ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿಗೆ ಬವಣೆ

ಮೈಸೂರು ರಸ್ತೆಯಲ್ಲಿನ ಶುದ್ಧನೀರು ಘಟಕದ ಕಾಮಗಾರಿ ಪೂರ್ಣಗೊಂಡು ವರ್ಷಗಳೇ ಕಳೆದಿದೆ.

Team Udayavani, Jun 16, 2022, 6:08 PM IST

ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿಗೆ ಬವಣೆ

ಹೊಳೆನರಸೀಪುರ: ಜಿಲ್ಲೆಯ ಬಹುತೇಕ ತಾಲೂಕು ಕೇಂದ್ರ ಸೇರಿ ದಂತೆ ಗ್ರಾಮೀಣ ಪ್ರದೇಶಗಳಲ್ಲಿ ಜನತೆ ಕುಡಿಯುವ ನೀರಿಗೆ ಹಾಹಾ ಕಾರ ಅನುಭವಿಸಬಾರದೆಂದು ಶುದ್ಧ ನೀರು ಘಟಕ ಆರಂಭಿಸಿ ಸರ್ಕಾರ ಶುದ್ಧ ಕುಡಿಯುವ ನೀರಿನ ಕೇಂದ್ರಗಳನ್ನು ಆರಂಭಿಸಿದೆ.

ಅದರಂತೆ ಪಟ್ಟಣದಲ್ಲಿಯೂ ಸಹ ಮೈಸೂರು ರಸ್ತೆ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಮೀಪ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಗೊಂಡು ವರ್ಷಗಳೆ ಕಳೆದು ಹೋಗಿದೆ. ಆದರೆ ಈ ಶುದ್ಧ ಕುಡಿಯುವ ನೀರಿನ ಘಟಕ ಸಾರ್ವಜನಿಕರಿಗೆ ಲಭ್ಯ ವಾಗದೆ ಇರುವುದು ವಿಪರ್ಯಾಸದ ಸಂಗತಿ ಆಗಿದೆ.

ಕೊಟ್ಟ ಮಾತು ತಪ್ಪಿದ್ರಾ ಶಾಸಕ ರೇವಣ್ಣ?: ಕಳದೆ ಎರಡು ವರ್ಷಗಳ ಹಿಂದೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿನ ಅನೇಕ ಗ್ರಾಮಗಳಲ್ಲಿ ಶಾಸಕ ರೇವಣ್ಣ ಅವರು ಶುದ್ಧಕುಡಿಯುವ ನೀರಿನ ಘಟಕಗಳನ್ನು ಆರಂಭಿಸಿ ಗ್ರಾಮೀಣ ಪ್ರದೇಶಗಳಲ್ಲಿನ ಜನರ ಕುಡಿಯುವ ನೀರಿನ ಸಂಕಷ್ಟ ಪರಿಹರಿಸಿದ್ದರು. ಅದರಂತೆ, ಪಟ್ಟಣದಲ್ಲಿಯೂ ಸಹ ಪುರಸಭೆ ವತಿ ಯಿಂದ ಪಟ್ಟಣದ ವ್ಯಾಪ್ತಿಯಲ್ಲಿ ಹನ್ನೆರಡು ಘಟಕ ಆರಂ ಭಿಸುವುದಾಗಿ ತಿಳಿಸಿ, ಒಂದೆರಡು ಕಡೆ ಕಾಮಗಾರಿ ಸಹ ನಡೆದಿತ್ತು. ಇದರಲ್ಲಿ ತಾಲೂಕು ಕಚೇರಿ ಮುಂಭಾಗದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಹಾಗೂ ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಅವರು ಈ ಶುದ್ಧ ನೀರು ಘಟಕಕ್ಕೆ ಶಂಕುಸ್ಥಾಪನೆ ನೇರವೇರಿಸಿ ದ್ದರು.ಶಂಕುಸ್ಥಾಪನೆ ನೇರವೇರಿಸಿ ಕೆಲವೇ ದಿನಗಳಲ್ಲಿ ಆರಂಭಗೊಂಡಿದ್ದ ಶೆಡ್‌ ಏಕಾಏಕಿ ತೆರವುಗೊಳಿಸಲಾಯಿತು.

