ಪಠ್ಯೇತರ ಚಟುವಟಿಕೆಯಿಂದ ವ್ಯಕಿತ್ವ ವಿಕಸನ

ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಸಹಕಾರಿ

Team Udayavani, May 14, 2019, 9:54 AM IST

hasan-tdy-3..

ಅರಸೀಕೆರೆ: ಪಠ್ಯ ಪುಸ್ತಕದ ವಿದ್ಯಾ ಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆ ಗಳಿಂದ ಮಕ್ಕಳ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಮಾಡಾಳು ಗ್ರಾಮದ ನಿರಂಜನ ಪೀಠದ ರುದ್ರಮುನಿ ಸ್ವಾಮೀಜಿ ತಿಳಿಸಿದರು.

ತಾಲೂಕಿನ ಕಣಕಟ್ಟೆ ಹೋಬಳಿಯ ಮಾಡಾಳು ಗ್ರಾಮದ ನಿರಂಜನ ಪೀಠದ ಆವರಣದಲ್ಲಿ ಆಯೋಜಿಸಿದ್ದ 37ನೇ ಮಾಸಿಕ ಶಿವಾನುಭವ ಹಾಗೂ ಬಸವ ಚೇತನ ಕಾನ್ವೆಂಟಿನ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕ್ರಿಯಾತ್ಮಕ ಚಟುವಟಿಕೆ: ಸ್ವಾಮೀಜಿ ಮಕ್ಕಳಿಗೆ ಪಠ್ಯಪುಸ್ತಕದ ವಿದ್ಯಾಭ್ಯಾಸ ಎಷ್ಟು ಮುಖ್ಯವಾಗಿರುತ್ತದೆಯೋ ಅಷ್ಟೇ ಅವರಲ್ಲಿನ ಕ್ರಿಯಾತ್ಮಕ ಕಲಿಕೆಯಲ್ಲಿ ಪಠ್ಯೇತರ ಚಟುವಟಿಕೆಗಳನ್ನು ಸಮ್ಮಿಲನ ಮಾಡಿಕೊಂಡು ಶಿಕ್ಷಕರು ಕಲಾತ್ಮಕವಾಗಿ ಕಲಿಸಿದರೆ ಮಕ್ಕಳ ಮನಸ್ಸಿನ ಮೇಲೆ ಉತ್ತಮ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ಮಕ್ಕಳಲ್ಲಿನ ಸುಪ್ತ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಗಳು ಪ್ರೋತ್ಸಾಹದಾಯಕವಾಗಿದೆ. ನಗರ ಪ್ರದೇಶದಲ್ಲಿ ಮಕ್ಕಳಿಗೆ ಪೂರಕ ವಾದ ಸಂಸ್ಕೃತಿಕ ಕಾರ್ಯಕ್ರಮ ಹಾಗೂ ಶಿಬಿರಗಳು ಜರುಗುತ್ತವೆ. ಇದರಿಂದ ಪೋಷಕರು ಮಕ್ಕಳಿಗಾಗಿ ದೂರದ ನಗರಗಳಿಗೆ ತೆರಳುತ್ತಾರೆ. ಇದೇ ಮೊದಲ ಬಾರಿಗೆ ಬಸವ ಚೇತನ ಕಾನ್ವೆಂಟಿನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ ಹಮ್ಮಿಕೊಂಡಿದ್ದು 18 ದಿನಗಳಿಂದ ನಡೆದ ಕಾರ್ಯಕ್ರಮದಲ್ಲಿ ಮಕ್ಕಳು ಪಾಲ್ಗೊಂಡು ಅನೇಕ ರೀತಿ ಕಲಿತು ತಮ್ಮ ಪೋಷಕರ ಮುಂದೆ ಯಶಸ್ವಿ ಪ್ರದರ್ಶನ ನೀಡಿದ್ದಾರೆ ಎಂದರು.

ಸಮಾನತೆಯ ಹರಿಕಾರ: ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟು ಎಲ್ಲರೂ ಸಮಾನರೂ ಎಂದು ಸಾರಿದ 12ನೇ ಶತಮಾನದ ಅಣ್ಣ ಬಸವಣ್ಣನವರ ಚಿಂತನೆಗಳು ಸರ್ವ ಕಾಲಕ್ಕೂ ಪ್ರಸ್ತುತವಾಗಿದೆ. ಪ್ರತಿ ಯೊಬ್ಬರ ಕೆಲಸಕ್ಕೂ ತನ್ನದೇ ಆದ ಮಾನ್ಯತೆ ಇರುತ್ತದೆ. ಒಬ್ಬರನ್ನೊಬ್ಬರು ಗೌರವಿಸುತ್ತಾ ಪ್ರೀತಿಯಿಂದ ಕಾಣ ಬೇಕು. ಅಜ್ಞಾನವೆಂಬ ಕತ್ತಲನ್ನು ತೊಡೆದುಹಾಕಲು ಬಸವಣ್ಣ ಅನು ಸರಿಸಿದ ಮಾರ್ಗ ಮತ್ತು ತೋರಿದ ದಾರಿಯಿಂದ ಶತಮಾನಗಳು ಕಳೆದರೂ ಜನರ ಹೃದಯದಲ್ಲಿ ಬಸ ವಣ್ಣ ಪೂಜ್ಯ ಸ್ಥಾನವನ್ನು ಪಡೆದಿದ್ದಾರೆ ಎಂದು ಹೇಳಿದರು.

