ಸಾಹಿತ್ಯ ಕ್ಷೇತ್ರದಲ್ಲೂ ರಾಜಕೀಯ: ವಿಷಾದ

ಸಾಹಿತ್ಯ ಕ್ಷೇತ್ರದಲ್ಲೂ ರಾಜಕೀಯ: ವಿಷಾದ

Team Udayavani, Jul 1, 2019, 2:55 PM IST

hasan-tdy-4..

ಸಕಲೇಶಪುರದಲ್ಲಿ ಕೇಂದ್ರ ಸಾಹಿತ್ಯ ವೇದಿಕೆ ತಾಲೂಕು ಘಟಕ ಏರ್ಪಡಿಸಿದ್ದ ಅಖೀಲ ಕರ್ನಾಟಕ ಪ್ರಥಮ ಕವಿ-ಕಾವ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಹಾಡ್ಲಹಳ್ಳಿ ನಾಗರಾಜ್‌ ಮಾತನಾಡಿದರು.

ಸಕಲೇಶಪುರ: ಸಾಹಿತ್ಯ ಪರಿಚಾರಿಕೆ ಯಂತಹ ಪರಮ ಪವಿತ್ರ ಕೆಲಸ ಮಾಡಬೇಕಾದ ಸಂಸ್ಥೆಗಳ ಅಂಗಳಗಳು ರಾಜಕೀಯ ಆಡಂಬೊಲಗಳಾಗಿ ಸಾಹಿತ್ಯದ ಉತ್ತೇಜನ ನಗಣ್ಯವಾಗಿದೆ. ಇಂದಿನ ಈ ವಾತಾವರಣ ನಿರಾಶೆ ಹುಟ್ಟಿಸದೆ ಎಂದು ಹಿರಿಯ ಸಾಹಿತಿ ಹಾಡ್ಲಹಳ್ಳಿ ನಾಗರಾಜ್‌ ಹೇಳಿದರು.

ಕೇಂದ್ರ ಸಾಹಿತ್ಯ ವೇದಿಕೆಯ ತಾಲೂಕು ಘಟಕದ ವತಿಯಿಂದ ಅಖೀಲ ಕರ್ನಾಟಕ ಪ್ರಥಮ ಕವಿ-ಕಾವ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೃಜನಶೀಲ ಸಾಹಿತಿಯನ್ನು ಹಾಳು ಮಾಡಬೇಕೆಂದು ಎನಿಸಿದರೆ ಆತನನ್ನು ಕರೆದುಕೊಂಡು ಹೋಗಿ ಈ ಸಂಸ್ಥೆಗಳ ಅಂಗಳದಲ್ಲಿ ಬಿಡಬೇಕು ಎಂದರು.

ತಾಂತ್ರಿಕತೆಯಿಂದ ಸೋಮಾರಿತನ: ಈ ಆಧುನಿಕ ಕಾಲಘಟ್ಟದಲ್ಲಿ ಹಲವಾರು ತಾಂತ್ರಿಕ ಆವಿಷ್ಕಾರಗಳಾಗಿ ಮನುಷ್ಯನ ಬದುಕನ್ನು ಹಗುರಗೊಳಿಸಿದೆ ಎಂಬ ನಂಬಿಕೆಯಿದೆ. ಸೋಮಾರಿತನವನ್ನು ಅಪ್ಪಿಕೊಂಡ ಮನುಷ್ಯ ಟೀವಿ ಮುಂದೆ ಕುಳಿತು ಅದು ಉಣಬಡಿಸುವ ತಂಗಳನ್ನ ದಿಂದಲೇ ತೃಪ್ತನಾಗುತ್ತಾ ಓದಿನ ಮಜಾ ಕಳೆದುಕೊಳ್ಳುತ್ತಿದ್ದಾನೆ ಎಂದರು.

