ಮಲೆನಾಡಿನಲ್ಲಿ ಮಳೆ ಕೊರತೆ: ಬಿತ್ತನೆಗೆ ಹಿನ್ನಡೆ
ಕಳೆದ ವರ್ಷ ಅತಿವೃಷ್ಟಿ, ಈ ವರ್ಷ ಅನಾವೃಷ್ಟಿಯಿಂದ ರೈತರಿಗೆ ಸಂಕಷ್ಟ • ವಾಡಿಕೆಗಿಂತ ಶೇ.20 ಕಡಿಮೆ ಮಳೆ
Team Udayavani, Jul 19, 2019, 11:56 AM IST
ಸಕಲೇಶಪುರ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಭತ್ತವನ್ನು ನಾಟಿ ಮಾಡಲಾಗುತ್ತಿದೆ.
ಸಕಲೇಶಪುರ: ಮಲೆನಾಡಿನಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಮಳೆ ಆಷಾಢದಲ್ಲೇ ಕಾಣೆಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ತೀವ್ರ ಸಂಕಷ್ಟ ಎದುರಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ.
2018ರಲ್ಲಿ ಅತಿವೃಷ್ಟಿಯಿಂದ ತಾಲೂಕು ನಲುಗಿ ಹೋಗಿದ್ದು ಈ ಬಾರಿ ಅನಾವೃಷ್ಟಿಯಿಂದ ತಾಲೂಕು ತತ್ತರಿಸುವ ಸಾಧ್ಯತೆಯಿದೆ. 2019ರ ಜನವರಿ 1ರಿಂದ ಜುಲೈ 17ರವರೆಗೆ ತಾಲೂಕಿನಲ್ಲಿ ವಾಡಿಕೆಯಂತೆ 1074 ಮಿ.ಮೀ. ಮಳೆಯಾಗಬೇಕಾಗಿದ್ದು, ಆದರೆ ಕೇವಲ 864ಮಿ.ಮೀ. ಮಳೆಯಾಗಿದ್ದು ಇದರಿಂದ ಶೇ.20 ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.
ತೀವ್ರ ಮಳೆ ಕೊರತೆ: ಬೆಳಗೋಡು ಹೋಬಳಿಯಲ್ಲಿ 1,002 ಮಿ.ಮೀ. ವಾಡಿಕೆ ಮಳೆಯಾಗಬೇಕಾಗಿದ್ದು ಆದರೆ ಕೇವಲ 573 ಮಿ.ಮೀ. ಮಳೆಯಾಗಿರುವುದರಿಂದ ಶೇ.43 ಮಳೆ ಕೊರತೆ ಬೆಳಗೋಡು ಹೋಬಳಿಯಲ್ಲಿ ಉಂಟಾಗಿದೆ. ಸಕಲೇಶಪುರ ಹೋಬಳಿಯಲ್ಲಿ 1,018 ಮಿ.ಮೀ. ಮಳೆಯಾಗಬೇಕಾಗಿತ್ತು. ಆದರೆ 797 ಮಿ.ಮೀ. ಮಳೆಯಾಗಿದ್ದು ಶೇ22 ಮಳೆ ಕೊರತೆ ಉಂಟಾಗಿದೆ.ಹಾನುಬಾಳ್ ಹೋಬಳಿಯಲ್ಲಿ 1,191 ಮಿ.ಮೀ. ಮಳೆಯಾಗಬೇಕಾಗಿದ್ದು ಆದರೆ 1,072ಮಿ.ಮೀ. ಮಳೆ ಉಂಟಾಗಿದ್ದು ಶೇ.10 ಕಡಿಮೆ ಮಳೆಯಾಗಿದೆ. ಅತಿ ಹೆಚ್ಚು ಮಳೆ ಬೀಳುವ ಹೆತ್ತೂರು ಹೋಬಳಿಯಲ್ಲಿ ವಾಡಿಕೆಯಂತೆ 1,096ಮಿ.ಮೀ. ಮಳೆಯಾಗಬೇಕಾಗಿತ್ತು. ಆದರೆ ಕೇವಲ 935 ಮಿ.ಮೀ. ಮಳೆಯುಂಟಾಗಿ ಶೇ.15 ಪ್ರಮಾಣ ಕಡಿಮೆಯಾಗಿದೆ. ಯಸಳೂರು ಹೋಬಳಿಯಲ್ಲಿ 937 ಮಿ.ಮೀ. ಮಳೆಯಾಗಬೇಕಾಗಿದ್ದು ಆದರೆ 662 ಮಿ.ಮೀ. ಮಳೆಯಾಗಿದ್ದು ಶೇ.29 ಮಳೆ ಕಡಿಮೆಯಾಗಿದೆ.
