ಹಾಸನದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ
Team Udayavani, Jun 10, 2019, 10:57 AM IST
ಹಾಸನ ನಗರಸಭೆ ಆರೋಗ್ಯ ನಿರೀಕ್ಷಕರು ಮತ್ತು ಸಿಬ್ಬಂದಿ ಸಗಟು ವ್ಯಾಪಾರಿ ಮಳಿಗೆಗಳು ಹಾಗೂ ಟ್ರಾನ್ಸ್ಪೋರ್ಟ್ ಗೋದಾಮುಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಕವರ್ಗಳನ್ನು ವಶಪಡಿಸಿಕೊಂಡರು.
ಹಾಸನ: ಪ್ಲಾಸ್ಟಿಕ್ ನಿಷೇಧ ಆಂದೋಲನ ಆರಂಭಿಸಿರುವ ಹಾಸನ ನಗರಸಭೆ ನೌಕರರು ಭಾನುವಾರವೂ ನಗರದ ವಿವಿಧ ಸಗಟು ವ್ಯಾಪಾರಿ ಮಳಿಗೆಗಳು ಹಾಗು ಟ್ರಾನ್ಸ್ಪೋರ್ಟ್ ಗೋದಾಮುಗಳ ಮೇಲೆ ದಾಳಿ ನಡೆಸಿ ಸಾವಿರಾರು ರೂ. ಮೌಲ್ಯದ ನಿಷೇಧಿತ ಪ್ಲಾಸ್ಟಿಕ್ ಕವರ್ಗಳನ್ನು ವಶಪಡಿಸಿದಕೊಂಡರು.
ನಗರದ ಶ್ರೀ ಚೌಡೇಶ್ವರಿ ದೇವಾಲಯ ರಸ್ತೆ ಬಳಿ ಇರುವ ಎಸ್.ಆರ್.ಕೆ. ಟ್ರೇಡರ್ ಗೋದಾಮು ಸೇರಿದಂತೆ ವಿವಿ ಧೆಡೆ ಹಾಸನ ನಗರಸಭೆ ಆರೋಗ್ಯಾಧಿ ಕಾರಿಗಳು ದಾಳಿ ಮಾಡಿ ಪ್ಲಾಸ್ಟಿಕ್ ಕವರ್ಗಳು, ಪ್ಲಾಸ್ಟಿಕ್ ಲೋಟಗಳು ಸೇರಿದಂತೆ ನಿಷೇಧಿತ ಪ್ಲಾಸ್ಟಿಕ್ನ್ನು ವಶಪಡಿಸಿ ಕೊಂಡರು. ನಿಷೇಧಿತ ಪ್ಲಾಸ್ಟಿಕ್ ಬಳಕೆ, ಮಾರಾಟ ಮಾಡಬಾರದೆಂದು ಹಲ ವಾರು ಬಾರಿ ಸೂಚನೆ ನೀಡಿದರೂ ಸಗಟು ವ್ಯಾಪಾರ ಮಾಡುತ್ತಿದ್ದ ಮಾಹಿತಿ ಅಧರಿಸಿ ನಗರಸಭೆ ಆರೋಗ್ಯ ನಿರೀಕ್ಷಕ ಆದೀಶ್ ಕುಮಾರ್ ಮತ್ತು ಮಂಜುನಾಥ್ ಅವರು ಸಿಬ್ಬಂದಿ ಯೊಂದಿಗೆ ದಾಳಿ ನಡೆಸಿದರು.
ಗೋದಾಮುಗಳಲ್ಲಿ ಚೀಲಗಟ್ಟಲೆ ದಾಸ್ತಾನಿದ್ದ ನಿಷೇಧಿತ ಪ್ಲಾಸ್ಟಿಕ್ನ್ನು ವಶಕ್ಕೆ ಪಡೆದುಕೊಂಡ ನಗರಸಭೆ ನೌಕರರು ವ್ಯಾಪಾರಿಗಳಿಗೆ ದಂಡ ವಿಧಿಸಿದ್ದು, ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದರು. ಹಾಸನ ನಗರದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದ್ದರೂ ಪ್ಲಾಸ್ಟಿಕ್ ಬಳಕೆ ಮಾತ್ರ ನಿಂತಿಲ್ಲ. ಹಾಗಾಗಿ ನಗರಸಭೆ ಸಿಬ್ಬಂದಿ ಸಗಟು ಮಾರಾಟ ಮಳಿಗೆಗಳು ಹಾಗೂ ಲಾರಿ ಟ್ರಾನ್ಸ್ಫೋರ್ಟ್ಗಳ ಗೋದಾಮುಗಳ ಮೇಲೆ ದಾಳಿ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