ಶಾಂತಿಗ್ರಾಮ ಟೋಲ್‌ಗೇಟ್‌ ಸಿಬ್ಬಂದಿ ವಿರುದ್ಧ ಪ್ರತಿಭಟನೆ


Team Udayavani, Feb 7, 2023, 4:20 PM IST

TDY-18

ಹಾಸನ: ರಾಷ್ಟ್ರೀಯ ಹೆದ್ದಾರಿ-75ರಲ್ಲಿರುವ ಶಾಂತಿಗ್ರಾಮ ಟೋಲ್‌ಗೇಟ್‌ನ ಸಿಬ್ಬಂದಿಯ ದೌರ್ಜನ್ಯ ಖಂಡಿಸಿ, ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಗ್ರಾಮಸ್ಥರು ಟೋಲ್‌ಗೇಟ್‌ ಬಳಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿದರು. ಶಾಂತಿಗ್ರಾಮ ಟೋಲ್‌ಗೇಟ್‌ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿ ಭಟನಾಕಾರರು, ಟೋಲ್‌ಗೇಟ್‌ನ ಮೇನೇಜ ರ್‌ಗಳಾದ ಫ್ರಾನ್ಸಿಸ್‌, ಸೋಮಶೇಖರ್‌ ಅವರು ದರ್ಪದಿಂದ ವರ್ತಿಸುತ್ತಿದ್ದಾರೆ. ಟೋಲ್‌ನ ಸಿಬ್ಬಂದಿ ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿದರು.

ಪೊಲೀಸರೂ ಬೆಂಬಲ: ಕಳೆದ 10-1 5 ವರ್ಷಗಳಿಂದಲೂ ಬೆಂಗಳೂರು ರಸ್ತೆ ಯಲ್ಲಿ ಹಾಸನದಿಂದ 14 ಕಿ.ಮೀ. ದೂರದ ಶಾಂತಿಗ್ರಾಮದ ಬಳಿ ಟೋಲ್‌ಗೇಟ್‌ ಇದೆ. ಇಲ್ಲಿ ಸ್ಥಳೀಯರ ವಾಹನಗಳಿಗೂ ಶುಲ್ಕ ವಸೂಲಿ ಮಾಡುತ್ತಿ ದ್ದಾರೆ. ರೈತರು ಹೊಲ, ಗದ್ದೆಗೆ ಹೋಗಲು, ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲೂ ಶುಲ್ಕ ಪಾವತಿಸ ಬೇಕಾಗಿದೆ. ಸ್ಥಳೀಯರಿಗೆ ಶುಲ್ಕ ವಿನಾಯ್ತಿ ನೀಡಬೇಕು ಎಂದು ಕೇಳಿದರೆ ಟೋಲ್‌ ಸಿಬ್ಬಂದಿ ದೌರ್ಜನ್ಯ ನಡೆಸುತ್ತಿ ದ್ದಾರೆ. ಸ್ಥಳೀ ಯ ಪೊಲೀಸರೂ ಟೋಲ್‌ನವರ ಬೆಂಬ ಲಕ್ಕೆ ನಿಲ್ಲುತ್ತಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

60 ಕಿ.ಮೀ. ಒಂದು ಟೋಲ್‌ ಹಾಕಿ: ಎನ್‌ ಎಚ್‌ಎಐ ನಿಯಮಗಳ ಪ್ರಕಾರ ಸ್ಥಳೀಯರಿಗೆ ಹಾಗೂ ರೈತರಿಗೆ ರಸ್ತೆ ಸುಂಕ ಪಾವತಿಯ ವಿನಾಯ್ತಿ ನೀಡಬೇಕು. ಕೇಂದ್ರ ಸರ್ಕಾರದ ಆದೇಶದಂತೆ 60 ಕಿ.ಮೀ. ಒಂದು ಟೋಲ್‌ ಗೇಟ್‌ ಇರಬೇಕು. ಆದರೆ, ಬೆಂಗಳೂರು ರಸ್ತೆಯಲ್ಲಿ ಶಾಂತಿಗ್ರಾಮ -ಹಿರಿಸಾವೆ ನಡುವೆ 47 ಕಿ.ಮೀ.ಗೆ ಒಂದು, ಹಿರೀಸಾವೆ-ಬೆಳ್ಳೂರು ಕ್ರಾಸ್‌ ನಡುವೆ 17 ಕಿ.ಮೀ.ಒಂದು ಟೋಲ್‌ ಗೇಟ್‌ ಇದೆ. ಇವುಗಳನ್ನು ತೆರವುಗೊಳಿಸಿ 60 ಕಿ.ಮೀ.ಗೆ ಒಂದು ಟೋಲ್‌ಗೇಟ್‌ ನಿರ್ಮಾಣ ಮಾಡಬೇಕು. ಟೋಲ್‌ಗೇಟ್‌ನಲ್ಲಿ ಶೌಚಾಲಯ, ಕುಡಿಯುವ ನೀರು, ಒಂದೊಂದು ಟೋಲ್‌ಗೇಟ್‌ನಲ್ಲಿ ಆಂಬ್ಯುಲೆನ್ಸ್‌ ಇರ ಬೇಕು. ಸರ್ವಿಸ್‌ ರಸ್ತೆ ನಿರ್ಮಾಣ ಮಾಡ ಬೇಕು. ಟೋಲ್‌ಗೇಟ್‌ನಲ್ಲಿ ಕನ್ನಡಿಗರಿಗೆ ಹಾಗೂ ಸ್ಥಳೀಯರಿಗೇ ಕೆಲಸ ಕೊಡಬೇಕು ಎಂದೂ ಪ್ರತಿಭಟನಾಕಾರು ಒತ್ತಾಯಿಸಿದರು.

ಪ್ರತಿಭಟನೆ ಸಂದರ್ಭದಲ್ಲಿ ಒಂದು ಹಂತದಲ್ಲಿ ಟೋಲ್‌ಗೇಟ್‌ನ ಸಿಬ್ಬಂದಿ, ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಇದ್ದುದರಿಂದ ಅಹಿತಕರ ಘಟನೆಗಳು ನಡೆಯಲಿಲ್ಲ. ಟೋಲ್‌ಗೇಟ್‌ ಕಚೇರಿ ಮಂದೆ ಪ್ರತಿಭಟನಾಕಾರರು ಶಾಮಿಯಾನ ಹಾಕಿಕೊಂಡು ಧರಣಿ ನಡೆಸಿದರು.

ಒಕ್ಕಲಿಗರ ಸೇನೆ ರಾಜ್ಯಾಧ್ಯಕ್ಷ ಎಚ್‌.ಎನ್‌. ರಾಕೇಶ್‌ಗೌಡ, ರಾಜ್ಯ ರೈತ ಸಂಘ ಜಿಲ್ಲಾ ಅಧ್ಯಕ್ಷ ಪಾಂಡುರಂಗ, ಅನಂತಕುಮಾರ್‌, ಭೋವಿ ಸಂಘದ ಜಿಲ್ಲಾಧ್ಯಕ್ಷ ಸಂದೀಪ್‌, ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಂಜಣ್ಣ, ಸುರೇಶ್‌ಬಾಬು, ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದಿನೇಶ್‌ಗೌಡ, ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘದ ಗೌರವಾಧ್ಯಕ್ಷ ಬಾಳ್ಳುಗೋಪಾಲ್‌, ಕರವೇ ಶಿವರಾಮೇಗೌಡ ಬಣ ಅಧ್ಯಕ್ಷ ಪ್ರವೀಣ್‌ಗೌಡ, ಪವನ್‌ ಕುಮಾರ್‌ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.