ಬರ, ಅತಿವೃಷ್ಟಿ ನಿರ್ವಹಣೆಗೆ ಆದ್ಯತೆ ನೀಡಿ: ರೇವಣ್ಣ

ಬರ ನಿರ್ವಹಣೆಗೆ ಅನುದಾನದ ಕೊರತೆ ಇಲ್ಲ, ಪರಿಹಾರ ಕಾರ್ಯಗಳು ತ್ವರಿತ ಅನುಷ್ಠಾ‌ನವಾಗಲಿ

Team Udayavani, May 14, 2019, 9:34 AM IST

hasan-tdy-1…

ಹಾಸನ: ಜಿಲ್ಲೆಯಲ್ಲಿ ಯಾವುದೇ ಲೋಪಗಳಿಲ್ಲದಂತೆ ಬರ ಹಾಗೂ ಅತಿವೃಷ್ಟಿ ನಿರ್ವಹಣೆಗೆ ವ್ಯವಸ್ಥಿತ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳ ಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರೂ ಆದ ಎಚ್.ಡಿ ರೇವಣ್ಣ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಸೋಮವಾರ ಮಧ್ಯಾಹ್ನ ಬರ ನಿರ್ವಹಣೆ ಹಾಗೂ ಮುಂಗಾರು ಹಂಗಾಮಿನ ಸಿದ್ಧತೆಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ ಅವರು, ತೀವ್ರವಾಗಿ ಕುಡಿಯುವ ನೀರಿನ ಅಭಾವ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ಹೆಚ್ಚಿನ ನಿಗಾವಹಿಸಬೇಕೆಂದು ಸೂಚನೆ ನೀಡಿದರು.

ಕಾಮಗಾರಿ ಅನುಷ್ಠಾನ ಮಾಡಿ: ಬರ ನಿರ್ವಹಣೆಗೆ ಯಾವುದೇ ಅನುದಾನದ ಕೊರತೆಯಿಲ್ಲ. ಆದರೆ ಈಗಾಗಲೇ ಅನುಮೋದನೆಗೊಂಡಿರುವ ಕಾಮಗಾರಿ ಗಳು ತ್ವರಿತವಾಗಿ ಅನುಷ್ಠಾನವಾಗಬೇಕು. ಅದೇ ರೀತಿ ಅರಸೀಕೆರೆ ತಾಲೂಕು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾರ್ಯಾರಂಭ ಮಾಡಿ ಬರದ ಬವಣೆ ನೀಗಿಸಬೇಕು ಎಂದರು.

ಟ್ಯಾಂಕರ್‌ಗಳಲ್ಲಿ ನೀರು ಪೂರೈಕೆಯಾಗುತ್ತಿರುವ ಅರಸೀಕೆರೆ ಮತ್ತು ಬೇಲೂರು ತಾಲೂಕಿನ ಗ್ರಾಮಗಳಿಗೆ ಸಮೀಪದ ಜಲ ಮೂಲಗಳನ್ನು ಪತ್ತೆ ಹಚ್ಚಿ ಶಾಶ್ವತ ಯೋಜನೆ ಜಾರಿ ಪ್ರಯತ್ನವನ್ನು ಪರಿಣಾಮಕಾರಿಯಾಗಿ ಮಾಡ ಬೇಕು ಎಂದು ಸಚಿವ ರೇವಣ್ಣ ಹೇಳಿದರು.

ನೀರಿನ ಬವಣೆ ತಪ್ಪಿಲ್ಲ: ಜಿಲ್ಲೆಯಲ್ಲಿ ಕಾವೇರಿ, ಹೇಮಾವತಿ, ಯಗಚಿ, ವಾಟೆಹೊಳೆ ನದಿಗಳು ಹರಿ ಯುತ್ತಿದ್ದರೂ ಇನ್ನೂ ನೀರಿನ ಬವಣೆ ತಪ್ಪಿಲ್ಲ. ಇನ್ನು ಮುಂದೆಯಾದರೂ ಅಧಿಕಾರಿಗಳು ಈ ಜಲಮೂಲ ಗಳನ್ನು ಬಳಸಿ ಜಿಲ್ಲೆಯ ಎಲ್ಲಾ ಗ್ರಾಮಗಳಿಗೂ ಶಾಶ್ವತ ಕುಡಿಯುವ ನೀರು ಪೂರೈಸುವ ಪ್ರಸ್ತತ ಯೋಜನೆ ಜಾರಿಗೆ ಪ್ರಯತ್ನಿಸಬೇಕು. ಆಗ ಮಾತ್ರ ನಿರಂತರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಹಾಸನ ನಗರದ ಕುಡಿಯುವ ನೀರು ಪೂರೈಕೆಯ 3ನೇ ಹಂತದ ಯೋಜನೆಯಾದ ಅಮೃತ್‌ ಯೋಜ ನೆಯ ಕಾಮಗಾರಿಯನ್ನು ಆದಷ್ಟು ತ್ವರಿತವಾಗಿ ಪೂರ್ಣಗೊಳಿಸಬೇಕು. ನಗರದಲ್ಲಿ ಲೋಕೋಪ ಯೋಗಿ ಇಲಾಖೆ ಮೂಲಕ ಕಾಂಕ್ರೀಟ್ ರಸ್ತೆ ಕಾಮ ಗಾರಿಗಳು ನಡೆಯುತ್ತಿದ್ದು, ಈಗಲೇ ಪೈಪ್‌ಲೈನ್‌ಗಳ ಅಳವಡಿಕೆ ಕಾರ್ಯ ಪೂರ್ಣಗೊಳಿಸಿ ಎಂದು ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಲೂಗಡ್ಡೆ ಬಿತ್ತನೆ ಬೀಜ, ಸಬ್ಸಿಡಿ ಅರ್ಹರಿಗೆ ತಲಪಲಿ: ಆಲೂಗೆಡ್ಡೆ ಬಿತ್ತನೆ ಬೀಜ ವಿತರಣೆಯಲ್ಲಿ ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಾರಾಟ ದರ ನ್ಯಾಯಯುತವಾಗಿ ನಿಗದಿಯಾಗಬೇಕು. ಶೇ.50ರಷ್ಟು ಸಬ್ಸಿಡಿ ಮೊತ್ತ ರೈತರಿಗೆ ನೇರವಾಗಿ ಜಮೆಯಾಗಬೇಕು. ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ಬಿತ್ತನೆ ಬೀಜ, ಔಷಧಿಗಳು ವಿತರಣೆಯಾಗಬೇಕು. ಮಾರಾಟಗಾರರು ರೈತರಿಗೆ ಬಿಲ್ಲುಗಳನ್ನು ನೀಡಬೇಕು. ಗ್ರಾಮ ಲೆಕ್ಕಿಗಳು ಆಲೂಗೆಡ್ಡೆ ಬಿತ್ತನೆ ಮಾಡಿರುವ ಬಗ್ಗೆ ದೃಢೀಕರಣ ನೀಡಬೇಕು. ಜಿಲ್ಲಾಧಿಕಾರಿಯವರ ಮಾರ್ಗದರ್ಶನ ದಲ್ಲಿ ತೋಟಗಾರಿಕೆ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು ರೈತರ ಹಿತ ಕಾಯಬೇಕು. ಎಂದು ಸಚಿವರು, ಮುಂಗಾರು ಪ್ರಾರಂಭವಾಗುತ್ತಿದ್ದು ಬಿತ್ತನೆಬೀಜ, ರಸಗೊಬ್ಬರ ಸಾಕಷ್ಟು ದಾಸ್ತಾನು ಮಾಡಿದ್ದು ಕೃಷಿಕರಿಗೆ ಅಗತ್ಯವಿದ್ದಾಗ ವಿತರಣೆ ಮಾಡಲು ಜಂಟಿ ಕೃಷಿನಿರ್ದೇಶಕರು ಜವಾಬ್ದಾರಿ ವಹಿಸ ಬೇಕು ಎಂದು ತಾಕೀತು ಮಾಡಿದರು.

ಅತಿವೃಷ್ಟಿ ಹಾನಿ ಪರಿಹಾರ ಕಾರ್ಯ ಪೂರ್ಣಗೊಳಿಸಿ: ಕಳೆದ ಮುಂಗಾರು ಅವಧಿಯಲ್ಲಿ ಮಲೆನಾಡು ಪ್ರದೇಶದಲ್ಲಿ ಸಾಕಷ್ಟು ರಸ್ತೆಗಳು ಹಾನಿಗೀಡಾಗಿದ್ದು, ಪರಿಹಾರ ಕಾರ್ಯಗಳಿಗೆ ಅನುದಾನ ಒದಗಿಸಲಾಗಿದೆ. ಎಲ್ಲಾ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಬೇಕು. ಸಕಲೇಶಪುರ-ಮಾಗೇರಿ, ಸೋಮವಾರಪೇಟೆ ರಸ್ತೆ ಪುನರ್‌ ನಿರ್ಮಾಣವಾಗಬೇಕು. ಮಳೆ ಪ್ರಾರಂಭ ವಾಗುವ ಮುನ್ನ ಅಪಾಯಕಾರಿಯಾಗಿರುವ ಮಾರ್ಗ ಗಳನ್ನು ಸರಿಪಡಿಸಬೇಕು ಎಂದು ಸಚಿವರು ಲೋಕೋಪಯೋಗಿ ಹಾಗೂ ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗದ ಕಾರ್ಯಪಾಲಕ ಅಭಿಯಂತರರುಗಳಿಗೆ ಸೂಚನೆ ನೀಡಿದರು.

