ಪಶು ಸಂಜೀವಿನಿ ಸೇವೆಗೆ ಚಾಲನೆ
Team Udayavani, Sep 6, 2020, 1:39 PM IST
ಹಾಸನ: ಜಾನುವಾರುಗಳು ಕಾಯಿಲೆಗಳಿಗೆ ತುತ್ತಾದಾಗ ಕೇವಲ ಒಂದು ಕರೆ ಮಾಡಿದರೆ ಸಾಕು, ಪಶು ಸಂಜೀನಿ ವಾಹನವು ರೈತರ ಮನೆಯ ಬಾಗಿಲಿಗೆ ಬಂದು ಚಿಕಿತ್ಸೆ ಒದಗಿಸಲಿದೆ ಎಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಪಶು ಸಂಗೋಪನಾ ಇಲಾಖೆಯಿಂದ ಆರಂಭಿಸಿರುವ ಪಶು ಸಂಜೀನಿ ವಾಹನಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿ, 200 ಕೆ.ಜಿ.ಗೆ ಒಳಪಟ್ಟ ಜಾನುವಾರುಗಳಿಗೆ ಈ ವಾಹನದಲ್ಲಿಯೇ ಶಸ್ತ್ರ ಚಿಕಿತ್ಸೆ ಮಾಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.
ರೈತರಿಗೆ ಪಶು ಸಂಜೀನಿ ವಾಹನದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಅದಕ್ಕಾಗಿ ಪಶು ಸಂಜೀವಿನಿ ಕುರಿತು ಮಾಹಿತಿಯನ್ನೊಳಗೊಂಡ ಕರ ಪತ್ರಗಳನ್ನು ಮುದ್ರಿಸಿ ಸಾರ್ವಜನಿಕರಿಗೆ ಹಂಚುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.ಈಗ ಒಂದು ವಾಹನ ಕಾರ್ಯಾಚರಿಸಲಿದ್ದು, ರೈತರಿಂದ ಬರುವ ಬೇಡಿಕೆ ಆಧರಿಸಿ ಇನ್ನೂ ಹೆಚ್ಚಿನ ಆ್ಯಂಬುಲೆನ್ಸ್ಗಳ ವ್ಯವಸ್ಥೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ಶಾಸಕ ಪ್ರೀತಂ ಜೆ.ಗೌಡ, ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಪಂ ಸಿಇಒ ಬಿ.ಎ.ಪರಮೇಶ್, ಪಶು ವೈದ್ಯಾಧಿಕಾರಿ ಡಾ.ನಿತೀಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್