ಹಾಸನಾಂಬೆ ಭಕ್ತರಿಗೆ ದಿನವಿಡೀ ಮಳೆಯ ಕಾಟ


Team Udayavani, Oct 22, 2019, 3:00 AM IST

hasanambe-bha

ಹಾಸನ: ಕಳೆದ ನಾಲ್ಕು ದಿನಗಳಿಂದ ಸುಸೂತ್ರವಾಗಿ ಹಾಸನಾಂಬೆಯ ದರ್ಶನ ಪಡೆಯುತ್ತಿದ್ದ ಭಕ್ತರು 5 ನೇ ದಿನವಾದ ಸೋಮವಾರ ಮಳೆಯ ಕಾಟದಿಂದ ಸಂಕಷ್ಟ ಅನುಭವಿಸಿದರು. ಮಧ್ಯಾಹ್ನ 2.30 ಕ್ಕೆ ಆರಂಭವಾದ ಮಳೆ ಕೆಲಕಾಲ ಬಿಡುವು ನೀಡಿತದಾರೂ ಸಂಜೆ ಮತ್ತೆ ಆರಂಭವಾದ ಮಳೆ ರಾತ್ರಿವರೆಗೂ ಸುರಿಯುತ್ತಲೇ ಇತ್ತು.

ಸತತ ಮಳೆಯಿಂದ ಭಕ್ತರು ದೇವಾಲಯದ ಕಡೆ ಹೋಗಲೂ ಸಾಧ್ಯವಾಗಲಿಲ್ಲ. ಕಾರುಗಳಲ್ಲಿ ಮತ್ತು ಆಟೋಗಳಲ್ಲಿ ತೆರಳುವವರು ಬಿಟ್ಟರೆ ದ್ವಿಚಕ್ರ ವಾಹನಗಳಲ್ಲಿ ಹಾಗೂ ನಡಿಗೆಯಲ್ಲಿ ಭಕ್ತರು ಹಾಸನಾಂಬ ದೇವಾಲಯದತ್ತ ಹೋಗಲಾಗಿಲ್ಲ. ಮಳೆಯಿಂದಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರೂ ಪರದಾಡುವಂತಾಯಿತು. ದೇವಾಲಯದ ಸುತ್ತಮುತ್ತ ಬೀದಿ ಬದಿಯ ವ್ಯಾಪಾರಿಗಳೂ ಮಳೆಯಿಂದ ಬೇಸತ್ತು ಹೋದರು.

ಭಾನುವಾರ ರಾತ್ರಿವರೆಗೂ ಭಾರೀ ಸಂಖ್ಯೆಯಲ್ಲಿ ಭಕ್ತರು ದೇವಾಲಯದತ್ತ ಬಂದಿದ್ದರು. ಆದರೆ ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ನಿರೀಕ್ಷಿಸಿದಷ್ಟು ಪ್ರಮಾಣದಲ್ಲಿ ಭಕ್ತರು ದೇವಾಲಯದತ್ತ ಬರಲಿಲ್ಲ. ಆದರೆ ದೇವಾಲಯಕ್ಕೆ ಬಂದ ಭಕ್ತರು ಸಲೀಸಾಗಿ ನೂಕು ನುಗ್ಗಲು ಇಲ್ಲದೆ ದೇವಿಯ ದರ್ಶನ ಪಡೆದರು.

ಮುಸ್ಲಿಮರಿಂದ ಹಾಸನಾಂಬೆ ದರ್ಶನ: ಕೆಲ ಮುಸಲ್ಮಾನರೂ ಹಾಸನಾಂಬೆಯ ದೇವಾಲಯಕ್ಕೆ ಬಂದು ಸೋಮವಾರ ದೇವಿಯ ದರ್ಶನ ಪಡೆದು. ಕೆಲ ಮುಸ್ಲಿಂ ಮಹಿಳೆಯರು ತಮ್ಮ ಮಕ್ಕಳೊಂದಿಗೆ ಆಗಮಿಸಿ ಹಾಸನಾಂಬೆಯ ದರ್ಶನ ಪಡೆದರು. ಗರ್ಭ ಗುಡಿಯ ಮುಂದೆ ನಿಂತು ಪ್ರಾರ್ಥನೆ ಸಲ್ಲಿಸಿ, ಮಂಗಳಾರತಿ ಪಡೆದರು. ಕೆಲ ಪುರಷ ಮುಸಲ್ಮಾನರೂ ಆಗಮಿಸಿ ದೇವಿಯ ದರ್ಶನ ಪಡೆದರು.

ಹಾಸನಾಂಬೆಗೆ ಚಿತ್ರನಟಿ ತಾರಾ ವಿಶೇಷ ಪೂಜೆ: ಹಾಸನ, ಚಲನಚಿತ್ರ ನಟಿ ತಾರಾ ಅವರು ಕುಟುಂಬದವರೊಂದಿಗೆ ಸೋಮವಾರ ಹಾಸನಾಂಬೆಯ ದರ್ಶನ ಪಡೆದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಗರ್ಭ ಗುಡಿಯಲ್ಲಿ ಕುಳಿತು ಹಾಸನಾಂಬೆಯ ಸನ್ನಿಧಿಯಲ್ಲಿ ಕೆಲಕಾಲ ಕುಳಿತು ವಿಶೇಷ ಪೂಜೆ ಸಲ್ಲಿಸಿದರು. 76 ರ ವಯೋವೃದ್ಧ ತಾಯಿ ಪುಷ್ಪಾ ಅವರೊಂದಿಗೆ ಬಾಗಿನ ಸಮೇತರಾಗಿ ಆಗಮಿಸಿದ್ದ ತಾರಾ ಅವರು ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿಯೂ ಅರ್ಚನೆ ಮಾಡಿಸಿದರು. ನಂತರ ದರ್ಬಾರ್‌ ಗಣಪತಿ ಹಾಗೂ ಸಿದ್ದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ನೆರವೇರಿಸಿದರು.

ಪೂಜೆ ಸಲ್ಲಿಸಿ ದೇವಾಲಯದಿಂದ ಹೊರಗೆ ಬಂದ ತಾರಾ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿವರ್ಷ ನಾನು ಹಾಸನಾಂಬೆ ದರ್ಶನ ಮಾಡುತ್ತಿದ್ದೇನೆ. ಕಳೆದ ವರ್ಷ ಮಾತ್ರ ವೈಯಕ್ತಿಕ ಕಾರಣಗಳಿಂದ ಬರಲು ಸಾಧ್ಯವಾಗಿರಲಿಲ್ಲ. ಹಾಸನಾಂಬೆಯ ಮೇಲೆ ಬಹಳ ನಂಬಿಕೆ ಇದೆ ಎಂದರು. ವಿಧಾನ ಪರಿಷತ್‌ ಸದಸ್ಯ‌ ಬೋಜೇಗೌಡ ಅವರೂ ಸೋಮವಾರ ಹಾಸನಾಂಬೆಯ ದರ್ಶನ ಪಡೆದರು.

ವಿವಿಧ ಸ್ವಾಮೀಜಿಗಳಿಂದ ದೇವಿ ದರ್ಶನ: ಹಾಸನ, ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕೊಡಗಿನ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಶನಿವಾರಸಂತೆ ಮುದ್ದಿನಕಟ್ಟೆ ಮಠದ ಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ, ತೊರೆನೂರು ಮಠದ ಮಲ್ಲೇಶ್ವರ ಸ್ವಾಮೀಜಿಯವರು ಆಗಮಿಸಿ ಹಾಸನಾಂಬೆ ಮತ್ತು ಶ್ರೀ ಸಿದ್ದೇಶ್ವರ ದೇವಾಲಯಕ್ಕೆ ಸೋಮವಾರ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.