ಸುಳ್ಳು ಭರವಸೆ ಮೂಲಕ ರಾಜಕಾರಣ ಮಾಡೋಲ್ಲ


Team Udayavani, Apr 14, 2019, 11:20 AM IST

bagur

ಚನ್ನರಾಯಪಟ್ಟಣ: ರಾಜಕೀಯ ಕ್ಷೇತ್ರಕ್ಕೆ ಪ್ರವೇಶ ಮಾಡಿದ್ದೇನೆ ಹಾಗಂದ ಮಾತ್ರಕ್ಕೆ ಪೊಳ್ಳು ಭರವಸೆ ಹೇಳಿಕೊಂಡು ರಾಜಕಾರಣ ಮಾಡುವ ಜಯಮಾನ ನನ್ನದಲ್ಲ ಎಂದು ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ತಿಳಿಸಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚಾರ ಮಾಡಿ ಬಾಗೂರು ಹೋಬಳಿಯ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೀರಿನ ಸಮಸ್ಯೆ ನಿವಾರಣೆಗೆ ಕ್ರಮ: ಬಾಗೂರುಹೋಬಳಿ ನೀರಿನ ಸಮಸ್ಯೆ ಇದೆ ಈ ಬಗ್ಗೆ ಕ್ಷೇತ್ರದ ಶಾಸಕರು ಜಿಲ್ಲಾ ಮಂತ್ರಿ ರೇವಣ್ಣ ಅವರ ಗಮನಕ್ಕೆ ತಂದಿದ್ದಾರೆ. ಅವರಿಂದ ಶೀಘ್ರದಲ್ಲಿ ಕೆರೆ ಕಟ್ಟೆಗೆ ನೀರು ಹರಿಸಲಾಗುವುದು. ತಾಲೂಕಿಗೆ ಸುಮಾರು 200 ಕೋಟಿ ರೂ. ಏತನೀರಾವರಿಗಾಗಿ ಬಿಡುಗಡೆ ಮಾಡಿದ್ದು 90 ಕರೆ ತುಂಬಿಸಲಾಗುವುದು ಎಂದು ಭರವಸೆ  ನೀಡಿದರು.

ಮುಂದಿನ ವಿಧಾನ ಸಭೆ ಚುನಾವಣೆ ವೇಳೆಗೆ ತಾಲೂಕು ಬಾಗೂರು, ನುಗ್ಗೇಹಳ್ಳಿ, ತೋಟಿ, ಹಿರೀಸಾವೆ, ಕಲ್ಲೆಸೋಮನಹಳ್ಳಿ ಏತನೀರಾವರಿ ಯೋಜನೆ ಪೂರ್ಣ ಮಾಡಲಾಗುವುದು. ಒಂದು ವೇಳೆ ಈ ಯೋಜನೆ ಪೂರ್ಣ ಮಾಡದೇ ಹೋದರೆ
ನಮಗೆ ಆಶೀರ್ವಾದ ಮಾಡುವುದು ಬೇಡ ಎಂದು ಸವಾಲು ಹಾಕಿದ್ದಾರೆ.

ಹುಸಿಯಾದ ಮಂಜು ಭರವಸೆ: 9 ತಿಂಗಳ ಹಿಂದೆ ಜಿಲ್ಲಾ ಮಂತ್ರಿಯಾಗಿದ್ದ ಎ.ಮಂಜು ಜಿಲ್ಲಾ ಪಂಚಾಯಿತಿ ಚುನಾವಣೆ ವೇಳೆ ದಂಡಿಗನಹಳ್ಳಿಹೋಬಳಿ ಕಾಚೇನಹಳ್ಳಿ ಏತನೀವಾರಿ ಭರವಸೆ ನೀಡಿ ಅಲ್ಲಿ ತಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದರು. ನಂತರದ ದಿವಸದಲ್ಲಿ ಅತ್ತ ಸುಳಿಯಲಿಲ್ಲ ಈಗ ಅಲ್ಲಿ ಮತಯಾಚನೆಗೆ ತೆರಳಿದರೆ ಮಹಿಳೆಯರು ಪೊರಕೆ ಸೇವೆ ಮಾಡುತ್ತಾರೆ. ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಚೇನಹಳ್ಳಿ ಏತನೀರಾವರಿ ಮೂರನೇ ಹಂತಕ್ಕೆ ಚಾಲನೆ ನೀಡಿದೆ ಎಂದರು.

ಸೈನಿಕರನ್ನು ರಾಜಕೀಯಕ್ಕೆ ತರಬೇಡಿ: ಕುಲಗೆಟ್ಟ ರಾಜಕೀಯ ವ್ಯವಸ್ಥೆಗೆ ಸೈನಿಕರನ್ನು ಮಧ್ಯ ತರುವುದು ಬೇಡ. ಮೋದಿ ತಾನು ಪಾಕಿಸ್ತಾನದ ಮೇಲೆ ದಾಳಿ ಮಾಡಿದವರಂತೆ ಹೇಳುತ್ತಾರೆ. ದೇಶದ ಸೈನಿಕರು ತಮ್ಮ ಕರ್ತವ್ಯ ಮಾಡಿದ್ದಾರೆ ಹೊರತು ಮೋದಿ ಮಾಡಿಲ್ಲ. ಇಂದಿರಾ ಗಾಂಧಿ, ಅಟಾಲ್‌ ಬಿಹಾರಿ ವಾಜಪೇಯಿ ಅವಧಿಯಲ್ಲಿಯೂ ಪಾಕಿಸ್ತಾನದ ಮೇಲೆ ದಾಳಿ
ನಡೆದಿತ್ತು ಎಂದು ಹೇಳಿದರು.

