ಕೆರೆ ಏರಿಯಲ್ಲಿ ಜಿನುಗುತ್ತಿದೆ ನೀರು: ಆತಂಕ


Team Udayavani, Oct 11, 2020, 3:56 PM IST

HASAN-TDY-1

ಬೇಲೂರು: ತಾಲೂಕಿನ ಯಲಹಂಕ ಬ್ಯಾಡರಹಳ್ಳಿ ಕೆರೆ ಏರಿ ಕಳಪೆ ಕಾಮಗಾರಿಯಿಂದ ಒಡೆದು ಹೋಗುವ ಸ್ಥಿತಿಯಲ್ಲಿದ್ದು, ಕೂಡಲೇ ತಾಪಂ ಹಾಗೂ ತಾಲೂಕು ಆಡಳಿತ ಸೂಕ್ತ ಕ್ರಮಕೈಗೊಳ್ಳಬೇಕಿದೆ. ತಾಲೂಕಿನ ಯಲಹಂಕ ಹಾಗೂ ಬ್ಯಾಡರ ಹಳ್ಳಿಯ ದ್ಯಾವನಕೆರೆ 10 ವರ್ಷಗಳ ನಂತರ ಭರ್ತಿ ಆಗಿದೆ.

ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆ(ಪಿಎಂಜಿಎಸ್‌ವೈ)ಯಲ್ಲಿ ಏರಿ ಮೇಲಿನ ರಸ್ತೆ ಅಗಲೀಕರಣ ಮಾಡುವ ಉದ್ದೇಶದಿಂದ ಮಣ್ಣು ಸುರಿಯಲಾಗಿತ್ತು. ಸ್ಥಳೀಯರಿಗೆ ತಿಳಿಯದಂತೆ ರಾತ್ರೋ ರಾತ್ರಿ ಸಂಬಂಧಪಟ್ಟ ಅಧಿಕಾರಿಗಳು ಜೆಸಿಬಿ ಯಂತ್ರದ ಮೂಲಕ ಏರಿ ಮಣ್ಣನ್ನುಅಗೆದಿದ್ದಾರೆ.ಇದರಿಂದ ಏರಿ ಒಡೆಯುವ ಸಂಭವವಿದೆ. ತಕ್ಷಣವೇ ದುರಸ್ತಿ ಮಾಡಿಸಬೇಕಿದೆ.

ಈ ವೇಳೆ ಮಾತನಾಡಿದ ಚಿಲ್ಕೂರು ಗ್ರಾಮದ ಮಂಜೇಗೌಡ, ಈ ಏರಿಯ ಮೇಲಿನ ರಸ್ತೆಯು 15 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಹಿಂದೆ ಕೆರೆ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸುತ್ತಿದ್ದೆವು ಹತ್ತು ವರ್ಷಗಳ ನಂತರ ಕೆರೆ ಭರ್ತಿ ಆಗಿದೆ. ಪಿಎಂಜಿಎಸ್‌ವೈನಡಿಯಲ್ಲಿ ಅಧಿಕಾರಿಗಳು ಈ ಕೆರೆ ಏರಿ ರಸ್ತೆಗೆ ಡಾಂಬರೀಕರಣ ಮಾಡಿದ್ದಾರೆ. ಆದರೆ, ಅಧಿಕಾರಿಗಳ ಲೋಪದಿಂದಾಗಿ ಕೆರೆ ಏರಿಯಲ್ಲಿ ನೀರು ಜಿನುಗುತ್ತಿದ್ದು, ಒಡೆದು ಹೋಗುವ ಆತಂಕ ಎದುರಾಗಿದೆ.

ರಸ್ತೆ ಅಗಲಗೊಳಿಸುವ ಸಂದರ್ಭದಲ್ಲಿ ನೂರು ಮೀಟರ್‌ನಷ್ಟು ಏರಿ ಮಣ್ಣು ತೆಗೆದಿರುವುದರಿಂದ ತಳಭಾಗದಲ್ಲಿ ಕೆರೆಯ ನೀರು ಜಿನುಗುತ್ತಿದೆ. ಸುತ್ತಲೂ ಮಣ್ಣು ಕಸಿದು ಬಿರುಕು ಕಾಣಿಸಿಕೊಂಡಿದೆ. ಸದ್ಯದಲ್ಲೇಕೆರೆಒಡೆಯುವಸಂಭವವಿದೆ.ತಕ್ಷಣವೇಸಂಬಂಧಪಟ್ಟ ಅಧಿಕಾರಿಗಳು ಕ್ರಮಕೈಗೊಳ್ಳದಿದ್ದರೆ ಮುಂದೆ ಸಂಭವಿಸುವ ಅನಾಹುತಕ್ಕೆ ಅವರೇ ಜವಾಬ್ದಾರರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಅಲ್ಲದೆ, ಕೆರೆ ಸುತ್ತಮುತ್ತ 60 ಎಕರೆಗೂ ಹೆಚ್ಚು ಜೋಳ, ಅಡಕೆ, ಇನ್ನಿತರ ಬೆಳೆ ಇದ್ದು, ಏರಿ ಒಡೆದರೆ ಹಾಳಾಗುವ ಸಂಭವವಿದೆ. ತಕ್ಷಣವೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತಾಪಂ ಮುಂಭಾಗದಲ್ಲಿ 10 ಗ್ರಾಮದ ಜನರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗ್ರಾಮಸ್ಥರಾದ ಧರ್ಮೇಗೌಡ, ಚಂದ್ರಶೇಖರ್‌, ಶಾಂತೇಗೌಡ, ಜುಂಜೇಗೌಡ, ಮೋಹನ್‌,ಅರುಣ್‌, ಲೋಹಿತ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.