ಕಾಡಾನೆಗಳಿಗೆ ರೆಡಿಯೋ ಕಾಲರ್ ಅಳವಡಿಕೆ
ಅಭಿಮನ್ಯು ಸೇರಿ ಮೂರು ಸಾಕಾನೆ ಬಳಕೆ: ಸಂರಕ್ಷಣಾಧಿಕಾರಿ ಬಸವರಾಜು
Team Udayavani, Jan 21, 2021, 12:13 PM IST
ಹಾಸನ: ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಕಾಡಾನೆಗಳ ಉಪಟಳ ನಿಯಂತ್ರಿಸಲು ನಾಲ್ಕಕ್ಕೆ ರೆಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ಜ.21ರಿಂದ ಆರಂಭವಾಗಲಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎನ್.ಬಸವರಾಜು ತಿಳಿಸಿದ್ದಾರೆ. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿರುವ ಅವರು, ಉಪಟಳ ನೀಡುತ್ತಿರುವ ಒಂಟಿ ಸಲಗ, ಮೂರು ಹೆಣ್ಣಾನೆಗಳಿಗೆ ರೆಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ಜ.27ರವರೆಗೆ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಮತ್ತಿಗೋಡು ಆನೆ ಕ್ಯಾಂಪ್ನಿಂದ ಅಭಿಮನ್ಯು ಸೇರಿ ಮೂರು ಆನೆಗಳನ್ನು ಕಾರ್ಯಾಚರಣೆಗೆ ಬಳಲಾಗುತ್ತಿದೆ. ಈಗಾಗಲೇ ಆಲೂರು ತಾಲೂಕಿನ ನಾಗಾವರದ ಶಿಬಿರಕ್ಕೆ ಮೂರು ಸಾಕಾನೆಗಳು ಬಂದಿಳಿದಿವೆ ಎಂದು ಮಾಹಿತಿ ನೀಡಿದ್ದಾರೆ.
ಅನುಮತಿ ಪಡೆದು ಕಾರ್ಯಾಚರಣೆ: ಕಾಡಾನೆಗಳಿಗೆ ರೆಡಿಯೋ ಕಾಲರ್ ಅಳವಡಿಕೆಗೆ ಅಭಿಮನ್ಯು ಸೇರಿದಂತೆ ಮೂರು ಕಾಡಾನೆ ಮತ್ತು 30 ಮಂದಿ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದೆ. ಒಂಟಿ ಸಲಗವನ್ನು ಸೆರೆಡಿದು ರೆಡಿಯೋ ಕಾಲರ್ ಅಳವಡಿಸಿ ಅದನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು. ಇನ್ನುಳಿದ ಮೂರು ಮೂರು ಹೆಣ್ಣಾನೆಗೆ ರೆಡಿಯೋ ಕಾಲರ್ಗಳನ್ನು ಮರು ಅಳವಡಿಸಿ ನಂತರ ಸೆರೆಡಿದ ಸ್ಥಳದಲ್ಲಿಯೇ ಬಿಡಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಅನುಮತಿ ಪಡೆದು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕಾಡಾನೆಗಳು ನಾಡಿಗೆ ಬಂದು ಸಾರ್ವಜನಿಕರಿಗೆ ಹಾನಿ ಮಾಡುತ್ತಿರುವ ಕೆಲವು ಪುಂಡಾನೆಗಳನ್ನು ಆಯ್ಕೆ ಮಾಡಿ, ಅವುಗಳ ಚಲನ- ವಲನ ಕಂಡುಹಿಡಿದು ಹಾನಿ ಮಾಡುವುದನ್ನು ತಡೆಗಟ್ಟಲು ಅನುಕೂಲವಾಗುವಂತೆ ರೆಡಿಯೋ ಕಾಲರ್ ಅಳವಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಹಕ್ಕಿ ಜ್ವರ ಇಲ್ಲ, ಧೈರ್ಯವಾಗಿ ಕೋಳಿ ಮಾಂಸ ತಿನ್ನಿ
ಆನೆ ಸಮಸ್ಯೆಗೆ ಶಾಶ್ವತ ಕ್ರಮ ಕೈಗೊಳ್ಳಲಿ
ಮಲೆನಾಡು ಪ್ರದೇಶದಲ್ಲಿ ಕಾಡಾನೆಗಳ ಉಪಟಳ ಹೆಚ್ಚಿದ್ದು, ಗ್ರಾಮಗಳೊಳಗೆ ಕಾಡಾನೆಗಳು ಹಾಡ ಹಗಲೇ ಸಂಚರಿಸುತ್ತಿವೆ. ಕಾಡಾನೆಗಳ ಹಾವಳಿ ತಡೆಗೆ ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಮಲೆನಾಡ ಜನರು ಒತ್ತಾಯಿಸುತ್ತಲೇ ಬಂದಿದ್ದಾರೆ. ಆದರೆ ಸರ್ಕಾರ ಆನೆ ಕಾರಿಡಾರ್ ನಿರ್ಮಾಣ ಸೇರಿದಂತೆ ಶಾಶ್ವತ ಕ್ರಮಗಳನ್ನು ಕೈಗೊಳ್ಳದೆ ಪ್ರತಿಭಟನೆಗಳು ಹೆಚ್ಚಿದಾಗ ಒಂದೆರೆಡು ಕಾಡಾನೆಗಳನ್ನು ಹಿಡಿದು ಸ್ಥಳಾಂತರಿಸಿ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದೆ. ಈಗ ಕಾಡಾನೆಗಳಿಗೆ ರೆಡಿಯೋ ಕಾಲರ್ ಅಳವಡಿಕೆ ಮಾಡುವುದರಿಂದ ಕಾಡಾನೆಗಳ ಹಾವಳಿ ತಡೆಯಲು ಸಾಧ್ಯವಿಲ್ಲ. ಶಾಶ್ವತ ಕ್ರಮಗಳ ಬಗ್ಗೆ ಸರ್ಕಾರ ಚಿಂತಿಸಬೇಕು ಎಂದು ಮಲೆನಾಡು ಪ್ರದೇಶದ ಜನರ ಆಗ್ರಹವಾಗಿದೆ.
ನಾಲ್ಕು ಆನೆಗಳಿಗೆ ರೆಡಿಯೋ ಕಾಲರ್, ಒಂದು ಆನೆ ಹಿಡಿದು ಸ್ಥಳಾಂತರಿಸಲು ಅನುಮತಿ ನೀಡಲಾಗಿದೆ. ಸರ್ಕಾರದ ಆದೇಶದಂತೆ ಗುರುವಾರದಿಂದ ಕಾರ್ಯಾಚರಣೆ ನಡೆಯಲಿದೆ. ದಸರಾ ಆನೆ ಅಭಿಮನ್ಯು, ಗಣೇಶ, ಗೋಪಾಲ ಕೃಷ್ಣ ಎನ್ನುವ ಆನೆ ಬಂದಿದೆ. ಉಳಿದ ಎರಡು ಬೆಳಗ್ಗೆ ಭಾಗಿಯಾಗಲಿವೆ. ಪೂಜೆ ಸಲ್ಲಿಸಿದ ಬಳಿಕ ಡಿಎಫ್ಒ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತದೆ.
ವಿನಯ್ಚಂದ್ರ, ವಲಯ ಅರಣ್ಯಾಧಿಕಾರಿ, ಆಲೂರು ತಾಲೂಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
BJP ಸ್ಥಳೀಯ ಮುಖಂಡರ ಅಸಹಕಾರ: ಬಿಎಸ್ವೈ ಬಳಿ ರಕ್ಷಣೆಗೆ ಮೊರೆಯಿಟ್ಟ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು