ಮಲೆನಾಡಿನಲ್ಲಿ ಮಳೆ ಕೊರತೆ: ಬಿತ್ತನೆಗೆ ಹಿನ್ನಡೆ

ಕಳೆದ ವರ್ಷ ಅತಿವೃಷ್ಟಿ, ಈ ವರ್ಷ ಅನಾವೃಷ್ಟಿಯಿಂದ ರೈತರಿಗೆ ಸಂಕಷ್ಟ • ವಾಡಿಕೆಗಿಂತ ಶೇ.20 ಕಡಿಮೆ ಮಳೆ

Team Udayavani, Jul 19, 2019, 11:56 AM IST

hasan-tdy-1

ಸಕಲೇಶಪುರ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಭತ್ತವನ್ನು ನಾಟಿ ಮಾಡಲಾಗುತ್ತಿದೆ.

ಸಕಲೇಶಪುರ: ಮಲೆನಾಡಿನಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಮಳೆ ಆಷಾಢದಲ್ಲೇ ಕಾಣೆಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ತೀವ್ರ ಸಂಕಷ್ಟ ಎದುರಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ.

2018ರಲ್ಲಿ ಅತಿವೃಷ್ಟಿಯಿಂದ ತಾಲೂಕು ನಲುಗಿ ಹೋಗಿದ್ದು ಈ ಬಾರಿ ಅನಾವೃಷ್ಟಿಯಿಂದ ತಾಲೂಕು ತತ್ತರಿಸುವ ಸಾಧ್ಯತೆಯಿದೆ. 2019ರ ಜನವರಿ 1ರಿಂದ ಜುಲೈ 17ರವರೆಗೆ ತಾಲೂಕಿನಲ್ಲಿ ವಾಡಿಕೆಯಂತೆ 1074 ಮಿ.ಮೀ. ಮಳೆಯಾಗಬೇಕಾಗಿದ್ದು, ಆದರೆ ಕೇವಲ 864ಮಿ.ಮೀ. ಮಳೆಯಾಗಿದ್ದು ಇದರಿಂದ ಶೇ.20 ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

ತೀವ್ರ ಮಳೆ ಕೊರತೆ: ಬೆಳಗೋಡು ಹೋಬಳಿಯಲ್ಲಿ 1,002 ಮಿ.ಮೀ. ವಾಡಿಕೆ ಮಳೆಯಾಗಬೇಕಾಗಿದ್ದು ಆದರೆ ಕೇವಲ 573 ಮಿ.ಮೀ. ಮಳೆಯಾಗಿರುವುದರಿಂದ ಶೇ.43 ಮಳೆ ಕೊರತೆ ಬೆಳಗೋಡು ಹೋಬಳಿಯಲ್ಲಿ ಉಂಟಾಗಿದೆ. ಸಕಲೇಶಪುರ ಹೋಬಳಿಯಲ್ಲಿ 1,018 ಮಿ.ಮೀ. ಮಳೆಯಾಗಬೇಕಾಗಿತ್ತು. ಆದರೆ 797 ಮಿ.ಮೀ. ಮಳೆಯಾಗಿದ್ದು ಶೇ22 ಮಳೆ ಕೊರತೆ ಉಂಟಾಗಿದೆ.ಹಾನುಬಾಳ್‌ ಹೋಬಳಿಯಲ್ಲಿ 1,191 ಮಿ.ಮೀ. ಮಳೆಯಾಗಬೇಕಾಗಿದ್ದು ಆದರೆ 1,072ಮಿ.ಮೀ. ಮಳೆ ಉಂಟಾಗಿದ್ದು ಶೇ.10 ಕಡಿಮೆ ಮಳೆಯಾಗಿದೆ. ಅತಿ ಹೆಚ್ಚು ಮಳೆ ಬೀಳುವ ಹೆತ್ತೂರು ಹೋಬಳಿಯಲ್ಲಿ ವಾಡಿಕೆಯಂತೆ 1,096ಮಿ.ಮೀ. ಮಳೆಯಾಗಬೇಕಾಗಿತ್ತು. ಆದರೆ ಕೇವಲ 935 ಮಿ.ಮೀ. ಮಳೆಯುಂಟಾಗಿ ಶೇ.15 ಪ್ರಮಾಣ ಕಡಿಮೆಯಾಗಿದೆ. ಯಸಳೂರು ಹೋಬಳಿಯಲ್ಲಿ 937 ಮಿ.ಮೀ. ಮಳೆಯಾಗಬೇಕಾಗಿದ್ದು ಆದರೆ 662 ಮಿ.ಮೀ. ಮಳೆಯಾಗಿದ್ದು ಶೇ.29 ಮಳೆ ಕಡಿಮೆಯಾಗಿದೆ.