ಜುಲೈನಲ್ಲೂ ಕೃಪೆ ತೋರದ ವರುಣ: ಜೂನ್ ತಿಂಗಳಿನಲ್ಲಿ ಒಟ್ಟಾರೆಯಾಗಿ ಶೇ.31ರಷ್ಟು ಮಳೆಯ ಕೊರತೆ ಉಂಟಾಗಿದ್ದು ಇದೀಗ ಜುಲೈ ಮೊದಲ ವಾರದಲ್ಲಿ ಮಳೆ ಬಿದ್ದಿದ್ದು, ಎರಡನೇ ಹಾಗೂ ಮೂರನೇ ವಾರದಲ್ಲಿ ಮಳೆ ಸಂಪೂರ್ಣವಾಗಿ ಕೈಕೊಟ್ಟು ಬಿಸಿಲಿನ ವಾತವರಣ ಮೂಡಿರುವುದು ಆತಂಕಕಾರಿಯಾಗಿದೆ. ಜೂನ್ ಮಾಹೆಯಲ್ಲಿ ಕೇವಲ 290ಮಿ.ಮೀ. ಮಳೆಯಾಗಿದ್ದು ಇದೀಗ ಜುಲೈ 17ರವರೆಗೆ 492 ಮಿ.ಮೀ. ಮಳೆಯಾಗಿದೆ. ಮಲೆನಾಡಿನಲ್ಲಿ ಬೇರೆ ಸಮಯದಲ್ಲಿ ಮಳೆ ಕೈಕೊಟ್ಟರು ಸಹ ಜುಲೈ ಮಾಹೆಯಲ್ಲಿ ಭರ್ಜರಿಯಾಗಿ ಮಳೆ ಬರುವುದು ವಾಡಿಕೆಯಾಗಿದ್ದು ಆದರೆ ಈ ಬಾರಿ ಜುಲೈ ಮಾಹೆಯಲ್ಲಿ ಹಿಂದೆಂದೂ ಕಾಣದ ಬಿಸಿಲು ಕಾಣುತ್ತಿದೆ.
ಕಾಫಿ ಬೆಳೆಗಾರರಿಗೂ ಸಂಕಷ್ಟ: ತೀವ್ರ ಮಳೆ ಬೀಳುವ ಪ್ರದೇಶಗಳಾದ ಹೊಂಗಡಹಳ್ಳ, ವನಗೂರು, ಬಿಸಿಲೆ, ಕಾಗಿನಹರೆ, ದೇವಾಲದಕೆರೆ, ಕಾಡುಮನೆ, ಹೆಗ್ಗದ್ದೆ, ಮಾರನಹಳ್ಳಿ ಮುಂತಾದ ಕಡೆಗಳಿಗೆ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಆ ಭಾಗದ ಕಾಫಿ ಬೆಳೆಗಾರರಿಗೆ ತುಸು ಅನುಕೂಲವಾಗುವುದರಲ್ಲಿ ಅನುಮಾನವಿಲ್ಲ ಆದರೆ ಬೆಳಗೋಡು, ಸಕಲೇಶಪುರ ಸುತ್ತಮುತ್ತಲಿನ ಕೆಲವು ಗ್ರಾಮಗಳ ಕಾಫಿ ಬೆಳೆಗಾರರು ಮಳೆಯ ಕೊರತೆಯಿಂದ ತೊಂದರೆ ಅನುಭವಿಸಬೇಕಾಗುತ್ತದೆ. ಮಳೆಯ ಕೊರತೆಯ ನಡುವೆಯೂ ಕೃಷಿ ಚಟುವಟಿಕೆಗಳು ಭರದಿಂದ ನಡೆಯುತ್ತಿದೆ.
● ಸುಧೀರ್ ಎಸ್.ಎಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್