ತುಂಡು ಭೂಮಿ ಅನ್ಯಸಂಕ್ರಮಣಕ್ಕೆ ಆಗ್ರಹ

ಮಾಜಿ ಸಚಿವ ರೇವಣ್ಣ ಹೊರಡಿಸಿದ್ದ ಆದೇಶದ ವಿರುದ್ಧಹೋರಾಟಕ್ಕೆ ಶಾಸಕ ಪ್ರೀತಂ ಗೌಡ ಬೆಂಬಲ

Team Udayavani, Aug 7, 2019, 4:20 PM IST

hasan-tdy-2

ಹಾಸನದ ಸುತ್ತಮುತ್ತಲಿನ ಕೃಷಿ ತುಂಡು ಭೂಮಿಯ ಅನ್ಯ ಸಂಕ್ರಮಣಕ್ಕೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ಹಾಸನ: ನಗರದ ಸುತ್ತಮುತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ತುಂಡು ಕೃಷಿ ಭೂಮಿಯನ್ನು ವಸತಿ ಸೇರಿದಂತೆ ಇತರೆ ಉದ್ದೇಶಕ್ಕೆ ಭೂ ಪರಿವರ್ತನೆ (ಅನ್ಯಸಂಕ್ರಮಣ) ಮಾಡುವು ದನ್ನು ನಿರ್ಬಂಧಿಸಿರುವುದನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತರು ಮತ್ತು ಖಾಸಗಿ ವಸತಿ ಬಡಾವಣೆ ನಿರ್ಮಾಣದಾರರು ಪ್ರತಿಭಟನೆ ನಡೆಸಿದರು.

ಹಾಸನ ನಗರದ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿಯಲ್ಲಿನ ಕೃಷಿ ಭೂಮಿಯನ್ನು 5 ಗುಂಟೆ ಒಳಗಡೆ ಅನ್ಯ ಸಂಕ್ರಮಣ (ಅನ್ಯ ಉದ್ದೇಶಕ್ಕೆ ಭೂ ಪರಿವರ್ತನೆ) ಮಾಡಬಾರ ದೆಂದು ಎಚ್.ಡಿ.ರೇವಣ್ಣ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದರು.

ಖಾಸಗಿ ವಸತಿ ಬಡಾವಣೆ ನಿರ್ಮಾಣ ದಾರರು ರೈತರಿಂದ ಭೂಮಿ ಖರೀದಿಸಿ ಬಡಾ ವಣೆ ನಿರ್ಮಿಸುವುದರಿಂದ ರಸ್ತೆ, ಒಳ ಚರಂಡಿ ಮತ್ತಿತರ ಮೂಲ ಸೌಕರ್ಯ ಕಲ್ಪಿಸದೇ ಹೊಸ ವಸತಿ ಬಡಾವಣೆಗಳು ಕೊಳಚೆ ಪ್ರದೇಶವಾಗಿ ರೂಪುಗೊಳ್ಳುತ್ತವೆ ಎಂಬ ಹಿನ್ನೆಲೆಯಲ್ಲಿ 5 ಗುಂಟೆಯೊಳಗೆ ಭೂಮಿಯ ಅನ್ಯ ಸಂಕ್ರಮಣ ಮಾಡದಂತೆ ರೇವಣ್ಣ ಅವರು ಸರ್ಕಾರದಿಂದ ಆದೇಶ ಮಾಡಿಸಿದ್ದರು. ಹಾಸನ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕ ಗೃಹಮಂಡಳಿ ಯಿಂದ ಹೊಸ ಬಡಾವಣೆಗಳ ನಿರ್ಮಾಣಕ್ಕೂ ಮುಂದಾ ಗಿದ್ದರು. ಆನಂತರದ ರಾಜಕೀಯ ಬೆಳವಣಿಗೆ ಯಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಿ ಎಚ್.ಡಿ. ರೇವಣ್ಣ ಅವರು ಅಧಿಕಾರ ಕಳೆದು ಕೊಂಡ ನಂತರ ಈಗ ತುಂಡು ಭೂಮಿ ಅನ್ಯ ಸಂಕ್ರಮಣಕ್ಕೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆದಿದೆ.

