ವಿನಾಯಕ ಚತುರ್ಥಿಗೆ ವಿಘ್ನವಾದ ವರುಣ!


Team Udayavani, Jul 25, 2023, 4:24 PM IST

ವಿನಾಯಕ ಚತುರ್ಥಿಗೆ ವಿಘ್ನವಾದ ವರುಣ!

ಚನ್ನರಾಯಪಟ್ಟಣ: ಪೂರ್ವ ಮುಂಗಾರಿನಲ್ಲಿ ವರಣ ಕೈಕೊಟ್ಟು ಆಷಾಢ ಮುಗಿದ ಮೇಲೆ ಸೋನೆ ಮಳೆ ಸುರಿಯುತ್ತಿದೆ. ವಾತಾವರಣದಲ್ಲಿ ಆಗಿರುವ ಏರುಪೇರಿನಿಂದ ಗಣೇಶೋತ್ಸವ ಆಚರಣೆಗೂ ವಿಘ್ನ ಉಂಟಾಗುವ ಲಕ್ಷಣಗಳು ಗೋಚರವಾಗುತ್ತಿವೆ.

ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಂಗಳೂರು ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಭಾರಿ ಪ್ರವಾಹ ಉಂಟಾಗಿರುವುದರಿಂದ ಗಣೇಶೋತ್ಸವ ಆಚರಣೆಯನ್ನು ಅದ್ಧೂರಿಯಾಗಿ ಮಾಡುವ ಬದಲಾಗಿ ಸರಳವಾಗಿ ಆಚರಣೆ ಮಾಡಲು ಈಗಾಗಲೆ ತಾಲೂಕಿನ ಹಲವು ಸಂಘ ಸಂಸ್ಥೆಗಳು ಲೆಕ್ಕಾಚಾರ ಮಾಡುತ್ತಿವೆ. ಇನ್ನು ಉತ್ತರ ಹಾಗೂ ಈಶಾನ್ಯ ಭಾರತದಲ್ಲಿ ಪ್ರವಾಹ ಪೀಡಿತ ಪ್ರದೇಶಕ್ಕೆ ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ನೀಡುವ ಬಗ್ಗೆಯೂ ಕೆಲ ದಾನಿಗಳು ಆಲೋಚನೆ ಮಾಡಿದ್ದು ಅದ್ಧೂರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವುದು ಬೇಡ ಎನ್ನುವ ಲೆಕ್ಕಾಚಾರದಲ್ಲಿದ್ದಾರೆ.

ಸಂತ್ರಸ್ತರ ಬಾಳಿಗೆ ಬೆಳಕಾಗೋಣ: ಅರ್ಧ ದೇಶ ಹಾಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಗೆ ಮುಳುಗಿವೆ. ಇಂತಹ ವೇಳೆಯಲ್ಲಿ ನಾವು ಸಂಭ್ರಮಿಸುವುದರಲ್ಲಿ ಅರ್ಥವಿಲ್ಲ, ಸಾಂಪ್ರದಾ ಯಿಕವಾಗಿ ಚತು ರ್ಥಿ ಹಬ್ಬ ಆಚರಣೆ ಮಾಡೋಣ, ಸಂಭ್ರಮದಿಂದ ಹಬ್ಬ ಕ್ಕಾಗಿ ವೆಚ್ಚ ಮಾಡುವುದನ್ನು ನೆರೆ ಸಂತ್ರಸ್ತರಿಗೆ ನೀಡುವ ಮೂಲಕ ಸಂತ್ರಸ್ತರ ಬಾಳಿಗೆ ಬೆಳಕಾಗುವುದು ಉತ್ತಮ ಎಂಬುದನ್ನು ಅರಿತಿರುವ ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಈಗಾಗಲೇ ನೆರೆ ಸಂತ್ರಸ್ತರ ಬಗ್ಗೆ ಕೊಂಚ ಆಲೋಚನೆ ಮಾಡುತ್ತಿದ್ದಾರೆ.

ತಿಂಗಳಿನಿಂದ ಬಿಸಿಲಿಲ್ಲ: ಕಳೆದ ತಿಂಗಳಿನಿಂದ ಸೂರ್ಯ ಮರೆಯಾಗಿದ್ದು ಗಣಪತಿ ಮೂರ್ತಿ ತಯಾರಿಕರಿಗೆ ಆಂತಕ ಸೃಷ್ಟಿಯಾಗಿದೆ. ಅರೆ ಮಲೆನಾಡಿನ ವಾತಾವರಣ ಸಂಪೂರ್ಣವಾಗಿ ಮಲೆನಾಡಿನ ವಾತಾವರಣದಂ ತಾ ಗಿದೆ. ಇದರಿಂದಾಗಿ ಜೇಡಿ ಮಣ್ಣಿನಿಂದ ತಯಾ ರಾಗಿ ರುವ ಮೂರ್ತಿಗಳು ಒಣಗುತ್ತಿಲ್ಲ. ಶೀಥದ ವಾತಾ ವರಣದಲ್ಲಿ ಬೀಸುತ್ತಿರುವ ತಣ್ಣನೆ ಗಾಳಿಯಿಂದ ಮಣ್ಣಿನ ಗಣಪನ ಮೂರ್ತಿ ಬಿರುಕು ಬಿಡುತ್ತಿವೆ. ಗಾಳಿಯಿಂದ ರಕ್ಷಣೆ ಪಡೆಯಲು ಮೂರ್ತಿಗೆ ಹೊದಿಕೆ ಹಾಕಿ ಒಣಗಿ ಸುವ ಪರಿಸ್ಥಿತಿ ನಿರ್ಮಾಣ ವಾಗಿದೆ.