ಸಾಹಿತಿಗಳನ್ನು ಪ್ರೋತ್ಸಾಹಿಸಿ: ಮುಖ್ಯ ಅತಿಥಿ ಶಾಸಕ ಎಚ್.ಕೆ.ಕುಮಾರಸ್ವಾಮಿ ಮಾತನಾಡಿ, ಸಾಹಿತ್ಯಾಸಕ್ತಿ ಇರುವ ರಾಜಕಾರಣಿಗಳು ಸಂಗೀತ, ಸಾಹಿತ್ಯ, ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮಗಳಿಗೆ ಉತ್ತೇಜನ ನೀಡಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ತುಮಕೂರು ಗವಿಮಠದ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ಜಾತಿಯ ಸೋಂಕಿಲ್ಲದ ಸಾಹಿತ್ಯ ಪ್ರಪಂಚವನ್ನು ಮರು ಸೃಷ್ಟಿ ಮಾಡಬೇಕು ಎಂದರು.

ಸಮಾರಂಭದಲ್ಲಿ ಎಸ್‌.ಕೆ.ಕರೀಂ ಖಾನ್‌ ಸಾಹಿತ್ಯ ಮತ್ತು ಸಾಂಸ್ಕೃತಿ ಪ್ರಶಸ್ತಿ ಯನ್ನು ರಂಗಕರ್ಮಿ ಪ್ರಸಾದ್‌ ರಕ್ಷಿದಿ, ಸಾಹಿತ್ಯ ಸಂಘಟಕ ಸತೀಶ್‌ ಜವರೇಗೌಡ, ಕಲಾವಿದ ಎಂ.ಡಿ.ಮಂಚಿ, ಸಾಹಿತಿ ಸುಶೀಲಾ ಸೋಮಶೇಖರ್‌, ಶೈಲಜಾ ಹಾಸನ್‌, ನರಸಿಂಹಮೂರ್ತಿ, ನಿಯಾಜ್‌ ಪಡೀಲ್ ಅವರುಗಳಿಗೆ ನೀಡ ಲಾಯಿತು. ಚಂದ್ರಶೇಖರ್‌ ಧೂಲೇಕರ್‌ ಸಾಹಿತ್ಯ ಪ್ರಶಸ್ತಿಯನ್ನು ಸಾಹಿತಿ ವಾಣಿಘಟ್ಟಿ, ಎಸ್‌.ಲಲಿತಾ, ಚಂದ್ರಶೇಖರ್‌ ದೋಸಿ, ಪತ್ರಕರ್ತ ಮಲ್ನಾಡ್‌ ಮೆಹಬೂಬ್‌, ಮಾದರಿ ಶಿಕ್ಷಕಿ ಹರ್ಷಿಯಾಬಾನು ಹಾಗೂ ಸಮಾಜ ಸೇವಾರತ್ನ ಪ್ರಶಸ್ತಿಯನ್ನು ಚನ್ನವೇಣಿ ಎಂ.ಶೆಟ್ಟಿ, ಇಬ್ರಾಹಿಂ ಮುಸ್ಲಿಯಾರ್‌, ಪ್ರಗತಿ ಸಂಜಿತ್‌ಶೆಟ್ಟಿ, ಲಕ್ಷ್ಮೀರಂಗನಾಥ್‌, ವಿದ್ಯಾಹರೀಶ್‌, ಎಂ.ಸಿ.ರಾಜು, ಮಹಂತಪ್ಪ ಅವರುಗಳಿಗೆ ನೀಡಿ ಸನ್ಮಾನಿಸಲಾಯಿತು.

ಸಮಾರಂಭವನ್ನು ಹಿರಿಯ ಸಾಹಿತಿ ಬಾನು ಮುಸ್ತಾಕ್‌ ಉದ್ಘಾಟಿಸಿ ದರು. ತಾಲೂಕು ಕಸಾಪ ಅಧ್ಯಕ್ಷ ಜೈಮಾರುತಿ ದೇವರಾಜ್‌, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ರಾಜ್ಯಾಧ್ಯಕ್ಷ ಕೊಟ್ರೇಶ್‌ ಎಸ್‌.ಉಪ್ಪಾರ್‌, ಜಿಲ್ಲಾಧ್ಯಕ್ಷ ವಾಸು ಸಮುದ್ರವಳ್ಳಿ, ತಾಲೂಕು ಅಧ್ಯಕ್ಷೆ ಫ‌ರ್ಜಾನಾ ರಿಜ್ವಾನ್‌, ಜಿಲ್ಲಾ ಕಸಾಪ ಗೌರವಾಧ್ಯಕ್ಷ ರವಿ ಇದ್ದರು.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.