ಶಾಸಕ ನಾಗೇಂದ್ರ ಬಳಿ ಬಹಿರಂಗ ಕ್ಷಮೆ ಕೇಳಿದ ಪ್ರೀತಂ ಗೌಡ
ಆಕಸ್ಮಿಕವಾಗಿ ಆಗಿದೆ..ನಾವಿಬ್ಬರು ಬಹಳ ಕ್ಲೋಸ್ ಎಂದ ಬಿಜೆಪಿ ಶಾಸಕರು...
Team Udayavani, Oct 24, 2022, 4:30 PM IST
ಹಾಸನ: ಹಾಸನಾಂಬ ದೇವಾಲಯದಲ್ಲಿ ಭಾನುವಾರ ದೇವಿ ದರುಶನಕ್ಕೆ ಆದ ಅಡ್ಡಿ ಸಂಬಂಧ ಮೈಸೂರು ಚಾಮರಾಜ ಕ್ಷೇತ್ರದ ಶಾಸಕ ನಾಗೇಂದ್ರ ಅವರಿಗೆ ಭಾನುವಾರ ಆಗಿದ್ದ ಅವಮಾನಕ್ಕೆ ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ.ಗೌಡ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ.
ನಿನ್ನೆ ಮೈಸೂರು ಶಾಸಕ ನಾಗೇಂದ್ರಗೆ ಹಾಸನಾಂಬೆ ದರ್ಶನಕ್ಕೆ ಅಡ್ಡಿ ವಿಚಾರದಲ್ಲಿ ಬಹಿರಂಗವಾಗಿ ಪ್ರೀತಂಗೌಡ ನಾಗೇಂದ್ರರ ಕ್ಷಮೆ ಕೇಳಿ,ಕೆಲಸದ ಒತ್ತಡದಿಂದ ಅಧಿಕಾರಿಗಳು ಒತ್ತಡ ತಡೆಯಲಾಗಿಲ್ಲ. ಯಾವುದೇ ಪಕ್ಷದ ಚುನಾಯಿತ ಪ್ರತಿನಿಧಿ ಬಂದರೂ ಎಲ್ಲ ರೀತಿಯ ಸಹಕಾರವನ್ನು ಜಿಲ್ಲಾಡಳಿತ ನೀಡಿದೆ. ನಿನ್ನೆ ಸಮನ್ವಯದ ಕೊರತೆಯಿಂದ ಸಮಸ್ಯೆ ಆಗಿದೆ. ನನ್ನ ಹಿರಿಯರು, ಸಹೋದರ ಸಮಾನರಾದ ಅವರಿಗೆ ನಾನು ಎಲ್ಲರ ಮುಖೇನ ನಾನು ಕ್ಷಮೆ ಕೇಳುತ್ತೇನೆ ಎಂದರು.
ನನಗೆ ಯಾವುದೇ ಇಗೋ ಇಲ್ಲ ಎಂದು ಶಾಸಕ ಪ್ರೀತಂಗೌಡ ಕ್ಷಮೆ ಕೇಳಿದರು.ಯಾರೂ ಕೂಡ ತಪ್ಪು ಮಾಡಬೇಕೆಂದು ಮಾಡಲ್ಲ ಆಕಸ್ಮಿಕವಾಗಿ ಆಗಿದೆ. ಇದನ್ನು ಇಲ್ಲಿಗೆ ಮುಗಿಸೋಣ ಎಂದು ಪ್ರೀತಂಗೌಡ ಹೇಳಿದರು.
ಭಾನುವಾರ ಕುಟುಂಬ ಸಮೇತರಾಗಿ ಹಾಸನಾಂಬೆಯ ದರ್ಶನಕ್ಕೆ ಆಗಮಿಸಿದ್ದ ನಾಗೇಂದ್ರ ಅವರಿಗೆ ಗಂಟೆಗಳ ಕಾಲ ಕಾದರೂ ದರ್ಶನ ಸಾಧ್ಯವಾಗಿರಲಿಲ್ಲ. ಪ್ರೀತಂ ಗೌಡ ಅವರಿಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ ಎಂದು ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದರು.
ನಾಗೇಂದ್ರ ಸ್ಪಷ್ಟನೆ
ಇಂದು (ಸೋಮವಾರ) ಹಾಸನಾಂಬೆಯ ದರ್ಶನ ಪಡೆದ ಬಳಿಕ ಪ್ರೀತಂ ಗೌಡ ಅವರೊಂದಿಗೆ ಸುದ್ದಿಗಾರರೊಂದಿದೆ ಮಾತನಾಡಿ,ನಿನ್ನೆ ನಾನು ತಡವಾಗಿ ಬಂದಿದ್ದೆ. ಸ್ವಲ್ಪ ಸಂವಹನದಲ್ಲಿ ಗೊಂದಲವಾಗಿತ್ತು. ನಾನು ಪ್ರೀತಂಗೆ ಕರೆ ಮಾಡಲಿಲ್ಲ. ನಿನ್ನೆ ರಾತ್ರಿ ಎಸ್ ಪಿ ಅವರೂ ಕರೆ ಮಾಡಿದ್ದರು. ಇಂದು ಬೆಳಗ್ಗೆ ಮೂರು ಬಾರಿ ಪ್ರೀತಂ ಕರೆ ಮಾಡಿದ್ದಾನೆ. ನಾನು ಮೂಡಿಗೆರೆಯಿಂದ ಬಂದು ದರ್ಶನ ಮಾಡಿದ್ದೇನೆ ಎಂದರು.
ನಾನು ಹಾಸನ ಪ್ರಭಾರಿಯಾಗಿರುವ ವೇಳೆ ನನಗೆ ಪ್ರತೀ ಬಾರಿ ಪ್ರೀತಂ ಊಟ ಕೊಡುತ್ತಿದ್ದ. ಅವನು ನನ್ನ ತಮ್ಮ. ನನಗಿಂತ ಸಣ್ಣವ. ತುಂಬಾ ಸಲುಗೆ ಇದೆ, ನಾವಿಬ್ಬರೇ ಅಲ್ಲ ಬಿಜೆಪಿಯಲ್ಲಿ ಜಾತ್ಯತೀತವಾಗಿ ನಮ್ಮದೇ ಒಂದು ಆತ್ಮೀಯ ಟೀಮ್ ಇದೆ. ನಿನ್ನೆಯ ವಿಚಾರ ಅಲ್ಲಿಗೆ ಬಿಟ್ಟಿದ್ದೇವೆ ಎಂದರು.
ಲಕ್ಷಾಂತರ ಜನರು ಬಂದಾಗ ಶಾಸಕ ಯಾರು ಎಂದು ಪೊಲೀಸರಿಗೆ ತಿಳಿಯುವುದಿಲ್ಲ. ಇಂದು ದರ್ಶನ ಮಾಡಿದ್ದೇನೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದರು.
ಭಾನುವಾರ ಮಧ್ಯಾಹ್ನ ಒಂದು ಗಂಟೆಯಿಂದ ಮೂರು ಗಂಟೆಯವರೆಗೆ ನೈವೇದ್ಯ ಸಮರ್ಪಣೆ ವೇಳೆಯಲ್ಲಿ ನಾಗೇಂದ್ರ ಮತ್ತು ಕುಟುಂಬಸ್ಥರು ಆಗಮಿಸಿದ್ದರು. ದರ್ಶನ ಸಾಧ್ಯವಾಗದೆ ವಾಪಸಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್