ಕಾವ್ಯ ಭ್ರಮೆಯಲ್ಲ ಸತ್ಯದ ಅಭಿವ್ಯಕ್ತಿ


Team Udayavani, Aug 5, 2019, 3:00 AM IST

kavyaa

ಹಾಸನ: ಕಾವ್ಯವು ಭ್ರಮೆಯಲ್ಲ. ಅದು ಸತ್ಯದ ಅಭಿವ್ಯಕ್ತಿ ಎಂದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್‌ (ಸಿಪಿಕೆ) ಅಭಿಪ್ರಾಯಪಟ್ಟರು. ನಗರದ ಸಂಸ್ಕೃತ ಭವನದಲ್ಲಿ ನಗರದ ಮಾಣಿಕ್ಯ ಪ್ರಕಾಶನವು ಭಾನುವಾರ ಹಮ್ಮಿಕೊಂಡಿದ್ದ 3ನೇ ವರ್ಷದ ರಾಜ್ಯ ಮಟ್ಟದ ಕವಿ-ಕಾವ್ಯ ಸಂಭ್ರಮ ಹಾಗೂ ಕಾವ್ಯ ಮಾಣಿಕ್ಯ ರಾಜ್ಯ ಪ್ರಶಸ್ತಿ, ಜನ್ನ ಕಾವ್ಯ ಪ್ರಶಸ್ತಿ, ಕಾಯಕ ಮಾಣಿಕ್ಯ ಪ್ರಶಸ್ತಿ, ಹೊಯ್ಸಳ ಸಾಹಿತ್ಯ ಪ್ರಶಸ್ತಿ, ಹೊಯ್ಸಳ ಸಾಂಸ್ಕೃತಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ವಚನ ಸಾಹಿತ್ಯದ ಅನುಸಂಧಾನ ಅಗತ್ಯ: ಭ್ರಮೆಯಿಂದ ಕಾವ್ಯಗಳು ರಚನೆಯಾಗುತ್ತವೆ ಎಂದು ಕೆಲವರು ಪರಿಗಣಿಸಿಸುತ್ತಾರೆ. ಆದರೆ ಕಾವ್ಯ ಭ್ರಮೆ ಅಲ್ಲ. ಸತ್ಯದ ಅಭಿವ್ಯಕ್ತಿ ಕಾವ್ಯಗಳಲ್ಲಿ ಇರುತ್ತದೆ. ಕಾವ್ಯಗಳಲ್ಲಿ ನಾವು ಕಾಣುವುದು ಸತ್ಯ. ವಚನಗಾರರು ನಮಗೆ ಪ್ರಜ್ಞಾಪೂರ್ವಕವಾಗಿ ಕೊಟ್ಟಿದ್ದು ಜೀವನದ ಅನುಭವ. ಹಾಗಾಗಿ ಎಲ್ಲಾ ದೃಷ್ಟಿಯಿಂದಲೂ ವಚನ ಸಾಹಿತ್ಯದ ಅನುಸಂಧಾನ ಇಂದಿಗೂ ಪ್ರಸ್ತುತವಾಗಿದೆ ಎಂದರು.

ಕಾವ್ಯ ಪ್ರಕಾರಕ್ಕೆ ಸಾವಿಲ್ಲ: ಆಯಾ ಕಾಲಮಾನದ ಸಮಾಜದಲ್ಲಿ ನಡೆಯುವ, ನಡೆಯುತ್ತಿರುವ ವಿದ್ಯಮಾನಗಳನ್ನು ಕಾವ್ಯದ ಮೂಲಕ ದಾಖಲಿಸುತ್ತಾ ಸಾಗುವುದರಿಂದ ಕಾವ್ಯ ಪ್ರಕಾರಕ್ಕೆ ಸಾವಿಲ್ಲ. ಬಸವಣ್ಣನವರು ತಮ್ಮ ವಚನದಲ್ಲಿ ಸಮಗ್ರ ಕಾವ್ಯದ ವಿಮರ್ಶೆಯನ್ನು ಕೊಟ್ಟಿದ್ದಾರೆ. ನುಡಿದರೆ ಮುತ್ತಿನ ಹಾರದಂತಿರಬೇಕು ಎಂಬ ಮಾತು ಸೌಹಾದರ್ಯದ ಬಗ್ಗೆ ಹೇಳುವ ಮಾತು. ಮಾಣಿಕ್ಯದ ದೀಪ್ತಿಯಂತಿರಬೇಕು. ಸ್ಪಟಿಕದ ಸಲಾಕೆಯಂತಿರಬೇಕು. ಹಿಂದಿನಿಂದಲೂ ಕಾವ್ಯದ ಬಗ್ಗೆ ವಿಮಶಾತ್ಮಕವಾಗಿ ತಿಳಿಸಿಕೊಟ್ಟಿದ್ದಾರೆ. ಹಾಗಾಗಿ ಒಳ್ಳೆಯದನ್ನು ಎತ್ತಿ ಹಿಡಿದು, ಕೆಟ್ಟದನ್ನು ನಾಶ ಮಾಡುವಂತದ್ದು ಕಾವ್ಯ ರಚನೆಯ ಕರ್ತವ್ಯವಾಗಿದೆ ಎಂದು ಹೇಳಿದರು.

