ಕ್ರೀಡೆಯಿಂದ ಸಾಧನೆ ಸುಲಭ


Team Udayavani, Oct 5, 2019, 3:00 AM IST

krideinda

ಅರಸೀಕೆರೆ: ವಿದ್ಯಾರ್ಥಿಗಳಿಗೆ ಶಿಕ್ಷಣ ಬದುಕಿಗೆ ಬೆಳಕಾದರೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಾಧನೆ ಬದುಕನ್ನು ವಿಕಾಸಗೊಳಿಸುತ್ತದೆ ಎಂದು ಹಾಸನ ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಕಿವಿಮಾತು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಸನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಆದಿಚುಂಚನಗಿರಿ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ನಗರದ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಶುಕ್ರವಾರ ನಡೆದ 2019-20ನೇ ಸಾಲಿನ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಾಲಿಬಾಲ್‌ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಗೆ ಉತ್ತಮ ವೇದಿಕೆ: ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಗಳ ದಿವ್ಯ ಸಂಕಲ್ಪದಂತೆ ನಾಡಿನ ಉದ್ದಗಲಕ್ಕೂ ಇರುವ ಚುಂಚನಗಿರಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕದ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ಆಸಕ್ತಿ ಗುರುತಿಸಿ ಉತ್ತಮ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ ಎಂದರು.

ಶ್ರೀಗಳ ಕನಸು ನನಸು: ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಎಲ್ಲಾ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ. ಅಲ್ಲದೇ, ವಿದ್ಯಾಭ್ಯಾಸ ಮಾಡಿದ ಶಾಲೆಗೂ, ಪೋಷಕರು ಹಾಗೂ ಊರಿಗೆ ಕೀರ್ತಿ ತರುವ ಮೂಲಕ ಬಾಲಗಂಗಾಧರನಾಥ ಸ್ವಾಮೀಜಿಗಳ ಕನಸು ನನಸು ಮಾಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಕ್ರೀಡಾ ಸಾಧನೆ ಮಾಡಿ: ದೇಶದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕ್ರೀಡಾಪಟುಗಳು ಯಶಸ್ಸು ಕಾಣಲು ಸಾಧ್ಯವಾಗುತ್ತಿಲ್ಲ. ಶಾಲಾ ಕಾಲೇಜು ಮಟ್ಟಗಳಲ್ಲಿ ನಡೆಯುವ ಆಟೋಟ ಸ್ಪರ್ಧೆ ಹಾಗೂ ಕ್ರೀಡಾಕೂಟಗಳ ವೇದಿಕೆಯನ್ನು ಬಳಸಿಕೊಂಡು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಬಾಂಧವ್ಯ ವೃದ್ಧಿ: ಡಿವೈಎಸ್‌ಪಿ ನಾಗೇಶ್‌ ಮಾತನಾಡಿ, ವಿದ್ಯಾರ್ಥಿಗಳು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಹವ್ಯಾಸ ಕೇವಲ ಮನರಂಜನೆಗಾಗಿ ಅಲ್ಲ. ವಿದ್ಯಾರ್ಥಿಗಳ ನಡುವೆ ಮನಸ್ಸು ಮನಸ್ಸುಗಳ ಬೆಸೆಯುವ ಬಾಂಧವ್ಯವಾಗಿ ಕ್ರೀಡಾಕೂಟಗಳು ಬೆಳೆಯಬೇಕಾಗಿದೆ ಎಂದು ಹೇಳಿದರು. ಪ್ರತಿಯೊಂದು ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾಪಟುಗಳು ಸಕ್ರಿಯವಾಗಿ ಭಾಗವಹಿಸುವುದೇ ಮುಖ್ಯ. ಅದರಲ್ಲೂ ಕ್ರೀಡೆಗಳಲ್ಲಿ ಹೆಚ್ಚಿನ ಸ್ಪೂರ್ತಿಯಿಂದ ಆಟವಾಡುವ ಮನಸ್ಥಿತಿ ಬೆಳೆಸಿಕೊಂಡರೆ ಮಾತ್ರ ಹೆಚ್ಚಿನ ಸಾಧನೆ ಮಾಡಲು ಸುಲಭ ಎಂದು ತಿಳಿಸಿದರು.

