನಿ ಮೋದಿ ಸೂಚಿಸಿದ್ದಾರೆ. ಹಾಗಾಗಿ ಪಕ್ಷದ ಎಲ್ಲಾ ಮುಖಂಡರೂ ಅವರವರ ವ್ಯಾಪ್ತಿಯಲ್ಲಿ ಸರ್ಕಾರದ ಸಾಧನೆ, ಚುನಾವಣೆಯ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದ ವಿವರಗಳನ್ನುಮಾಧ್ಯಮಗಳ ಮೂಲಕ ಜನ ಸಾಮಾನ್ಯರಿಗೆ ತಲಪಿಸುತ್ತಿದ್ದಾರೆ. ಹಾಗೆಯೇ ಪೇಜಾವರ ಶ್ರೀಗಳಿಂದಲೂ ಸರ್ಕಾರದ ಮುಂದಿನ ನಡೆ ಹೇಗಿರಬೇಕೆಂಬ ಸೂಚನೆ ಬಂದಿದೆ. ಅದನ್ನು ಸಕಾರಾತ್ಮಕವಾಗಿ ಪರಿಣಿಸುತ್ತೇವೆ ಎಂದು ಹೇಳಿದರು.
ಹಣ್ಣು ಮಾಗಿದೆ , ಬೀಳುವುದ ಕಾಯ್ತಿದ್ದೇವೆ: ಸಮ್ಮಿಶ್ರ ಸರ್ಕಾರಕ್ಕೆ ನಿಪ ವೈರಸ್ ಹರಡುತ್ತಿದ್ದು, ಈಗಾಗಲೇ ಮಾವಿನ ಹಣ್ಣಿನಂತೆ ಸಮ್ಮಿಶ್ರ ಸರ್ಕಾರ ಮಾಗಿದೆ. ಯಾವ ಸಂದರ್ಭದಲ್ಲಾದರೂ ಕೆಳಗೆ ಬೀಳಬಹುದು. ಆನಂತರ ಬಿಜೆಪಿ ಸರ್ಕಾರ ರಚನೆ ಮಾಡಿ ಉತ್ತಮ ಆಡಳಿತ ನೀಡಲಿದೆ ಎಂದು ಡಿ.ವಿ.ಸದಾನಂದಗೌಡ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