ಹಣಕೊಟ್ಟು ಮಣ್ಣು ತರಬೇಕಿದೆ: ಕಳೆದ ಐದು ವರ್ಷದಿಂದ ಜೇಡಿ ಮಣ್ಣಿಗೂ ಹಣ ಕೊಡಬೇಕಿದೆ. 100 ಕೆ.ಜಿ. ಮಣ್ಣಿಗೆ ನಾಲ್ಕರಿಂದ ಐದು ಸಾವಿರ ನೀಡಬೇಕಿದೆ. ಈ ಹಿಂದೆ ಜೇಡಿ ಮಣ್ಣುಗಳು ದೊರೆ ಯುತ್ತಿದ್ದ ಗ್ರಾಮದ ಕೆರೆಗಳಿಗೆ ತೆರಳಿ ತರಲಾಗುತ್ತಿತ್ತು. ಇತ್ತೀಚಿನ ದಿವಸಗಳಲ್ಲಿ ಗ್ರಾಮಸ್ಥರು ಅದಕ್ಕೆ ಅವಕಾಶ ನೀಡದೆ ಇರುವುದರಿಂದ ಹಣ ಕೊಟ್ಟು ಮಣ್ಣು ತರಬೇಕಿದೆ ಎಂದು ಮಣ್ಣಿನ ಮೂರ್ತಿ ತಯಾರಿಸುವ ಕಲಾವಿದ ಹರೀಶ ದುಬಾರಿ ಬೆಲೆಗೆ ಕಂಗಾಲಾಗಿದ್ದಾರೆ.

ಊರಿಗೊಂದು ಗಣಪ: ಗಣೇಶ ಮೂರ್ತಿ ಕೊರತೆ ಕಾಡುತ್ತಿರುವುದು ಹಾಗೂ ದೇಶದಲ್ಲಿ ಸಾವಿರಾರು ಕುಟುಂಬಗಳು ಸಂಕಷ್ಟದಲ್ಲಿ ಇರುವುದರಿಂದ ಊರಿಗೆ ಒಂದೇ ಗಣಪ ಮೂರ್ತಿ ಸ್ಥಾಪನೆ ಬಗ್ಗೆ ಚಿಂತನೆ ಮಾಡ ಬೇಕಾಗಿದೆ. ಗಲ್ಲಿ ಗಲ್ಲಿಯಲ್ಲೂ ಸ್ಥಾಪನೆ ಗೊಳ್ಳು ತ್ತಿರುವ ಮೂರ್ತಿ ಸಂಖ್ಯೆ ತಗ್ಗಿಸಿ ಒಂದೇ ಕಡೆ ಎಲ್ಲರೂ ಒಗ್ಗೂಡಿ ಹಬ್ಬ ಆಚರಿಸುವುದರಿಂದ ಸಮಾ ಜವನ್ನು ಇನ್ನಷ್ಟು ಗಟ್ಟಿಗೊಳಿಸಲು ಸಾಧ್ಯ ವಾಗುತ್ತದೆ. ಜೊತೆಗೆ ವ್ಯವಸ್ಥಿತ ಆಡಳಿತ ನಿರ್ವಹಣೆಗೂ ಅನುಕೂಲ ಎನ್ನುವ ಮಾತು ಗಳು ತಾಲೂಕಿನ ಕೆಲ ಗ್ರಾಮದಲ್ಲಿ ಕೇಳಿ ಬರುತ್ತಿವೆ.

ಪರಿಸರ ಸ್ನೇಹಿಗೆ ಮಾರು ಹೋಗುತ್ತಿದ್ದಾರೆ: ರಾಸಯನಿಕ ಬಣ್ಣ ಲೇಪಿತ ಮೂರ್ತಿ ಹಾಗೂ ನಿಷೇಧಿತ ಪ್ಲಾಸ್ಟರ್‌ ಆಫ್ ಪ್ಯಾರಿಸ್‌(ಪಿಒಪಿ) ಮೂರ್ತಿ ಪ್ರತಿಷ್ಠಾಪನೆ ಮಾಡುವುದು ಬೇಡ ಎಂಬ ಆಲೋಚನೆ ಹೊಂದಿರುವ ಭಕ್ತರು ಈಗಾ ಗಲೇ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿ ಷ್ಠಾಪನೆಗೆ ಮುಂದಾಗಿದ್ದು ಮೂರ್ತಿ ತಯಾರಿಕೆ ಮಾಡು ವವರಿ ಗೆ ಮುಂಗಡ ಹಣ ನೀಡಿ ಪರಿಸರ ಸ್ನೇಹಿ ಹಬ್ಬ ಆಚ ರಣೆಗೆ ಮುಂದಾಗುತ್ತಿರುವುದು ಶ್ಲಾಘನೀಯ ಸಂಗತಿ.

