ಲೋಕ ಸಮರಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ


Team Udayavani, Mar 12, 2019, 7:43 AM IST

loka-samara.jpg

ಹಾಸನ: ಲೋಕಸಭಾ ಚುನಾವಣೆಗೆ ಹಾಸನ ಕ್ಷೇತ್ರದಲ್ಲಿ ಅಧಿಸೂಚನೆ ಮಾ.19ರಂದು ಹೊರ ಬೀಳಲಿದ್ದು, ಏ.18 ರಂದು 2,235 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಅಕ್ರಂಪಾಷಾ ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಚುನಾವಣಾ ಸಿದ್ಧತೆಯ ವಿವರ ನೀಡಿದ ಅವರು, ಚಿಕ್ಕಮಗಳೂರು ಜಿಲ್ಲೆ ಕಡೂರು ವಿಧಾನಸಭಾ ಕ್ಷೇತ್ರ ಒಳಗೊಂಡಂತೆ ಹಾಸನ ಕ್ಷೇತ್ರದಲ್ಲಿ 16,29,587 ಲಕ್ಷ ಮತದಾರರಿದ್ದು, ಇನ್ನೂ 20 ಸಾವಿರ ಮತದಾರರು ನೋಂದಾಯಿಸಿಕೊಳ್ಳುವ ನಿರೀಕ್ಷೆಯಿದೆ. ಮತದಾರರು ನೋಂದಾಯಿಸಿಕೊಳ್ಳಲು ಮಾ.26ರ ವರೆಗೂ ಕಾಲಾವಕಾಶವಿದೆ ಎಂದು ಹೇಳಿದರು.

ಜಿಲ್ಲಾದ್ಯಂತ ಮಾದರಿ ನೀತಿ ಸಂತೆ ಕಟ್ಟನಿಟ್ಟಾಗಿ ಜಾರಿಗೊಳಿಸಲು ವಿಧಾನಸಭಾ ಕ್ಷೇತ್ರಗಳ ಹಂತದಲ್ಲಿ ನೋಡಲ್ ಅಧಿಕಾರಿಗಳು, ಫ್ಲೈಯಿಂಗ್‌ ಸ್ಕ್ವಾಡ್‌, ವಿಚಕ್ಷಣಾ ದಳಗಳುನ್ನು ನೇಮಿಸಲಾಗಿದೆ. ಮಾದರಿ ನೀತಿ ಸಂತೆ ಮಾ. 10ರಿಂದಲೇ ಜಾರಿಯಲ್ಲಿದ್ದು, ಜೂನ್‌ 3 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ವೆಬ್‌ಸೈಟ್‌ನಲ್ಲಿ ಭಾವಚಿತ್ರ ತೆರವು: ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಸರ್ಕಾರಿ ವೆಬ್‌ಸೈಟ್‌ನಲ್ಲಿ ಚುನಾ ಯಿತ ಜನಪ್ರತಿನಿಧಿಗಳ ಭಾವಚಿತ್ರವನ್ನು ತೆಗೆಯ ಲಾಗಿದೆ. ಸರ್ಕಾರಿ ವಾಹನವನ್ನು ಹಿಂಪಡೆಯಲಾಗಿದೆ. ಸರ್ಕಾರಿ ಕಚೇರಿ, ಸಾರ್ವಜನಿಕ ಸ್ಥಳಗಳಲ್ಲಿ ಜಾಹೀ ರಾತು ಫ‌ಲಕ ತೆರವುಗೊಳಿಸಲಾಗಿದೆ ಎಂದರು.

ಸಾಮಾಜಿಕ ಜಾಲತಾಣದ ದುರುಪಯೋಗ ತಡೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ಪ್ರಿಯಾಂಕ ನೇತೃತ್ವದ ತಂಡ ನಿಗಾವಹಿಸಲಿದೆ. ನೀತಿ ಸಂತೆ ಉಲ್ಲಂಘನೆ ಹಾಗೂ ಅಕ್ರಮ ತಡೆಗೆ 16 ನೋಡೆಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ದಿನದ 24 ತಾಸು ಕಾರ್ಯನಿರ್ವಸುವ ಕಂಟ್ರೋಲ್ ರೂಂ 261111 ತೆರೆಯಲಾಗಿದ್ದು, ಸಾರ್ವಜನಿಕರು ಚುನಾವಣಾ ಮಾಹಿತಿ, ಹಣ ಹಂಚಿಕೆ ಇತರೆ ದೂರು ನೀಡಬಹುದಾಗಿದೆ. ಜಿಲ್ಲೆಯ ಗಡಿಭಾಗದಲ್ಲಿ ಕಣ್ಗಾವಲು ಚಕ್ಷಣದಳ ಹಾಗೂ 20 ಚೆಕ್‌ಪೋಸ್ಟ್‌ ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಹೊಸ ಕಾಮಗಾರಿ ಘೋಷಿಸುವಂತಿಲ್ಲ: ಪ್ರಸ್ತುತ ಪ್ರಗತಿಯಲ್ಲಿ ಇರುವ ಕಾಮಗಾರಿ ಹೊರತುಪಡಿಸಿದರೆ ಹೊಸ ಯೋಜನೆ ಘೋಷಿಸುವಂತಿಲ್ಲ. ಹಾಗೂ ಹೊಸ ಕಾಮಗಾರಿಗಳಿಗೆ ಟೆಂಡರ್‌ ಕರೆಯುವಂತಿಲ್ಲ. ಆದರೆ ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ಕಾರ್ಯಾದೇಶ ಪಡೆದಿರುವ ಹಾಗೂ ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳು ಮುಂದುವರಿಸಲು ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ದೂರು ಸಲ್ಲಿಸಲು ಅವಕಾಶ: ಚುನಾವಣಾ ಆಯೋಗದ ನಿರ್ದೇಶನದಂತೆ ನೀತಿ ಸಂತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಬೈಲ್ ಅಪ್ಲಿಕೇಷನ್‌ ಮೂಲಕವೂ ದೂರುಗಳನ್ನು ದಾಖ ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಸುವಿಧಾ ವೆಬ್‌ ಸೈಟ್ ಆರಂಭ: ರಾಜಕೀಯ ಪಕ್ಷಗಳು ಸಭೆ, ಸಮಾರಂಭ ಮಾಡಲು ಆಯಾ ಸಹಾಯಕ ಚುನಾವಣಾಧಿಕಾರಿಗಳ ಹಂತದಲ್ಲಿಯೇ ಏಕಗವಾಕ್ಷಿ ಮಾದರಿಯಲ್ಲಿ ಅನುಮತಿ ಪಡೆದುಕೊಳ್ಳಲು ಸುವಿಧಾ ಎಂಬ ವೆಬ್‌ಸೈಟ್ ತೆರೆಯಲಾಗಿದ್ದು, 

ಅಲ್ಲಿಂದ ಅರ್ಜಿ ಡೌನ್‌ಲೋಡ್‌ ಮಾಡಿಕೊಂಡು ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದಾಗಿದೆ, ಜಿಲ್ಲಾ ಮಟ್ಟದಲ್ಲಿ ಚುನಾವಣಾ ಪ್ರಚಾರಕ್ಕೆ ವಾಹನ ಬಳಕೆ ಹಾಗೂ ಹೆಲಿಕಾಫ್ಟರ್‌ ಲ್ಯಾಂಡಿಂಗ್‌ ಅನುಮತಿಯನ್ನು ಚುನಾವಣಾಧಿಕಾರಿಗಳ ಹಂತದಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದರು. ಎಸ್ಪಿ ಪ್ರಕಾಶ್‌ಗೌಡ, ಅಪರ ಜಿಲ್ಲಾಧಿಕಾರಿ ವೈಶಾಲಿ ಅವರೂ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.