ಶುದ್ಧ ನೀರು ಅಲಭ್ಯ: ಪ್ರಸ್ತುತ ಪಟ್ಟಣದ ಸಮೀಪದಲ್ಲೆ ಹರಿದು ಹೋಗುತ್ತಿರುವ ನದಿಯಿದ್ದರೂ ಸಹ ಪಟ್ಟಣದಲ್ಲಿ ಕುಡಿಯುವ ನೀರಿನ ಹಾಹಾಕಾರ ಇದೆ. ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸುವುದರಿಂದ ಬಹುತೇಕ ಬಡಾವಣೆಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಕಾಣಲು ಸಾಧ್ಯವಿದೆ.

ನೀರು ಸರಬರಾಜು ವ್ಯವಸ್ಥೆ ಇಲ್ಲ: ಇತ್ತೀಚಿನ ದಿನಗಳಲ್ಲಿ ಪಟ್ಟಣದ ಪುರಸಭೆ ಬಹಳಷ್ಟು ಸಮಸ್ಯೆಗಳಲ್ಲಿ ಸಿಲುಕಿದೆ. ಅವುಗಳಲ್ಲಿ ಕುಡಿ ಯುವ ನೀರಿನ ಸಮಸ್ಯೆಯೂ ಸಹ ಅಡಗಿದೆ. ಪಟ್ಟಣದ ಬಹುತೇಕ ಬಡಾವಣೆಗಳಲ್ಲಿ ಕುಡಿಯುವ ನೀರು ಸರಬರಾಜು ಇಲ್ಲದೆ, ಆಲ್ಲಿನ ಜನತೆ ನೀರಿಗಾಗಿ ಚಾತಕ ಪಕ್ಷಿಯಂತೆ ಕಾಯುವ ಪರಿಸ್ಥಿತಿಯನ್ನು ಸಾಮಾನ್ಯವಾಗಿ ಕಾಣಬಹುದಾಗಿದೆ. ಇಂತಹ ಶುದ್ಧ ಕುಡಿಯುವ ನೀರಿನ ಘಟಕಗಳು ಪಟ್ಟಣದ ಬಡಾವಣೆಗಳಲ್ಲಿ ಪುರಸಭೆ ಆರಂಬಿಸಿದ್ದೇ ಆದಲ್ಲಿ ಅಲ್ಲಿನ ಜನರಿಗೆ ತಾತ್ಕಾಲಿಕವಾಗಿಯಾದರೂ ನೀರಿನ ಸಮಸ್ಯೆ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಪ್ರಚಾರ ಸಾಕು, ನೀರು ಬೇಕು: ಜೊತೆಗೆ ಮೈಸೂರು ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಶುದ್ಧ ನೀರಿನ ಘಟಕ ಮುಂಭಾಗದಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಚಿವ ಹಾಗೂ ಶಾಸಕ ರೇವಣ್ಣ, ಭವಾನಿ ರೇವಣ್ಣ, ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಸೂರಜ್‌ ರೇವಣ್ಣ ಅವರ ಭಾವಚಿತ್ರಗಳನ್ನು ಪುರಸಭೆ ಹಾಕಿದೆ. ಅದರಂತೆ ಪಟ್ಟಣದಲ್ಲಿ ಉಳಿದಿ ರುವ ಶುದ್ಧ ನೀರು ಘಟಕಗಳನ್ನು ನಿರ್ಮಿಸಿ ಪಟ್ಟಣದಲ್ಲಿನ ಕುಡಿಯುವ ನೀರಿನ ಹಾಹಾಕಾರವನ್ನು ತಪ್ಪಿಸುವಲ್ಲಿ
ಮತ್ತು ಜನ ಪ್ರತಿನಿಧಿಗಳಿಗೆ ಕೆಟ್ಟ ಹೆಸರು ಬಾರದಂತೆ ಪುರಸಭೆ ಕ್ರಮಕೈಗೊಂಡು ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವುದೆ ಎಂದು ಕಾದು ನೋಡಬೇಕಿದೆ. ಈ ಬಗ್ಗೆ ಪುರಸಭೆ ಅಧ್ಯಕ್ಷೆ ಸುದಾನಳಿನಿ ಅವರು ಇಚ್ಛಾಶಕ್ತಿ ಪ್ರದರ್ಶಿಸಿ ಶೀಘ್ರವಾಗಿ ನಿಮಾ ìಣಕ್ಕೆ ಚಾಲನೆ ನೀಡುವರೆ ಎಂಬುದನ್ನು ಕಾದು ನೋಡ ಬೇಕಿದೆ.

