ರೈಲ್ವೆ ಖಾಸಗೀಕರಣ ವಿರೋಧಿಸಿ ಧರಣಿ
Team Udayavani, Aug 11, 2020, 8:57 AM IST
ಅರಸೀಕೆರೆ: ರೈಲ್ವೆ ಖಾಸಗೀಕರಣ ವಿರೋಧಿಸಿ ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ಸಂಘಟನೆಯ ಪದಾಧಿಕಾರಿಗಳು ನಗರದ ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು.
ಸ್ಥಳೀಯ ಯೂನಿಯನ್ ಅಧ್ಯಕ್ಷ ಆಲ್ಬರ್ಟ್ಅನಿಲ್ ಮಾತನಾಡಿ, ದೇಶದಲ್ಲಿಯೇ ಬಹುದೊಡ್ಡ ಸಂಪರ್ಕ ಜಾಲ ಹೊಂದಿರುವ ರೈಲ್ವೆ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಖಾಸಗೀಕರಣ ಮಾಡಲು ಹೊರಟಿರುವುದು ದುರದೃಷ್ಟ ಕರ ಸಂಗತಿಯಾಗಿದೆ ಎಂದರು. ಇಂತಹ ಬೆಳವಣಿಗೆಯಿಂದಾಗಿ ಮುಂಬರುವ ದಿನಗಳಲ್ಲಿ ಸಹಸ್ರಾರು ನೌಕರರು ಉದ್ಯೋಗ ಕಳೆದು ಕೊಂಡು ಇಡೀ ವ್ಯವಸ್ಥೆ ಖಾಸಗಿಯವರ ತೆಕ್ಕೆಗೆ ಬೀಳುವ ಅಪಾಯವಿದ್ದು ದೇಶಾದ್ಯಂತ ರೈಲ್ ಬಚಾವೋ, ದೇಶ್ ಬಚೋವೋ ಆಂದೋಲನದ ಮೂಲಕ ಬೃಹತ್ ಹೋರಾಟ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರ ತಕ್ಷಣವೇ ಖಾಸಗೀಕರಣ ನಿರ್ಧಾರದಿಂದ ಹೊರಬರಬೇಕು. ಇಲ್ಲದಿದ್ದಲ್ಲಿ ಹೋರಾಟದ ಸ್ವರೂಪ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದರು.
ಉಪಾಧ್ಯಕ್ಷ ಅಲ್ತಾಪ್, ಕಾರ್ಯದರ್ಶಿ ಪ್ರಭುಕುಮಾರ್, ಶಶಿಧರನ್, ಕುಮಾರಸ್ವಾಮಿ, ಸಂತೋಷ್, ಪಾಲಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