ಶಾಲಾ ಕಟ್ಟದ ದುರಸ್ತಿ ಮಾಡಿ: ಮುಂಗಾರು ಪ್ರಾರಂಭವಾಗಲಿದ್ದು ಶಾಲಾ ಕಾಲೇಜುಗಳ ಸುಸ್ಥಿತಿ ಗಮನಿಸಿ ಮಕ್ಕಳಿಗೆ ಯಾವುದೇ ಅಪಾಯವಾಗದಂತೆ ಮುಂಜಾಗ್ರತೆ ವಹಿಸಿ ತುರ್ತು ದುರಸ್ತಿ ಅಗತ್ಯವಿರುವ ಕಟ್ಟಡಗಳನ್ನು ಪಟ್ಟಿಮಾಡಿ ತಕ್ಷಣವೇ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದಪೂರ್ವ ಶಿಕ್ಷಣ ಇಲಾಖೆಗಳ ಉಪನಿರ್ದೇಶಕರುಗಳಿಗೆ ನಿರ್ದೇಶನ ನೀಡಿದರು.

ಎಲ್ಲಾ ತಾಲೂಕು ಮಟ್ಟದ ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನ ದಲ್ಲಿರಬೇಕು. ಎಲ್ಲರೂ ಕರ್ತವ್ಯದ ಸಂಬಂಧ ಎಲ್ಲಾ ಸಂದರ್ಭದಲ್ಲಿ ಲಭ್ಯವಾಗುವಂತಾಹ ಸಾರ್ವಜನಿ ಕರಿಂದ ಯಾವುದೇ ರೀತಿಯ ದೂರುಗಳು ಬರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ ವಸುವ ಅಧಿಕಾರಿ, ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿ ಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚರಿಕೆ ನೀಡಿದರು.

ಮೇವಿನ ವ್ಯವಸ್ಥೆ ಮಾಡಿ: ಜಿಲ್ಲೆಯಲ್ಲಿ ದನಕರುಗಳ ಮೇವಿನ ಕೊರತೆಯಾಗದಂತೆ ಮುಂಜಾಗ್ರತೆ ವಹಿಸ ಬೇಕು. ಪಶು ಪಾಲನಾ ಇಲಾಖೆ ಹಾಗೂ ಹಾಸನ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಹಾಲು ಉತ್ಪಾದನೆಗೆ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ವಿತರಿಸಿ ಮೇವು ಉತ್ಪಾದನೆಗೆ ಅಗತ್ಯ ಕ್ರಮ ಕೈಗೊಳ್ಳ ಬೇಕು ಎಂದೂ ಅಧಿಕಾರಿಗಳಿಗೆ ಸಚಿವ ಎಚ್.ಡಿ. ರೇವಣ್ಣ ಅವರು ತಾಕೀತು ಮಾಡಿದರು.

26 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು: ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಯವರು ಜಿಲ್ಲೆಯಲ್ಲಿನ ಬರ ಹಾಗೂ ಕುಡಿಯುವ ನೀರಿನ ಬಗ್ಗೆ ಪೂರೈಕೆ ಬಗ್ಗೆ ವಿವರಿಸಿದರು.

ಜಿಲ್ಲೆಯ 26 ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ಪ್ರತಿದಿನ 76 ಟ್ರಿಪ್‌ ನೀರು ಪೂರೈಸಲಾಗುತ್ತಿದೆ. 37 ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾಳನ್ನು ಬಳಸಿ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಹೇಳಿದರು.

ಜಿಪಂ ಎಂಜಿನಿಯರಿಂಗ್‌ ವಿಭಾಗದ ಇಇ ಆನಂದ್‌ ಅವರು ಮೊದಲ ಮತ್ತು 2ನೇ ಹಂತದ ನೀರು ಪೂರೈಕೆ ಕಾಮಗಾರಿಗಳು ಮುಕ್ತಾಯ ಹಂತದಲ್ಲಿದ್ದು 3ನೇ ಹಂತದ ಕಾಮಗಾರಿಗಳು ಶೀಘ್ರ ಪ್ರಾರಂಭವಾಗಲಿದೆ ಎಂದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hassan

Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sakaleshpura

National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.