ಸೋಂಕಿನ ಬಗ್ಗೆ ಜಾಗೃತಿ ಮೂಡಿಸಿ


Team Udayavani, Jun 10, 2020, 6:46 AM IST

moodisi

ಚನ್ನರಾಯಪಟ್ಟಣ: ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೋವಿಡ್‌ 19 ವೈರಸ್‌ ನಿಯಂತ್ರಿಸಲು ಈ ವರೆಗೆ ಹೋರಾಟ ಮಾಡಿದಷ್ಟು ಮುಂದಿನ ದಿನಗಳು ಸುಲಭ ವಾಗಿಲ್ಲ. ಇದನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಸವಾಲಾಗಿ  ಸ್ವೀಕರಿಸಬೇಕು ಎಂದು ಜಿಲ್ಲಾ ಮಂತ್ರಿ ಕೆ.ಗೋಪಾಲಯ್ಯ ಹೇಳಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ನಡೆದ ಕೋವಿಡ್‌ -19 ಮೇಲ್ವಿಚಾರಣಾ ಸಭೆಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್‌ ವೇಳೆ  ಹೊರಗಿ ನಿಂದ ಯಾರೂ ತಾಲೂಕಿಗೆ ಪ್ರವೇಶ ಮಾಡು ತ್ತಿರಲಿಲ್ಲ. ಈಗ ರೈಲು ಬಸ್‌ ಸಂಚಾರ ಪ್ರಾರಂಭ ವಾಗಿದೆ. ಈ ವೇಳೆಯಲ್ಲಿ ಅಧಿಕಾರಿಗಳು ಎಚ್ಚರ ತಪ್ಪಿದರೆ ಸಾರ್ವಜನಿಕರು ಸಂಕಷ್ಟ ಎದುರಿಸ ಬೇಕಾಗುತ್ತಿದೆ. ಕೋವಿಡ್‌ 19  ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿ ಸುವ ಜವಾಬ್ದಾರಿ ನಿಮ್ಮದಾಗಿದೆ ಎಂದರು.

ಕುಡಿಯುವ ನೀರಿಗೆ ಅನುದಾನ ಕೊಡಿ: ಶಾಸಕ ಸಿ.ಎನ್‌.ಬಾಲಕೃಷ್ಣ ಮಾತನಾಡಿ, ಪಟ್ಟಣ ದಿನೇ ದಿನೆ ಬೆಳೆಯುತ್ತಿದೆ. ಈಗಾಗಲೆ ಮೂರನೇ ಹಂತದ ಕುಡಿಯುವ ನೀರಿನ ಯೋಜನೆ ಇದ್ದರೂ ಕೆಲ ಬಡಾವಣೆಗೆ ಪೈಪ್‌ ಲೈನ್‌ ಮಾಡಲು  ಅನುದಾನವಿಲ್ಲ 25 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಎಸ್‌ಎಫ್ಸಿ ಅನುದಾನ ಕೊಡಿ: ಎಸ್‌ಎಫ್ಸಿ ಅನುದಾನವನ್ನು ಸರ್ಕಾರ ಹಿಂಪಡೆದಿದೆ. ಅದನ್ನು ಪುನಃ ಕೊಡಿಸಲು ಮಂತ್ರಿಗಳು ಮುಂದಾಗಬೇಕು. ಪಂಚಾಯತ್‌ ರಾಜ್‌ ಇಲಾಖೆಯ 12 ಕೋಟಿ ರೂ. ಹಣವನ್ನು ಖಜಾನೆಯಿಂದ ಸರ್ಕಾರ  ಹಿಂಪಡೆದಿದೆ. ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ ಕೊಡಿಸಬೇಕಾಗಿದೆ ಎಂದರು.