ರೈತರ ಮತ ಪಡೆಯಲು ಮೋದಿ ತಂತ್ರ: ರೈತರು ಖಾತೆಗೆ ಆರು ಸಾವಿರ ಹಣ ಮೂರು ಕಂತಿನಲ್ಲಿ ಹಾಕುವುದು ಕೇವಲ ಏ.23ರ ವರೆಗೆ ಇರುತ್ತದೆ
ಮುಂದಿ ಇದು ಇರುವುದಿಲ್ಲ. ಚುನಾವಣೆ ವೇಳೆ ರೈತರ ಮತ ಪಡೆಯಲು ಮೋದಿ ನೀಡಿರುವ ಕೊಡುಗೆಇಂತಹ ಕೊಡುಗೆಗೆ ರೈತರು ಮಾರು ಹೋಗುವುದು ಬೇಡ. ಇದೊಂದು ರೀತಿ ವ್ಯಾಪಾರಸ್ಥರು ನೀಡುವ ಕೊಡುಗೆ ರೀತಿಯಲ್ಲಿ ನೀಡಲಾಗಿದೆ ಎಂದು ವ್ಯಂಗ್ಯವಾಡಿದರು.

ಶಾಸಕ ಸಿ.ಎನ್‌.ಬಾಲಕೃಷ್ಣ ಮಾತನಾಡಿ, ದೇಶದಲ್ಲಿ ವಿರೋಧ ಪಕ್ಷ ಇಲ್ಲದಂತೆ ಮಾಡುವ ಉದ್ದೇಶದಿಂದ ಕಾಂಗ್ರೆಸ್‌ ಮುಕ್ತ ಭಾರತ ಮಾಡಲು ಹೊರಟಿದ್ದರ ಫ‌ಲವಾಗಿ ಜೆಡಿಎಸ್‌ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡು ಬಿಜೆಪಿಗೆ ತಕ್ಕ ಪಾಠ ಕಲಿಸಲು ಮುಂದಾಗುತ್ತಿದೆ. ಇದಕ್ಕೆ ಎರಡೂ ಪಕ್ಷದ ಕಾರ್ಯಕರ್ತ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಮೋದಿ ಮೋಡಿ ನಡೆಯೋಲ್ಲ: ಮೋದಿ ಅಧಿಕಾರಕ್ಕೆ ಬಂದ ಮೇಲೆ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಹಲವು ರಾಜ್ಯದಲ್ಲಿ ಮೋದಿ ಚಮತ್ಕಾರ ನಡೆಯಲಿಲ್ಲ. ಹಾಗಾಗಿ ಉತ್ತರ ಭಾರತದಿಂದ ದಕ್ಷಿಣದ ಕಡೆ ಮುಖಮಾಡಿದ್ದಾರೆ ಇಲ್ಲಿಯೂ ಅವರ ಮೋಡಿ ನಡೆಯುವುದಿಲ್ಲ. ಶ್ರೀಮಂತ ಉದ್ಯಮಿಗಳ ಸಾಲ ಮನ್ನ ಮಾಡುವ ಈತ
ರೈತರ ಸಾಲಮನ್ನಾ ಯಾಕೆ ಮಾಡಲಿಲ್ಲ ಎಂದು ಪ್ರಜ್ವಲ್‌ ಪ್ರಶ್ನಿಸಿದರು.
ಬಾಗೂರಿಗೆ ಆಗಮಿಸಿದ ಮೈತ್ರಿ ಆಭ್ಯರ್ಥಿ ಪ್ರಜ್ವಲ್‌ಗೆ ಬೃಹತ್‌ ಹಾರವನ್ನು ಕೈನ್‌ ಮೂಲಕ ಕಾರ್ಯಕರ್ತರು ಹಾಕಿದರು. ಸಂಸದೀಯ ಕಾರ್ಯದರ್ಶಿ ಎಂ.ಎ.ಗೋಪಾಲಸ್ವಾಮಿ, ಜಿಪಂ ಸದಸ್ಯ ಸಿ.ಎನ್‌ ಪುಟ್ಟಸ್ವಾಮಿಗೌಡ, ಎಪಿಎಂಸಿ ಅಧ್ಯಕ್ಷ ಶಿವಣ್ಣ, ನಿರ್ದೇಶಕರಾದ ಎಂ.ಶಂಕರ್‌, ಶಿವಸ್ವಾಮಿ, ಅನಿಲ್‌ ಕುಮಾರ, ಮುಖಂಡರಾದ ಲೋಕೇಶ್‌, ಕೃಷ್ಣೇಗೌಡ, ಲಲಿತಮ್ಮ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.