ಸಾಧನೆ ಮೆಟ್ಟಿಲು ಹತ್ತಿ: ಅಂತಾರಾಷ್ಟ್ರೀಯ ವಾಲಿಬಾಲ್‌ ಕ್ರೀಡಾಪಟು ಪೃಥ್ವಿರಾಜ್‌ ಮಾತನಾಡಿ, ಕ್ರೀಡಾಪಟು ದೈಹಿಕವಾಗಿ ಅಲ್ಲದೆ ಮಾನಸಿಕವಾಗಿಯೂ ಸದೃಢತೆ ಬೆಳೆಸಿಕೊಂಡಾಗ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮೆಟ್ಟಿಲು ಹತ್ತಲು ಸಾಧ್ಯ. ಪಂದ್ಯಗಳಲ್ಲಿ ಪ್ರತಿ ಸ್ಪರ್ಧಿಗಳು ನೀಡುವ ಪ್ರತಿರೋಧದ ನಡುವೆಯೂ ಎದುರಾಗುವ ಸವಾಲುಗಳನ್ನು ಮೆಟ್ಟಿನಿಲ್ಲುವ ಕಲೆಯನ್ನು ಕರಗತ ಮಾಡಿಕೊಂಡ ಆಟಗಾರನಿಗೆ ಮಾತ್ರ ಸಾಧನೆ ಕಿರೀಟ ಮುಡಿಗೇರುತ್ತದೆ. ಅಲ್ಲದೇ, ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯ-ಕೇಂದ್ರ ಸರ್ಕಾರಗಳು ಗುರುತಿಸಿ ಗೌರವಿಸುವುದಲ್ಲದೇ ಉದ್ಯೋಗ ಅವಕಾಶವನ್ನು ಕಲ್ಪಿಸಿಕೊಡಲಿವೆ ಎಂದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಆರ್‌.ಅನಂತ್‌ಕುಮಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್‌ ಕುಮಾರ್‌, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಜಯರಾಂ, ಕಾಲೇಜಿನ ಪ್ರಾಂಶುಪಾಲ ಲಿಂಗರಾಜ್‌, ರಾಜ್ಯ ಅಥ್ಲೆಟಿಕ್‌ ಸಂಸ್ಥೆ ಹಿರಿಯ ಉಪಾಧ್ಯಕ್ಷ ಎಚ್‌.ಟಿ.ಮಹದೇವ್‌, ತಾಲೂಕು ನೌಕರರ ಸಂಘದ ಅಧ್ಯಕ್ಷ ಬಸವರಾಜು, ನಗರಸಭೆ ಮಾಜಿ ಅಧ್ಯಕ್ಷ ಮೋಹನ್‌ಕುಮಾರ್‌, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕಲ್ಯಾಣ್‌ಕುಮಾರ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಸದಾನಂದ ಮೂರ್ತಿ, ತಾಲೂಕು ದೈಹಿಕ ಪರಿವೀಕ್ಷಕ ಬಸವರಾಜ್‌, ಆದಿಚುಂಚನಗಿರಿ ಶಾಲೆ ದೈಹಿಕ ಶಿಕ್ಷಕ ನಾಗೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಇನ್ನಿತರ ಕ್ರೀಡೆಗೂ ಪ್ರೋತ್ಸಾಹ ಅಗತ್ಯ: ಭಾರತದ 130 ಕೋಟಿ ಜನಸಂಖ್ಯೆಯಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿಗೇನೂ ಕೊರತೆ ಇಲ್ಲ, ಆದರೆ ಉತ್ತಮ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಸರ್ಕಾರ ಹಾಗೂ ಸಂಘ ಸಂಸ್ಥೆಗಳು ನಿರಾಸಕ್ತಿ ವಹಿಸುತ್ತಿವೆ. ಕ್ರಿಕೆಟ್‌ ಕ್ರೀಡೆಗೆ ಕೊಟ್ಟ ಪ್ರಾಮುಖ್ಯತೆಯನ್ನು ಇನ್ನಿತರ ಕ್ರೀಡೆಗಳಿಗೆ ನೀಡುತ್ತಿಲ್ಲ ಎಂದು ಹಾಸನ ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ತಿಳಿಸಿದರು.

ಟಾಪ್ ನ್ಯೂಸ್

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.