ಆಶ್ರಯ ಮನೆ ಅನುದಾನ 20 ಕೋಟಿ ಬಾಕಿ ಇದೆ. 65 ಕೋಟಿ ರೂ. ನೀರಾವರಿ ಇಲಾಖೆ ಹಣ ವಾಪಸಾಗಿದೆ. ದಯಮಾಡಿ ಈ ಎಲ್ಲಾ ಅನುದಾನ ಕೊಡಿಸಲು  ಮುಂದಾಗ ಬೇಕು. 53.76 ಕೋಟಿ ರೂ. ವೆಚ್ಚದಲ್ಲಿ ನರೇಗಾ ಕಾಮಗಾರಿ ಮಾಡಿಸಲಾಗುತ್ತಿದೆ. ನಫೆಡ್‌ ನಿಂದ ಕೊಬ್ಬರಿ ಖರೀದಿಗೆ ಮುಂದಾಗಬೇಕು ಎಂದು ಮನವಿ ಮಾಡಿದರು.

ಪರಿಷತ್‌ ಸದಸ್ಯ ಎಂ.ಎ. ಗೋಪಾಲಸ್ವಾಮಿ ಮಾತನಾಡಿ,  ಜಿಲ್ಲೆ ಹಾಗೂ ತಾಲೂಕಿನ ಏತ ನೀರಾವರಿ ಯೋಜನೆಗೆ ಕೃಷಿ ಭೂಮಿ ಕಳೆದುಕೊಂಡಿರುವ ಸಾಕಷ್ಟು ರೈತರಿಗೆ ಇನ್ನೂ ಪರಿಹಾರದ ಹಣ ದೊರೆತಿಲ್ಲ. ಕೂಡಲೇ ಪರಿಹಾರ ಬಿಡುಗಡೆ ಮಾಡಿ ರೈತರ ಕಷ್ಟಕ್ಕೆ ಸ್ಪಂದಿಸಬೇಕು. ಏತನೀರಾವರಿ  ಯೋಜನೆ ಕಾಮಗಾರಿ ಚುರುಕುಗೊಳಿಸಲು ಅಧಿಕಾರಿಗಳ ಸಭೆ ನಡೆಸಬೇಕು ಎಂದರು. ಡೀಸಿ ಆರ್‌.ಗಿರೀಶ್‌, ಎಸಿ ಡಾ. ನವೀನ್‌ ಭಟ್‌, ಜಿಪಂ ಸಿಇಒ ಪರಮೇಶ್ವರ್‌, ಎಸ್‌ಪಿ ಶ್ರೀನಿವಾಸ್‌ಗೌಡ, ತಹಶೀಲ್ದಾರ್‌ ಮಾರುತಿ, ಮೊದಲಾದವರು  ಇದ್ದರು.

ಹಾಳಾಗಿರುವ ಬೆಳೆ ಸಮೀಕ್ಷೆ ಮಾಡಿ: ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳದೇ ಗ್ರಾಮಗಳಿಗೆ ತೆರಳಿ ಕೋವಿಡ್‌ 19 ವೇಳೆ ಹಾಳಾಗಿರುವ ಹೂವು, ತರಕಾರಿ ಬೆಳೆ ಸಮೀಕ್ಷೆ ಮಾಡಬೇಕು. ನಷ್ಟಕ್ಕೊಳಗಾದ ರೈತರಿಗೆ ಸರ್ಕಾರದಿಂದ ಪರಿಹಾರ ನೀಡಲು ವರದಿ ಸಿದಟಛಿಪಡಿಸ ಬೇಕು ಎಂದು ಸಚಿವ ಗೋಪಾಲಯ್ಯ ಹೇಳಿದರು. ಮುಂಗಾರು ಆರಂಭ ವಾಗುತ್ತಿರುವುದರಿಂದ ಬಿತ್ತನೆ ಬೀಜ ಗೊಬ್ಬರ ಸಮಸ್ಯೆಯಾಗದಂತೆ ನೋಡಿಕೊಳ್ಳ ಬೇಕು ಎಂದು ಸೂಚಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.