ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌ ದೇಶದ ಆಸ್ತಿ; ಎಚ್‌.ಎಸ್‌.ಪುಟ್ಟಸೋಮಪ್ಪ

ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಶ್ರೇಷ್ಠ ಕವಿಯಾಗಿದ್ದವರು.

Team Udayavani, Jul 15, 2022, 6:11 PM IST

ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌ ದೇಶದ ಆಸ್ತಿ; ಎಚ್‌.ಎಸ್‌.ಪುಟ್ಟಸೋಮಪ್ಪ

ಹೊಳೆನರಸೀಪುರ: ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌ ಇವರು ಕೇವಲ ಕನ್ನಡದ ಆಸ್ತಿಯಲ್ಲದೆ ದೇಶದ ಆಸ್ತಿಯಾಗಿದ್ದರು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಚ್‌.ಎಸ್‌.ಪುಟ್ಟಸೋಮಪ್ಪ ತಿಳಿಸಿದರು.

ಪಟ್ಟಣದ ದಿವಂಗತ ವೀರಪ್ಪನವರ ಮಗ ವೈ.ವಿ.ಚಂದ್ರಶೇಖರ್‌ ಮನೆಯಲ್ಲಿ ಮಂಗಳವಾರ ಸಂಜೆ ಹಮ್ಮಿಕೊಂಡಿದ್ದ ದಿ.ಮಾಸ್ತಿವೆಂಕಟೇಶ್‌ ಅಯ್ಯಂಗಾರ್‌ ಇವರ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಜೊತೆಗೆ, ಕವಿಗಳಿರಬಹುದು, ಕನ್ನಡದಲ್ಲಿ ವಿಶೇಷ ಸ್ಥಾನಮಾನವನ್ನು ಗಳಿಸಿ ಶ್ರೇಷ್ಠವಾದ ಸಾಧನೆ ಮಾಡಿರುವಂತಹ ವ್ಯಕ್ತಿಗಳನ್ನು ಗುರುತಿಸಿ, ಗೌರವಿಸಿ ಅವರನ್ನು ಪ್ರತಿ ತಿಂಗಳು ಅವರ ವಿಚಾರಧಾರೆಗಳನ್ನು ಸ್ಮರಿಸುವ ಕೆಲಸ ಕಸಾಪ ಹಮ್ಮಿಕೊಂಡಿರುವುದು ಸಂತಸದ ವಿಷಯ. ಪ್ರತಿ ತಿಂಗಳೂ ಸಹ ಒಂದು ಗಂಟೆ ಸಾಹಿತ್ಯಾಸಕ್ತರು ಒಂದೆಡೆ ಸೇರಿ ಅವರ ಸಾಧನೆಗಳನ್ನು ಸ್ಮರಿಸಿಕೊಂಡಾಗ ನಮಗೂ ಸಂತಸ ಆಗುವುದರ ಜೊತೆಗೆ ಅಂತಹವರ ಆತ್ಮಕ್ಕೆ ತೃಪ್ತಿಯಾಗುವುದಲ್ಲದೆ ಪರಿಷತ್ತಿನ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದರು.

ಕನ್ನಡ ಸಾರಸ್ವತ ಲೋಕದ ಕಣ್ಣು: ಅಧ್ಯಕ್ಷತೆ ವಹಿಸಿದ್ದ ಆರ್‌.ಬಿ.ಪುಟ್ಟೇಗೌಡ ಮಾತನಾಡಿ, ಇಂದಿನ ಸಭೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿರುವವರು ಕಾರ್ಯಕ್ರಮ ದಲ್ಲಿ ಭಾಗವಹಿಸಿರುವುದು ಪ್ರಮುಖ ಅಂಶ ಎಂದು ತಿಳಿಸುತ್ತಾ ಮುಂದಿನ ದಿನಗಳಲ್ಲಿ ಹೋಬಳಿ ಘಟಕದ ಮೂಲಕ ಪ್ರತಿ ಹಳ್ಳಿಗಳಿಗೂ ಸಾಹಿತ್ಯ ಸೇವೆ ಕೊಂಡೊಯ್ಯಲಾಗುವುದರ ಜೊತೆಗೆ ಹೆಚ್ಚು ಸದಸ್ಯರುಗಳನ್ನು ನೋಂದಣಿ ಮಾಡಿಸುವುದಾಗಿ ತಿಳಿಸಿದರು. ಗೌರವ ಕಾರ್ಯದರ್ಶಿ ಕೆ. ಶಿವಕುಮಾರಾಚಾರಿ ಪ್ರಾಸ್ತಾವಿಕ ನುಡಿ ಗಳನ್ನಾಡುತ್ತಾ ಮಾಸ್ತಿಯವರು ಕನ್ನಡ ಸಾರಸ್ವತ ಲೋಕದ ಕಣ್ಣಿದ್ದ ಹಾಗೆ. ಅಂತಹವರ ಕುರಿತು ಒಂದು ವಿಚಾರ ಸಂಕಿರಣವನ್ನು ಮಾಡ್ತಾ ಇದ್ದೇವೆ.