ಜುಲೈನಲ್ಲೂ ಕೃಪೆ ತೋರದ ವರುಣ: ಜೂನ್‌ ತಿಂಗಳಿನಲ್ಲಿ ಒಟ್ಟಾರೆಯಾಗಿ ಶೇ.31ರಷ್ಟು ಮಳೆಯ ಕೊರತೆ ಉಂಟಾಗಿದ್ದು ಇದೀಗ ಜುಲೈ ಮೊದಲ ವಾರದಲ್ಲಿ ಮಳೆ ಬಿದ್ದಿದ್ದು, ಎರಡನೇ ಹಾಗೂ ಮೂರನೇ ವಾರದಲ್ಲಿ ಮಳೆ ಸಂಪೂರ್ಣವಾಗಿ ಕೈಕೊಟ್ಟು ಬಿಸಿಲಿನ ವಾತವರಣ ಮೂಡಿರುವುದು ಆತಂಕಕಾರಿಯಾಗಿದೆ. ಜೂನ್‌ ಮಾಹೆಯಲ್ಲಿ ಕೇವಲ 290ಮಿ.ಮೀ. ಮಳೆಯಾಗಿದ್ದು ಇದೀಗ ಜುಲೈ 17ರವರೆಗೆ 492 ಮಿ.ಮೀ. ಮಳೆಯಾಗಿದೆ. ಮಲೆನಾಡಿನಲ್ಲಿ ಬೇರೆ ಸಮಯದಲ್ಲಿ ಮಳೆ ಕೈಕೊಟ್ಟರು ಸಹ ಜುಲೈ ಮಾಹೆಯಲ್ಲಿ ಭರ್ಜರಿಯಾಗಿ ಮಳೆ ಬರುವುದು ವಾಡಿಕೆಯಾಗಿದ್ದು ಆದರೆ ಈ ಬಾರಿ ಜುಲೈ ಮಾಹೆಯಲ್ಲಿ ಹಿಂದೆಂದೂ ಕಾಣದ ಬಿಸಿಲು ಕಾಣುತ್ತಿದೆ.

ಕಾಫಿ ಬೆಳೆಗಾರರಿಗೂ ಸಂಕಷ್ಟ: ತೀವ್ರ ಮಳೆ ಬೀಳುವ ಪ್ರದೇಶಗಳಾದ ಹೊಂಗಡಹಳ್ಳ, ವನಗೂರು, ಬಿಸಿಲೆ, ಕಾಗಿನಹರೆ, ದೇವಾಲದಕೆರೆ, ಕಾಡುಮನೆ, ಹೆಗ್ಗದ್ದೆ, ಮಾರನಹಳ್ಳಿ ಮುಂತಾದ ಕಡೆಗಳಿಗೆ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಆ ಭಾಗದ ಕಾಫಿ ಬೆಳೆಗಾರರಿಗೆ ತುಸು ಅನುಕೂಲವಾಗುವುದರಲ್ಲಿ ಅನುಮಾನವಿಲ್ಲ ಆದರೆ ಬೆಳಗೋಡು, ಸಕಲೇಶಪುರ ಸುತ್ತಮುತ್ತಲಿನ ಕೆಲವು ಗ್ರಾಮಗಳ ಕಾಫಿ ಬೆಳೆಗಾರರು ಮಳೆಯ ಕೊರತೆಯಿಂದ ತೊಂದರೆ ಅನುಭವಿಸಬೇಕಾಗುತ್ತದೆ. ಮಳೆಯ ಕೊರತೆಯ ನಡುವೆಯೂ ಕೃಷಿ ಚಟುವಟಿಕೆಗಳು ಭರದಿಂದ ನಡೆಯುತ್ತಿದೆ.

● ಸುಧೀರ್‌ ಎಸ್‌.ಎಲ್

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.