ರಣಘಟ್ಟ ಯೋಜನೆ ಬಿಜೆಪಿ ಪಕ್ಷದ ಸಾಧನೆ: ಪ್ರೀತಂ ಗೌಡ


Team Udayavani, Nov 9, 2021, 3:33 PM IST

ರಣಘಟ್ಟ ಯೋಜನೆ ಬಿಜೆಪಿ ಪಕ್ಷದ ಸಾಧನೆ: ಪ್ರೀತಂ ಗೌಡ

ಬೇಲೂರು: ಬಿಜೆಪಿ ಸರ್ಕಾರದ ಅಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಪರಿಶ್ರಮದಿಂದ ತಾಲೂಕಿನ ರಣಘಟ್ಟ ಯೋಜನೆ ರೂಪಿತವಾಗಿದೆ. ಆದರೆ ಬೇಲೂರು ಶಾಸಕರು ಮಾತ್ರ ಈ ಯೋಜನೆ ನನ್ನ ಪರಿಶ್ರಮ ಎಂದು ಹೇಳಿಕೊಳ್ಳುವ ಮೂಲಕ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಈ ಕುರಿತು ತಕ್ಷಣ ಶ್ವೇತಪತ್ರ ಹೊರಡಿಸಬೇಕು ಎಂದು ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜಿ. ಗೌಡ ಒತ್ತಾಯಿಸಿದರು.

ಪಟ್ಟಣದ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಶಾಸಕರಾದ ಕೆ.ಎಸ್‌.ಲಿಂಗೇಶ್‌ರವರ ಸಮಿಶ್ರ ಸರ್ಕಾರ ರಾಜ್ಯದಲ್ಲಿ 14 ತಿಂಗಳಲ್ಲಿ ಬೇಲೂರಿನ ಅಭಿವೃದ್ಧಿಗೆ ಎಷ್ಟು ಅನುದಾನ ತಂದಿದ್ದಾರೆ ಎಂಬ ಬಗ್ಗೆ ಮೊದಲು ಉತ್ತರ ನೀಡಬೇಕಿದೆ. ಇನ್ನೂ ಜಿಲ್ಲೆಯ ಸ್ವಯಂ ಘೋಷಿತ ಅಭಿವೃದ್ಧಿ ಹರಿಕಾರ ಎಂದು ಕರೆಸಿಕೊಳ್ಳುವ ರೇವಣ್ಣನವರು ತಮ್ಮ ಸ್ವಕ್ಷೇತ್ರ ಹೊರತುಪಡಿಸಿ ಜಿಲ್ಲೆಗೆ ನೀಡಿದ ಕೊಡುಗೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ಅನುಕಂಪ ಸೃಷ್ಟಿಸಲು ಯತ್ನ: ಬೇಲೂರು ಶಾಸಕರು ಪ್ರತಿ ವೇದಿಕೆಯಲ್ಲಿ ರಣಘಟ್ಟ ಯೋಜನೆಯ ಬಗ್ಗೆ ಮಾತನಾಡುತ್ತಾರೆ. ಕ್ಷೇತ್ರದಲ್ಲಿ ಯಾವ ರಸ್ತೆ ಕಾಮಗಾರಿ ನಡೆದಿಲ್ಲ, ಕೇವಲ ರಣಘಟ್ಟ ಅನುಕಂಪ ಸೃಷ್ಟಿಸಿ ಓಟು ಪಡೆಯಲು ಮುಂದಾ ಗಿರುವ ಬೇಲೂರು ಶಾಸಕರ ಶೂನ್ಯ ಸಾಧನೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವರವಾಗಿ ಬೇಲೂರಿನಲ್ಲಿ ಕಮಲ ಅರಳುವುದು ಖಚಿತವೆಂದು ವಿಶ್ವಾಸದ ಮಾತುಗಳನ್ನು ಆಡಿದರು.

ಜೆಡಿಎಸ್‌ಗೆ ಎಚ್ಚರಿಕೆ: ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲ್ಲಹಳ್ಳಿ ಸುರೇಶ್‌ ಮಾತನಾಡಿ, ರಣಘಟ್ಟ ಯೋಜನೆಗೆ ಮಠಾಧೀಶರು, ರೈತ ಸಂಘ ಮತ್ತು ಎಲ್ಲರ ಕೊಡುಗೆಯನ್ನು ಇಲ್ಲಿನ ಶಾಸಕರು ತಳ್ಳಿ ಹಾಕಿ. ನಾನೇ ರಣಘಟ್ಟದ ರೂವಾರಿ ಎಂದೇ ಹೇಳಿಕೊಳ್ಳುವ ಬೇಲೂರು ಶಾಸಕರು ಜನರಿಗೆ ಸತ್ಯ ಹೇಳುವ ಪ್ರಯತ್ನ ಮಾಡಬೇಕಿದೆ. ಇಲ್ಲವಾದರೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಠೇವಣಿಗೆ ಪರಿತಾಪ ಪಡುವ ದಿನಗಳು ಹತ್ತಿರವಿದೆ ಎಂದು ಜೆಡಿಎಸ್‌ ಪಕ್ಷಕ್ಕೆ ಎಚ್ಚರಿಕೆ ನೀಡಿದರು.

ಜಿಲ್ಲಾಧ್ಯಕ್ಷರು ದಲಿತರು ಹೊಟ್ಟೆಪಾಡಿಗೆ ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ದಲಿತರ ವಿರುದ್ಧ ವಾಗ್ಧಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೀತಿ ನಿಜಕ್ಕೂ ಖಂಡನೀಯ ಹಾಗಾದರೆ ನಿಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್‌ ಸೇರ್ಪಡೆಯಾದ ಬಗ್ಗೆ ಉತ್ತರಿಸಿ ಎಂದು ಛೇಡಿಸಿದರು.

ವಿಧಾನ ಪರಿಷತ್‌ ಸದಸ್ಯ ಮುನಿರಾಜೇ ಗೌಡ, ತಾಲೂಕು ಬಿಜೆಪಿ ಅಧ್ಯಕ್ಷ ಆನಂದ್‌, ಪ್ರಾಧಿಕಾರದ ಅಧ್ಯಕ್ಷ ಎ.ಸಿ.ಬಸವರಾಜು, ಬಿಜೆಪಿ ಹಿರಿಯ ಮುಖಂಡ ಕೊರಟಗೆರೆ ಪ್ರಕಾಶ್‌, ರೇಣುಕುಮಾರ್‌, ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ಈಶ್ವರಪ್ಪ, ಪ್ರಸನ್ನ, ಪುರಸಭಾ ಸದಸ್ಯ ಪ್ರಭಾಕರ್‌, ಬಿ.ಕೆ.ಚಂದ್ರಕಲಾ ಇತರರು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.