ಜಯಂತಿ ಆಚರಣೆ ಜೂನ್‌ ಮಾಹೆಯಲ್ಲಿ ಮಾಡಲು ಸಾಧ್ಯವಾಗದ ಕಾರಣ ಅವರು ಮಾಡಿದ ಕನ್ನಡ ಸೆವೆಯನ್ನು ಗುರುತಿಸಿ ಈ ದಿನ ಆ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದರು. ಸಮಾರಂಭದಲ್ಲಿ ಹಿರಿಯ ಸಾಹಿತಿಗಳಾದ ನಾಗೇಶ್‌ ಕೌಂಡಿನ್ಯ ಮಾಸ್ತಿವೆಂಕಟೇಶ್‌ ಅಯ್ಯಂಗಾರ್‌ ಇವರ ಕೃತಿಗಳ ಬಗ್ಗೆ ಮಾತನಾಡಿದರು.

ಸಮ್ಮೇಳನದ ಮಾಜಿ ಅಧ್ಯಕ್ಷ ಗುಂಜೇವು ಅಣ್ಣಾಜಪ್ಪ, ಕಸಾಪ ಮಾಜಿ ಅಧ್ಯಕ್ಷ ಬಾ.ರಾ. ಸುಬ್ಬರಾಯ, ತಾಪಂ ಮಾಜಿ ಅಧ್ಯಕ್ಷೆ ಕೆ.ಚಂದ್ರಮತಿ, ಭಾರತ ಸೇವಾ ದಳದ ತಾಲೂಕು ಅಧ್ಯಕ್ಷ ಜಗನ್ನಾಥ್‌, ಪುರಸಭೆಯ ಮಾಜಿ ಸದಸ್ಯೆ ಲಕ್ಷ್ಮೀನಾಗರಾಜ್‌, ರೋಟರಿ ಮಾಜಿ ಅಧ್ಯಕ್ಷ ಶಿವಕುಮಾರ್‌, ಎಲೆಕ್ಟ್ರಾನಿಕ್ಸ್‌ ಉಪಕರಣಗಳ ರಿಪೇರಿ ಸಂಘದ ಅಧ್ಯಕ್ಷ ಮುರಳೀಧರ ಗುಪ್ತ ಇನ್ನು ಮುಂತಾದವರಿದ್ದರು.

ಕಾರ್ಯಕ್ರಮದಲ್ಲಿ ಲಕ್ಷ್ಮೀನಾಗರಾಜ್‌ ಇವರ ಪ್ರಾರ್ಥನೆಯೊಂದಿಗೆ ಚಾಲನೆ ಗೊಂಡಿತು. ಕೆ.ಶಿವಕುಮಾರಾಚಾರಿ ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ಮಂಜುನಾಥ ಗುಪ್ತ ಸ್ವಾಗತಿಸಿ, ಕೋಶಾಧ್ಯಕ್ಷ ಎಚ್‌.ಟಿ.ನರಸಿಂಹ ಶೆಟ್ಟಿ ವಂದಿಸಿದರು.

ಜಿಲ್ಲಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದ ಮಾಸ್ತಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಳ್ಳಿ ಮೈಸೂರು ಪಿಯು ಕಾಲೇಜಿನ ಪ್ರಾಂಶುಪಾಲಾರದ ಎಚ್‌.ಎಸ್‌. ಪ್ರಭುಶಂಕರ್‌ ಮಾತನಾಡಿ, ಮಾಸ್ತಿಯವರು ಎರಡು ಶತಮಾನಗಳನ್ನು ಕಂಡ ವರು. ಇವರು 1891ಜೂನ್‌ 6ರಲ್ಲಿ ಕೋಲಾರ ಜಿಲ್ಲೆ, ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ರಾಮಸ್ವಾಮಿ ಅಯ್ಯಂಗಾರ್‌ ಮತ್ತು ತಿರುಮಲಾಂಬ ದಂಪತಿಗಳ ಮಗನಾಗಿ ಜನಿಸಿದರು.

ಮೂಲತಃ ತಮಿಳಿನವರು. ಕಡು ಬಡತನದಲ್ಲೇ ತಮ್ಮ ವಿದ್ಯಾಭ್ಯಾಸವನ್ನು ಉನ್ನತ ಮಟ್ಟದವರೆಗೂ ತಲುಪಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಶ್ರೇಷ್ಠ ಕವಿಯಾಗಿದ್ದವರು. ಇವರು ಸಣ್ಣಕಥೆ ಗಳ ಜನಕ ಅಂತಲೂ ಪ್ರಸಿದ್ಧಿ ಪಡೆದು ಇವರು ಬರೆದ ಚಿಕ್ಕವೀರ ರಾಜೇಂದ್ರ ಕೃತಿಗೆ 1983ರಲ್ಲಿ ಜ್ಞಾನಪೀಠ ಪ್ರಶಸ್ತಿ ಲಭಿಸಿತ್ತು.

ನಾಲ್ಕು ಸಣ್ಣಕಥೆಗಳ ಸಂಪುಟವನ್ನು ಹೊರತರುವುದರ ಜೊತೆಗೆ ಇವರು ಬರೆದ ನಾಟಕ ಕಾಕನಕೋಟೆ ಹೆಚ್ಚು ಪ್ರಸಿದ್ಧಿ ಪಡೆಯುತ್ತದೆ. 1929ರಲ್ಲಿ ಬೆಳಗಾವಿಯಲ್ಲಿ ನಡೆದ 15ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಸೇವೆ ಸಲ್ಲಿಸಿ 1986 ಜೂನ್‌ 6ರಲ್ಲಿ ದೈವಾದೀನರಾದರು ಎಂದು ತಿಳಿಸಿದರು. ಇಂತಹವರ ಸಾಧನೆ ಸ್ಮರಿಸುವುದು ಕಸಾಪ ಕರ್ತವ್ಯ ಎಂದರು.

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.