ಪಟ್ಟಣದ ಮೈಸೂರು ರಸ್ತೆಯಲ್ಲಿನ ಶುದ್ಧನೀರು ಘಟಕದ ಕಾಮಗಾರಿ ಪೂರ್ಣಗೊಂಡು ವರ್ಷಗಳೇ ಕಳೆದಿದೆ. ಆದರೆ ಈ ಶುದ್ಧ ನೀರು ಘಟಕಕ್ಕೆ ನೀರಿನ ಸಂಪರ್ಕಕ್ಕೆ ಕೊಳವೆ ( ಬೋರ್‌ವೆಲ್‌) ತೆಗೆಸುವಲ್ಲಿ ತಡವಾಗಿದೆ. ಈ ಬೋರ್‌ವೆಲ್‌ ಕಳೆದ ವಾರವಷ್ಟೇ ಕೊರೆಸಲಾಗಿದ್ದು, ಭಾಗಶಃ ಕುಡಿಯುವ ನೀರಿನ ಯಂತ್ರ ಅಳವಡಿಕೆ ಒಂದೆರಡು ವಾರಗಳಲ್ಲಿ ಪೂರ್ಣಗೊಂಡು ಉದ್ಘಾ ಟನೆ ಆಗಲಿದೆ. ಪಟ್ಟಣದ ವ್ಯಾಪ್ತಿಯಲ್ಲಿ 12 ಶುದ್ಧ ನೀರು ಘಟಕ ಆರಂಭಿಸಲು ಯೋಜನೆ ರೂಪಿಸಲಾಗಿದೆ. ಆದರೆ, ಇದರಲ್ಲಿ ಎರಡು ಮಾತ್ರ ಪುರಸಭೆಯಿಂದ ಉಳಿದವುಗಳು ಜಿಲ್ಲಾ ಪಂಚಾಯಿತಿ ವತಿಯಿಂದ ಮಾಡಿಸುವ ಯೋಜನೆ ಇದೆ.
●ಶಾಂತಲಾ, ಪುರಸಭೆ ಮುಖ್ಯಾಧಿಕಾರಿ

ಈ ಶುದ್ದ ನೀರು ಘಟಕ ಕಾಮಗಾರಿ ಪೂರ್ಣಗೊಂಡು ವರ್ಷಗಳೆ ಕಳೆದಿದೆ. ಆದರೆ ಇದಕ್ಕೆ ಬೇಕಾದ ಸವಲತ್ತುಗಳ ಅಳವ ಡಿಕೆಯಲ್ಲಿ ಭಾರಿ ನಿಧಾನಗತಿಯಿಂದ ನಡೆದಿದ್ದು ತಾವು ಈ ಬಗ್ಗೆ ಕ್ರಮಕೈಗೊಂಡಿದ್ದು, ಒಂದೆರಡು ವಾರಗಳಲ್ಲಿ ಸಾರ್ವಜನಿಕರಿಗೆ ಲಭಿಸಲಿದೆ.
ಜಿ.ಕೆ.ಸುಧಾನಳಿನಿ, ಪುರಸಭೆ ಅಧ್ಯಕ್ಷ

ಈ ಶುದ್ಧ ನೀರು ಘಟಕ ನಿರ್ಮಾಣ ಕಾರ್ಯ ತ್ವರಿತಗತಿಯಿಂದ ಮಾಡಬೇಕಿತ್ತು. ಆದರೆ ಪುರಸಭೆ ಆಮೆಗತಿ ಅನುಸರಿಸಿದೆ. ಇದು ಅಧಿಕಾರಿಗಳ ಇಚ್ಛಾಶಕ್ತಿ ಕೊರತೆ ಎಂದು ಹೇಳಬಹುದಾಗಿದೆ.
●ರಾಘವೇಂದ್ರ,
ಪುರಸಭೆ ಮಾಜಿ ಸದಸ್ಯ ಹಾಗೂ ದಲಿತ ಮುಖಂಡ

●ಎನ್‌.ಎಸ್‌.ರಾಧಾಕೃಷ್ಣ

ಟಾಪ್ ನ್ಯೂಸ್

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.