ಮಕ್ಕಳಿಗೆ ಚೈತನ್ಯ: ಜಿಪಂ ಸದಸ್ಯ ಮಾಡಾಳು ಎಂ.ಎಸ್‌.ವಿ. ಸ್ವಾಮಿ ಮಾತ ನಾಡಿ, ಬೇಸಿಗೆ ಶಿಬಿರಗಳು ಮಕ್ಕಳಿಗೆ ಚೈತನ್ಯ ತುಂಬುತ್ತವೆ ಮತ್ತು ವಿದ್ಯಾರ್ಥಿ ಗಳಲ್ಲಿರುವ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಬೇಸಿಗೆ ಶಿಬಿರದಿಂದ ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಹೊರಹೊಮ್ಮಲು ಹಾಗೂ ಮಕ್ಕಳು ವೇದಿಕೆಯ ಮೇಲೆ ನಿಂತು ನಿಂತು ಸುಲಲಿತವಾಗಿ ಮಾತನಾಡುವು ದನ್ನು ಕಲಿಯಲು ಇಂತಹ ವೇದಿಕೆ ಗಳಿಂದ ಅವಕಾಶ ಪಡೆದುಕೊಳ್ಳಿ.ಈ ವಯಸ್ಸಿನ ಮಕ್ಕಳು ಕಲಿತಿರುವ ಚಟುವಟಿಕೆಗಳ ಬಗ್ಗೆ ತಿಳಿಸಿ ಮುಂದಿನ ಭಾವಿ ಪ್ರಜೆಗಳಾಗಿ ನಿರ್ಮಿಸುವ ಶಕ್ತಿ ಬೇಸಿಗೆ ಶಿಬಿರದಲ್ಲಿ ಕಲಿಯುವುದು ಬಹಳಷ್ಟಿದೆ ಎಂದು ಹೇಳಿದರು.

ಇಂದಿನ ಯುವ ಪೀಳಿಗೆ ಟೀವಿ ಹಾಗೂ ಮೊಬೈಲ್ಗಳಿಗೆ ಮಾರು ಹೋಗಿರುವುದು ಆತಂಕದ ವಿಚಾರ. ಇದರಲ್ಲಿ ಒಳ್ಳೆಯದು ಕೆಟ್ಟದ್ದು ಎರಡು ಇದ್ದು ಒಳ್ಳೆಯದನ್ನು ತಮ್ಮ ಬದುಕಿಗೆ ಅಳವಡಿಸಿಕೊಳ್ಳಿ ಎಂದು ವಿದ್ಯಾರ್ಥಿ ಗಳಿಗೆ ಕಿವಿಮಾತು ಹೇಳಿದರು.ರಾಜ್ಯ ಪ್ರಶಸ್ತಿ ವಿಜೇತ ರಾಂಪುರ ಆರ್‌.ಎಸ್‌ತಮ್ಮಯ್ಯ ಹಾಡಿದ ಲಾವಣಿ ಮತ್ತು ಸುಜನ್ಯ ಜನಪದ ಗೀತೆ ಪ್ರೇಕ್ಷಕರನ್ನು ರಂಜಿಸಿತು.

ಇದೇ ವೇದಿಕೆಯಲ್ಲಿ ಸಿರಿಗೆರೆಯಿಂದ ಕಳೆದ 18 ದಿನಗಳಿಂದ ಮಲ್ಲಕಂಬ ಹಾಗೂ ಮಲ್ಲಿಹಗ್ಗ ತರಬೇತಿ ನೀಡಿ ಪೋಷಕರ ಎದುರಿಗೆ ಪ್ರದರ್ಶನ ನೀಡಿದ್ದು ಮಾತ್ರ ಪೋಷಕರಲ್ಲಿ ಮತ್ತು ಜನರಲ್ಲಿ ರೋಮಾಂಚನಗೊಳಿಸಿತು.

ಚಿತ್ರ ಕಲಾವಿದ ಹರೀಶ್‌, ಶೋಭಾರಾಣಿ ಮುಖಂಡರಾದ ಬಸವರಾಜ್‌, ತಿಪ್ಪೆರುದ್ರಸ್ವಾಮಿ,ಎಂ.ಜಿ. ಯೋಗೀಶ್‌, ಎಂ.ಸಿ. ಚಂದ್ರ ಶೇಖರ್‌, ಎಂಎಸ್‌.ಪುಟ್ಟಮಲ್ಲಪ್ಪ ವೈ.ಎಂ.ಚನ್ನಯ್ಯ, ದಿಬ್ಬೂರು ಪ್ರಕಾಶ್‌ಹರೆಳಕಟ್ಟೆ ರಾಜಯ್ಯ, ಮುಖ್ಯ ಶಿಕ್ಷಕ ಸತೀಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.