ಮಸೀದಿ ಧರ್ಮ ಗುರುಗಳ ಮೇಲೆ ಹಲ್ಲೆ ಪ್ರಕರಣ : ಕಿಡಿಗೇಡಿಗಳ ಸೆರೆಗೆ ಒತ್ತಾಯ


Team Udayavani, Mar 27, 2021, 2:09 PM IST

ಮಸೀದಿ ಧರ್ಮ ಗುರುಗಳ ಮೇಲೆ ಹಲ್ಲೆ ಪ್ರಕರಣ : ಕಿಡಿಗೇಡಿಗಳ ಸೆರೆಗೆ ಒತ್ತಾಯ

ಸಕಲೇಶಪುರ: ಮಸೀದಿ ಧರ್ಮ ಗುರುಗಳ ಮೇಲೆ ಹಲ್ಲೆ ನಡೆಸಿರುವ ನಾಲ್ವರು ಕಿಡಿಗೇಡಿಗಳನ್ನು ಬಂಧಿಸದಿದ್ದಲ್ಲಿ ವಿಧಾನಸೌಧ, ಐಜಿ ಮನೆ ಎದುರು ಪ್ರತಿಭಟನೆನಡೆಸಲಾಗುವುದು ಎಂದು ಪ್ರಗತಿಪರ ನಾಯಕರು ಪೊಲೀಸರನ್ನು ಎಚ್ಚರಿಸಿದ ಘಟನೆ ಪಟ್ಟಣದಲ್ಲಿ ನಡೆಯಿತು.

ಶುಕ್ರವಾರದ ನಮಾಜಿನ ನಂತರ ಪಟ್ಟಣದ ಡಿವೈಎಸ್‌ಪಿ ಕಚೇರಿ ಎದುರು ಶಾಂತಿಯುತವಾಗಿ ಮೌನ ಪ್ರತಿಭಟನೆ ನಡೆಸಿ ಮಾತನಾಡಿದ ಪ್ರತಿಭಟನಾಕಾರರು ತಾಲೂಕಿನ ಸುಂಡೆಕೆರೆ ಗ್ರಾಮದ ಮಸೀದಿ ಧರ್ಮಗುರು ಅಬ್ದುಲ್‌ನಾಸೀರ್‌ ದಾರಿಮಿ ಮೇಲೆ ನಾಲ್ವರು ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ಮಾ.21ರ ಭಾನುವಾರ ಸಂಜೆ ನಡೆದಿದೆ.

ಸುಂಡೆಕೆರೆ ಗ್ರಾಮದ ಮಸೀದಿ ಸಮೀಪದ ಸಹೋದರಿಯ ಮನೆಯಿಂದಮಸೀದಿ ಕಡೆಗೆ ಕಾಲುನಡಿಗೆಯಲ್ಲಿ ಬರುತ್ತಿದ್ದಾಗ ನಾಲ್ವರು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದವರು ಬಿರಡಹಳ್ಳಿ ಹಾಗೂ ಸುತ್ತ ಮುತ್ತಲಿನನ ಗ್ರಾಮದ ನಾಲ್ಕು ಜನರು ಎಂದು ತಿಳಿದು ಬಂದಿದೆ.

ಕಿಡಿಗೇಡಿಗಳ ಮೇಲೆ ಪೊಲೀಸ್‌ ಇಲಾಖೆ ಇಲ್ಲಿಯವರೆಗೆ ಕೈಗೊಂಡಿರುವ ಕ್ರಮ ಶ್ಲಾಘನೀಯವಾಗಿದೆ. ಆದರೆ ಕಿಡಿಗೇಡಿಗಳನ್ನು ಬಂಧಿಸಿದರೆ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಬಹುದಾಗಿದೆ. ಬಿರಡಹಳ್ಳಿಯಲ್ಲಿ ಈಹಿಂದೆಯೂ ಸಹ ಇಂತಹ ಅಹಿತಕರ ಪ್ರಕರಣ ನಡೆದಿತ್ತು.ಸುಂಡೆಕೆರೆಯಲ್ಲಿ ಕ್ರೈಸ್ತ ಮತದ ವ್ಯಕ್ತಿಯ ಮನೆ ಮುಂಭಾಗದ ಏಸು ಪ್ರತಿಮೆಯನ್ನು ಧ್ವಂಸ ಗೊಳಿಸಲಾಗಿತ್ತು.ಇತ್ತೀಚಿನ ಘಟನೆ ಅದರ ಮುಂದುವ ರಿದ ಭಾಗವಾಗಿದೆ. ಕೃತ್ಯ ನಡೆದು ಆರು ದಿನಗಳು ಕಳೆದರೂ ಆರೋಪಿಗಳನ್ನು ಬಂಧಿಸಲು ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.

ಸೋಮವಾರದೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ವಿಧಾನಸೌಧ, ಐಜಿ ಕಚೇರಿಯ ಎದುರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಮನೆ ಎದುರು ನ್ಯಾಯಕ್ಕಾಗಿಪ್ರತಿಭಟಿಸುತ್ತೇವೆ ಎಂದು ಎಚ್ಚರಿಸಿದರು.

ಜನ ಕೋವಿಡ್ ಸಾಂಕ್ರಮಿಕ ರೋಗದ ಮಧ್ಯೆ ನೆಮ್ಮದಿಯಾಗಿ ಬದುಕಲು ಮುಂದಾಗಿದ್ದಾರೆ. ಆರ್ಥಿಕ ಸಂಕಷ್ಟದ ಬದುಕನ್ನು ಮೂರಾಬಟ್ಟೆ ಮಾಡಿದೆ. ನಮ್ಮ ಮುಂದೆಅನೇಕ ಸವಾಲುಗಳಿದ್ದು ಅದನ್ನು ಎದುರಿಸಿ ಬದುಕಬೇಕಾಗಿದೆ.ಇಲ್ಲಿಯ ಶಾಂತಿ ಕದಡಲು ಕೆಲವು ಸಂಘಟನೆಗಳು ಮತ್ತುವ್ಯಕ್ತಿಗಳು ಮುಂದಾಗಿದ್ದಾರೆ. ಹಲ್ಲೆ ನಡೆಸಿರುವ ವ್ಯಕ್ತಿಗಳುಹಾಗೂ ಇವರಿಗೆ ಕುಮ್ಮಕ್ಕು ನೀಡುತ್ತಿರುವ ಸಂಘಟನೆಗಳ ವಿರುದ್ಧ ಕಠಿಣ ಕೈಗೊಳ್ಳಬೇಕು ಎಂದು ಆಗ್ರಹಿಸಿ ಡಿವೈಎಸ್‌ಪಿ ಗೋಪಿ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಜೆಡಿಎಸ್‌ ಮುಖಂಡರಾದ ಬೆಕ್ಕನಹಳ್ಳಿ ನಾಗರಾಜ್, ಕವನ್‌ ಗೌಡ, ಕಾಂಗ್ರೆಸ್‌ ಮುಖಂಡರಾದ ಹಾನುಬಾಳು ಭಾಸ್ಕರ್‌, ಮುರಳಿ ಮೋಹನ್‌, ಮಾನವಬಂಧುತ್ವ ವೇದಿಕೆ ಜೈಭೀಮ್‌ ಮಂಜು, ಮುಸ್ಲಿಂಮುಖಂಡರಾದ ಸಲೀಮ್‌ ಕೊಲ್ಲಹಳ್ಳಿ, ಆನೆಮಹಲ್‌ ಹಸೈನಾರ್‌, ಇಬ್ರಾಹಿಮ್‌ ಮುಸ್ಲಿಯಾರ್‌, ಶರೀಫ ಮಿಸ್ಬಾಯಿ, ಫಾರೂಕ್‌ ಶಾಮಿಯಾನ ಇನ್ನಿತರರು ಇದ್ದರು.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.