ಹಬ್ಬದ ವಾತಾವರಣ: ಪ್ರಾಸ್ತಾವಿಕ ನುಡಿಗಳನ್ನಾಡಿದ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯಾಧ್ಯಕ್ಷ ಕೊಟ್ರೇಶ್‌ ಎಸ್‌.ಉಪ್ಪಾರ್‌ ಅವರು, ಕಳೆದ ಸಾಲಿನಲ್ಲಿ 18 ಕೃತಿಗಳು ಸ್ಪರ್ಧೆಗೆ ಬಂದಿದ್ದವು. ಆದರೆ ಈ ಬಾರಿ 38 ಕೃತಿಗಳು ಸ್ಪರ್ಧೆಯಲ್ಲಿ ಭಾಗಿಯಾಗಿವೆ. ಕಾವ್ಯಗಳ ಬಗ್ಗೆ ನುರಿತ ಕವಿಗಳು ತೀರ್ಪು ನೀಡಿದ್ದು, ಅಂತಿಮವಾಗಿ ಮೂರು ಕೃತಿಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ. ಇಂದು ಎರಡು ವೇದಿಕೆಗಳಲ್ಲಿ ಕವಿಗೋಷ್ಠಿಗೆ ಅವಕಾಶ ಮಾಡಿಕೊಡಲಾಗಿದ್ದು, ಸಾಹಿತಿಗಳಿಗೆ, ಸಾಹಿತ್ಯಾಸಕ್ತರಿಗೆ ಹಬ್ಬದ ವಾತಾವರಣ ನಿರ್ಮಾಣ ಮಾಡಿದೆ ಎಂದು ಹೇಳಿದರು.

ಧಾರವಾಡದ ಡಾ.ಎಂ.ಡಿ.ಒಕ್ಕುಂದ ಅವರ ಅಡಗುದಾಣ ಕವನ ಸಂಕಲನ ಪ್ರಥಮ ಹಾಗೂ 3 ಸಾವಿರ ನಗದು ಬಹುಮಾನ, ಶಿವಮೊಗ್ಗದ ಎನ್‌.ರವಿಕುಮಾರ್‌ ಟೆಲೆಕ್ಸ್‌ ಅವರ ನಂಜಿಲ್ಲದ ಪದಗಳು ಕವನ ಸಂಕಲನ ದ್ವಿತೀಯ ಹಾಗೂ 2ಸಾವಿರ ರೂ. ನಗದು ಬಹುಮಾನ ಹಾಗೂ ಬೆಂಗಳೂರಿನ ಉಮಾ ಮುಕುಂದರವರ ಕಡೇ ನಾಲ್ಕು ಸಾಲು ತೃತೀಯ ಹಾಗೂ ಒಂದು ಸಾವಿರ ರೂ. ನಗದು ಬಹುಮಾನ ನೀಡಲಾಯಿತು.

ಡಾ.ದೇ.ಜ.ಗೌ ಜ್ಞಾನವಾಹಿನಿ ಅಕಾಡೆುಯ ಅಧ್ಯಕ್ಷ ಡಾ. ಡಿ.ತಿಮ್ಮಯ್ಯ, ನಿವೃತ್ತ ಎಂಜಿನಿಯರ್‌ ಎಂ.ಜಿ.ಸೋಮಶೇಖರ್‌, ಸಾಹಿತಿಗಳಾದ ಸುಬ್ಬುಹೊಲೆಯಾರ್‌, ಹೇಮರಾಗ, , ರಿಯ ಸಾಹಿತಿ ಎನ್‌.ಶೈಲಜಾ ಹಾಸನ್‌, ಮಾಣಿಕ್ಯ ಪ್ರಕಾಶನದ ಪ್ರಕಾಶಕ ದೀಪಾ ಉಪ್ಪಾರ್‌, ಡಾ.ಸಾವಿತ್ರಿ,, ಟಿ.ಸತೀಶ್‌, ಜವರೇಗೌಡ, ಹೆತ್ತೂರು ನಾಗರಾಜ್‌, ತಮ್ಲಾಪುರ ಗಣೇಶ್‌ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Revanna 2

BJP ಸ್ಥಳೀಯ ಮುಖಂಡರ ಅಸಹಕಾರ: ಬಿಎಸ್‌ವೈ ಬಳಿ ರಕ್ಷಣೆಗೆ ಮೊರೆಯಿಟ್ಟ ಎಚ್‌.ಡಿ.ರೇವಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.