ರಸ್ತೆ ಅಭಿವೃದ್ಧಿಗೆ ಅಧಿಕಾರಿಗಳ ಮೀನ ಮೇಷ


Team Udayavani, Nov 6, 2019, 3:00 AM IST

raste-abivruddi

ಅರಕಲಗೂಡು: ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಒಂದಾದ ಸಾಲಗೇರಿ ರಸ್ತೆಯೂ ವಾಹನಗಳ ದಟ್ಟಣೆ ಅಧಿಕವಾಗಿದ್ದು ಅಪಘಾತಗಳ ಸಂಖ್ಯೆ ಅಧಿಕವಾಗುತ್ತಿದೆ. ರಸ್ತೆ ಅಭಿವೃದ್ಧಿಗೆ ಅಧಿಕಾರಿಗಳ ಮೀನ ಮೇಷ, ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.

ರಸ್ತೆ ಅಭಿವೃದ್ಧಿಗೆ 2.58 ಕೋಟಿ ರೂ. ಬಿಡುಗಡೆ: ರಸ್ತೆ 12ರಿಂದ 15 ಅಡಿ ವಿಸ್ತೀರ್ಣ ಹೊಂದಿದ್ದು, ವಾಹನಗಳ ಸಂಚಾರಕ್ಕೆ ವಾಸದ ಮನೆಗಳೇ ಅಡ್ಡಿಯಾಗಿವೆ. ಇದನ್ನು ಮನಗಂಡ ಮಾಜಿ ಸಚಿವ ಎ.ಮಂಜು ರಸ್ತೆಯ ಅಭಿವೃದ್ಧಿಗೆ ಲೋಕಪಯೋಗಿ ಇಲಾಖೆಯಿಂದ 900 ಮೀಟರ್‌ ವಿಸ್ತೀರ್ಣದ ರಸ್ತೆಗೆ 2.58 ಕೋಟಿ ಬಿಡುಗಡೆ ಮಾಡಿಸಿದರೂ, ಕಾಮಗಾರಿ ಮಾತ್ರ ಆರಂಭವಾಗಿಲ್ಲ.

ರಸ್ತೆ ವಿಸ್ತಣೆಗೆ ಮೂಡದ ಒಮ್ಮತ: ಎ.ಮಂಜು ಅವರ ಆಡಳಿತ ಮುಕ್ತಾಯದ ನಂತರ ಹೊಸದಾಗಿ ಆಯ್ಕೆಯಾದ ಶಾಸಕ ಎ.ಟಿ. ರಾಮಸ್ವಾಮಿ ಅವರು ರಸ್ತೆ ಅಭಿವೃದ್ಧಿಗಾಗಿ ನಿವಾಸಿಗಳೊಂದಿಗೆ ಹಲವಾರು ಸಭೆಗಳನ್ನು ನಡೆಸಿದರೂ ರಸ್ತೆಯ ವಿಸ್ತೀರ್ಣದ ಬಗ್ಗೆ ಒಮ್ಮತಕ್ಕೆ ಬರದ ಕಾರಣ ಸರ್ಕಾರದ ಜಾಗದ ಗಡಿ ಗುರುತಿಸಿ ಸ್ಥಳ ತೆರವುಗೊಳಿಸಲು ಆದೇಶಿಸಿದರು. ಸರ್ಕಾರದ ಜಾಗವನ್ನು ಒತ್ತುವರಿ ಮಾಡಿರುವ ನಿವಾಸಿಗಳಿಗೆ ಪಟ್ಟಣ ಪಂಚಾಯಿತಿಯ ಮೂಲಕ ಮೂರು ನಾಲ್ಕು ನೋಟೀಸ್‌ಗಳನ್ನು ನೀಡಿದರೂ ಈವರೆಗೂ ರಸ್ತೆ ಒತ್ತುವರಿ ತೆರವುಗೊಳಿಸಿಲ್ಲ.

ನಿವಾಸಿಗಳು, ಅಧಿಕಾರಿಗಳ ನಡುವೆ ಜಟಾಪಟಿ: ಸಾಲಗೇರಿ ರಸ್ತೆ ಅಭಿವೃದ್ಧಿಗೆಂದು ಮಾಜಿ ಸಚಿವ ಎ.ಮಂಜು ರವರು ಹಣ ಬಿಡುಗಡೆ ಮಾಡಿಸಿ ಕಾಮಗಾರಿ ಮಾಡಲು ಮುಂದಾದರು. ಆದರೆ ಸಾಲಗೇರಿ ರಸ್ತೆಯ ಎರಡೂ ಬದಿಯಲ್ಲಿರುವ ನಿವಾಸಿಗಳು ತಮ್ಮ ಮನೆಯನ್ನು ತೆರವುಗೊಳಿಸಲು ನಿರಾಕರಿಸಿದ ಕಾರಣ ಅವರುಗಳೊಂದಿಗೆ ಹಲವಾರು ಸಭೆಗಳನ್ನ ನಡೆಸಿದರೂ ಪ್ರಯೋಜನವಾಗಿಲ್ಲ.