ಮಳೆಯಿಂದ ಮೂರ್ತಿ ಕೊರತೆ ಸಾಧ್ಯತೆ: ಸೋನೆ ಮಳೆಯಿಂದ ಹಲವು ರಾಜ್ಯದ ಕೆಲ ಜಿಲ್ಲೆಗಳು ಪ್ರಕೃತಿ ವಿಕೋಪಕ್ಕೆ ತುತ್ತಾಗಿವೆ. ಇನ್ನು ಉತ್ತರ ಭಾರತದಲ್ಲಿ ಮಹಾಮಳೆಗೆ ಸಾಕಷ್ಟು ರಾಜ್ಯಗಳು ಸಂಪೂರ್ಣ ಜಲಾವೃತ್ತ ಗೊಂಡಿರು ವುದರಿಂದ ವಿಘ್ನೇಶ್ವರ ಮೂರ್ತಿ ಹೆಚ್ಚು ತಯಾರಿಕೆ ಆಗಿಲ್ಲ. ಇದರಿಂದಾಗಿ ಮಹಾ ನಗರದಲ್ಲಿ ಜೇಡಿ ಮಣ್ಣಿನ ಗಣಪ ಮೂರ್ತಿ ಕೊರತೆ ಆಗುವ ಲಕ್ಷಣಗಳು ಗೋಚರಿಸುತ್ತಿದ್ದು ಅನೇಕ ಮಂದಿ ಅನ್ಯ ಮಾರ್ಗವಿಲ್ಲದೆ ಗಣೇಶ ಭಾವ ಚಿತ್ರದ ಮೊರೆ ಹೋಗಬೇಕಾಗಲಿದೆ.

ನೆರವಿನ ಹಸ್ತ ನೀಡಿ ಗಣೇಶ್‌ ಹಬ್ಬ ಸಂಭ್ರಮಿಸಿ: ಪುರಸಭೆ ವ್ಯಾಪ್ತಿ 23 ವಾರ್ಡ್‌ನಲ್ಲಿ ಇರುವ ನೂರಾರು ರಸ್ತೆಗಳಲ್ಲಿ ಪ್ರತಿ ರಸ್ತೆ, ಕೇರಿ, ಬೀದಿ ಹೀಗೆ ಸಾವಿರಾರು ವಿನಾ ಯಕ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡ ಲಾಗುತ್ತಿದೆ. ಆದರೆ, ಈ ಸಾಲಿನಲ್ಲಿ ಇದನ್ನು ತ್ಯಜಿಸಿ ಪ್ರತಿ ವಾರ್ಡ್‌ ಗೆ ಒಂದೇ ಮೂರ್ತಿ ಸ್ಥಾಪನೆ ಮಾಡುವ ಕಡೆ ಸಾರ್ವಜನಿಕರು ಚಿಂತನೆ ಮಾಡಬೇಕಿದೆ. ಗಣೇಶ ಮೂರ್ತಿ ಸ್ಥಾಪನೆಗೆ ವೆಚ್ಚ ಮಾಡುವ ಹಣವನ್ನು ಉತ್ತರ ಭಾರತದಲ್ಲಿನ ನೆರೆ ಸಂತ್ರಸ್ತ ಗ್ರಾಮಗಳಿಗೆ ಇಲ್ಲವೆ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗುವಂತೆ ಆಲೋಚನೆ ಮಾಡಬೇಕಿದೆ.

ಪ್ರಸಕ್ತ ವರ್ಷ ಹೆಚ್ಚು ಮಂದಿ ಗಣಪ ಮೂರ್ತಿ ಬೇಕೆಂದು ಮುಂಗಡವಾಗಿ ಮೂರ್ತಿಯನ್ನು ಕಾಯ್ದಿರಿಸಿಲ್ಲ. ಹಾಗಾಗಿ ಕಡಿಮೆ ಮೂರ್ತಿಯನ್ನು ತಯಾರು ಮಾಡಿದ್ದೇವೆ. ಕಳೆದ ಒಂದು ತಿಂಗಳಿನಿಂದ ವಾತಾವರಣ ಶೀಥವಾಗಿದೆ ಮೂರ್ತಿ ತಯಾರಿಕೆಗೆ ಸೂಕ್ತ ವಾತಾವರಣವಿಲ್ಲ. ●ವಸಂತ, ಜೇಡಿ ಮಣ್ಣಿನ ಗಣಪ ಮೂರ್ತಿ ತಯಾರಕ.

-ಶಾಮಸುಂದರ್‌ ಕೆ ಅಣ್ಣೇನಹಳ್ಳಿ

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.