ಡೀಸಿಗೆ ಶಾಸಕರ ಮನವಿ: ಪ್ರತಿಭಟನಾಕಾರರ ಪರವಾಗಿ ಜಿಲ್ಲಾಧಿಕಾರಿಯವರನ್ನು ಭೇಟಿ ಯಾದ ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ.ಗೌಡ ಅವರು,ನಗರದ ಸುತ್ತ ಮುತ್ತಲಿನ ರೈತರು ತಮ್ಮ ಜಮೀನಿನಲ್ಲಿ ಮನೆ ನಿರ್ಮಾಣ, ಆರ್ಥಿಕ ಸಂಕಷ್ಟಗಳ ನಿವಾರಣೆಗೆ ಜಮೀನು ಮಾರಾಟಕ್ಕೆ ಅವಕಾಶವಿಲ್ಲದಂತೆ ಹಿಂದಿನ ಸರ್ಕಾರ ಆದೇಶ ಹೊರಡಿಸಿತ್ತು. ಆ ಆದೇಶ ವನ್ನು ರದ್ದುಪಡಿಸಿ ತುಂಡು ಭೂಮಿಯ ರೈತ ರಿಗೆ ಅನುಕೂಲವಾಗುವಂತೆ ಆದೇಶ ಮಾರ್ಪಡಿಸಬೇಕೆಂದು ರೈತರು ಮನವಿ ಸಲ್ಲಿಸಿದ್ದಾರೆ.

ರೈತರಿಗೆ ಅನುಕೂಲ ಕಲ್ಪಿಸಿ: ರಾಜ್ಯದಲ್ಲಿ ಯಾವ ಜಿಲ್ಲೆಯಲ್ಲಿಯೂ ತುಂಡು ಭೂಮಿ ಅನ್ಯ ಸಂಕ್ರಮಣ ಮಾಡಬಾರದೆಂಬ ಆದೇಶ ಇಲ್ಲ. ರಾಜ್ಯಕ್ಕೊಂದು ಹಾಗೂ ಹಾಸನಕ್ಕೊಂದು ಕಾನೂನು ಮಾಡಬಾರದು. ಈ ಬಗ್ಗೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ತುಂಡು ಭೂಮಿ ರೈತರಿಗೆ ಅನುಕೂಲ ಮಾಡಿಕೊಡುವ ಭರವಸೆ ನೀಡಿದರು.

ಎರಡೂವರೆ ಸಾವಿರ ಅರ್ಜಿ: ಪ್ರತಿಭಟನಾ ಕಾರರ ಅಹವಾಲು ಆಲಿಸಿ ಮಾತನಾಡಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು, ಕೃಷಿ ಭೂಮಿಯನ್ನು ವಸತಿ ಉದ್ದೇಶಕ್ಕೆ ಪರಿವರ್ತನೆ ಮಾಡುವ ಸಂದರ್ಭದಲ್ಲಿ ಶೇ.40ರಷ್ಟನ್ನು ರಸ್ತೆ, ಒಳ ಚರಂಡಿ, ವಿದ್ಯುತ್‌ ಮಾರ್ಗ ಮತ್ತು ಸಾರ್ವಜನಿಕ ಬಳಕೆಗೆ ಬಿಡಬೇಕಾಗುತ್ತದೆ. ಒಂದು ಎಕರೆಯನ್ನು 5 ಗುಂಟೆಗಳಾಗಿ ವಿಂಗ ಡಿಸಿ ಭೂ ಪರಿವರ್ತನೆಗೆ ಅರ್ಜಿಗಳು ಸಲ್ಲಿಕೆ ಯಾಗುತ್ತಿವೆ. ಕಳೆದ 4 ತಿಂಗಳಲ್ಲಿ ಭೂ ಪರಿವರ್ತನೆ ಕೋರಿ ಸುಮಾರು ಎರಡೂವರೆ ಸಾವಿರ ಅರ್ಜಿಗಳು ಬಂದಿದೆ. ರಾಜ್ಯದಲ್ಲಿ ಇಷ್ಟೊಂದು ಅರ್ಜಿಗಳು ಯಾವ ಜಿಲ್ಲೆಯ ಲ್ಲಿಯೂ ಬಂದಿಲ್ಲ. ಈ ಸಂಬಂಧ 5 ಗುಂಟೆ ಒಳಗೆ ಇರುವವರಿಗೆ ಅನ್ಯಸಂಕ್ರಮಣ ಮಾಡಬೇಕೇ ಅಥವಾ ಕೈಬಿಡಬೇಕೇ ಎಂದು ಸರ್ಕಾರಕ್ಕೆ ಪತ್ರ ಬರೆದು ನಿರ್ದೇಶನ ಕೋರಲಾಗಿದೆ. ಸರ್ಕಾರದಿಂದ ಬರುವ ಸೂಚನೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.