ಸಾಲಗೇರಿ ರಸ್ತೆಯ ನಿವಾಸಿಗಳಿಗೆ ನ್ಯಾಯಾಲಯದಿಂದ ನೋಟೀಸ್‌ ನೀಡಲು ಪಟ್ಟಣ ಪಂಚಾಯಿತಿ ಲಕ್ಷಾಂತರ ಹಣವನ್ನ ಕಳೆದರೂ ಕಾಮಗಾರಿ ಮುಂದಾಗದಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪಟ್ಟಣ ಪಂಚಾಯಿತಿ ಲೋಕೋಪಯೋಗಿ ಇಲಾಖೆಗಳ ನಡುವೆ ಸಾಲಗೇರಿ ರಸ್ತೆಯ ನಿವಾಸಿಗಳ ಜಟಾಪಟಿ ಇನ್ನೂ ನಿಂತಿಲ್ಲ. ಇವೆಲ್ಲವನ್ನು ಸರಿಪಡಿಸುವುದು ಯಾವಾಗ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.

ರಸ್ತೆಯ ಅಭಿವೃದ್ಧಿಯ ವಿಷಯದಲ್ಲಿ ಶಾಸಕರು ಲೋಕಪಯೋಗಿ ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಸ್ತೆಯ ಅಭಿವೃದ್ಧಿಗೆ ಕಾನೂನು ಪ್ರಕಾರ ಮುಂದಾಗುವಂತೆ ತಿಳಿಸುವ ಮೂಲಕ ನಿವಾಸಿಗಳಿಗೆ ತೊಂದರೆಯಾಗದಂತೆ ರಸ್ತೆಯ ವಿಸ್ತೀರ್ಣವನ್ನ 10.5 ಮೀ.ರಸ್ತೆಯನ್ನ ಅಗಲೀಕರಣ ಮಾಡುವಂತೆ ಈಗಾಗಲೇ ತಿಳಿಸಿದರೂ ಶಾಸಕರ ಮಾತಿಗೂ ಬೆಲೆ ಇಲ್ಲದಂತಾಗಿದೆ.

ರಸ್ತೆ ಅಭಿವೃದ್ಧಿಗೆ ಟೆಂಡರ್‌: ಸಾಲಗೇರಿ ರಸ್ತೆಯ ಅಭಿವೃದ್ಧಿ ಕುರಿತು ಮಾಹಿತಿ ನೀಡಿರುವ ಲೋಕಪಯೋಗಿ ಇಲಾಖೆ ಅಭಿಯಂತರ ರಾಜಶೇಖರ್‌, ರಸ್ತೆ ಅಭಿವೃದ್ಧಿಗೆ ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ಗುತ್ತಿಗೆದಾರರನ್ನು ನಿಗದಿಗೊಳಿಸಲಾಗಿದೆ. ಈ ರಸ್ತೆಯ ಅಭಿವೃದ್ಧಿಗೆ 2.58 ಕೋಟಿ ಹಣ ಬಿಡುಗಡೆಯಾಗಿದೆ. ಅಲ್ಲಿಯ ನಿವಾಸಿಗಳು ಮನೆಗಳನ್ನು ತೆರವುಗೊಳಿಸದ ಕಾರಣ ರಸ್ತೆ ಅಭಿವೃದ್ಧಿ ಕಾರ್ಯವಿಳಂಬವಾಗುತ್ತಿದೆ. ಪಟ್ಟಣ ಪಂಚಾಯಿತಿಯವರು ಎಂದು ಒತ್ತುವರಿ ತೆರವುಗೊಳಿಸುವರೋ ಅಂದಿನಿಂದ 6 ತಿಂಗಳೊಳಗೆ ಕಾಮಗಾರಿ ಮುಗಿಸುವುದಾಗಿ ತಿಳಿಸಿದರು.

ಸಾಲಗೇರಿ ರಸ್ತೆ ಬದಿಯ ನಿವಾಸಿಗಳಿಗೆ ಮನೆ ತೆರವುಗೊಳಿಸುವಂತೆ ನೋಟೀಸ್‌ ನೀಡಲಾಗಿದೆ. ಅಲ್ಲಿಯ ನಿವಾಸಿಗಳು ಮಳೆಗಾಲ ಇರುವ ಕಾರಣ ಮನೆಗಳನ್ನ ತೆರವುಗೊಳಿಸಲು ಸಾಧ್ಯವಾಗುತ್ತಿಲ್ಲ ಅದ್ದರಿಂದ ಮಳೆಗಾಲ ಕಳೆಯುವವರೆಗೆ ಕಾಲವಕಾಶ ಕೇಳಿದ್ದಾರೆ. ಮಳೆ ಕಡಿಮೆಯಾದ ನಂತರ ನಿವಾಸಿಗಳ ಮನೆ ತೆರವಿಗೆ ಮುಂದಾಗುತ್ತೇವೆ.
-ಸುರೇಶ್‌ಬಾಬು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.