ಪ್ರಭಾವಿಗಳಿಂದ ರಾಜಕಾಲುವೆ ಒತ್ತುವರಿ; ಕ್ರಮ ಕೈಗೊಂಡಿಲ್ಲ


Team Udayavani, Mar 22, 2021, 2:56 PM IST

ಪ್ರಭಾವಿಗಳಿಂದ ರಾಜಕಾಲುವೆ ಒತ್ತುವರಿ; ಕ್ರಮ ಕೈಗೊಂಡಿಲ್ಲ

ಚನ್ನರಾಯಪಟ್ಟಣ: ಪಟ್ಟಣದ ಉದಯಗಿರಿ ಬಡಾವಣೆಯಲ್ಲಿ ಪ್ರಭಾವಿಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡು ತಮ್ಮ ನಿವೇಶನದೊಂದಿಗೆ ತಡೆ ಗೋಡೆ ನಿರ್ಮಾಣ ಮಾಡಿಕೊಂಡು ತೊಂದರೆನೀಡುತ್ತಿದ್ದಾರೆ ಎಂದು ನಿವೃತ್ತ ಎಂಜಿನಿಯರ್‌ ದೇವರಾಜು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಎರಡು ವರ್ಷದ ಹಿಂದೆ ಬಡಾವಣೆಗೆ ಒಳಚರಂಡಿ ಕಾಮಗಾರಿ ಮಾಡಿಸಲು ಸರ್ಕಾರ 5 ಕೋಟಿ ರೂ.ಅನುದಾನ ನೀಡಿದರೆ, ನಾಲ್ಕು ತಿಂಗಳ ಹಿಂದೆ ಕಾಮಗಾರಿ ಮಾಡಿಸಲು ಶಾಸಕರು, ಪುರಸಭಾಆಡಳಿತ ಮಂಡಳಿ ಪೂಜೆ ನೆರವೇರಿಸಿತು. ಆದರೆ,ಈಗ ಪ್ರಭಾವಿಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಾಮಗಾರಿ ಮಾಡಲು ಬಿಡದೇವಾರ್ಡ್‌ ನಿವಾಸಿಗಳಿಗೆ ಸಮಸ್ಯೆ ಮಾಡುತ್ತಿದ್ದಾರೆ ಎಂದು ದೂರಿದರು.

ಗ್ರಾಮದ ನಕಾಶೆ, ಬಡಾವಣೆ ಯೋಜನೆಯಲ್ಲಿರಾಜಕಾಲುವೆ ಇದೆ. ಆದರೆ, ಕೆಲ ಹಣವಂತರು,ರಾಜಕೀಯ ಮುಖಂಡರು ಒತ್ತುವರಿ ಮಾಡಿಕೊಂಡಿದ್ದಾರೆ. ಮಳೆನೀರು, ಕೊಳಚೆ ನೀರು ಮುಂದೆಹರಿಯದಂತಾಗಿದೆ. ಈ ಬಗ್ಗೆ ಪುರಸಭೆ, ಕಂದಾಯಇಲಾಖೆ ಗಮನಕ್ಕೆ ತಂದರೂ ತೆರವು ಮಾಡಿಸದೇ,ಮುಖ್ಯಾಧಿಕಾರಿಗಳು, ತಹಶೀಲ್ದಾರ್‌, ಶಾಸಕರುಮೌನಕ್ಕೆ ಶರಣಾಗಿದ್ದಾರೆ. ಇದರಿಂದ ಒಳಚರಂಡಿಕಾಮಗಾರಿ ಮಾಡುವ ಗುತ್ತಿಗೆದಾರ ಕೆಲಸ ನಿಲ್ಲಿಸಿದ್ದಾರೆ ಎಂದು ತಿಳಿಸಿದರು.

ನೋಟಿಸ್‌ ಮಾತ್ರ ಜಾರಿ: ಈಗಾಗಲೇ ಸರ್ಕಾರ 4.4 ಕೋಟಿ ರೂ. ಅನುದಾನ ನೀಡಿ ಟೆಂಡರ್‌ ಕರೆದು ಕಾಮಗಾರಿ ಮಾಡುವ ವೇಳೆ ಈ ರೀತಿ ಅಡ್ಡಿ ಮಾಡುತ್ತಿರುವುದು ಎಷ್ಟು ಸರಿ? ಈ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದೆ. ತಹ ಶೀಲ್ದಾರ್‌ ಜೆ.ಬಿ. ಮಾರುತಿ ಒತ್ತುವರಿದಾರರಿಗೆ ನೋಟಿಸ್‌ ನೀಡಿರುವುದು ಬಿಟ್ಟರೆ? ಮತ್ತೇನು ಮಾಡಿಲ್ಲ ಎಂದು ಅಪಾದಿಸಿದರು.

ಕ್ಷೇತ್ರದತ್ತ ಸುಳಿಯುತ್ತಿಲ್ಲ: ಶಾಸಕ ಬಾಲಕೃಷ್ಣ ಅವರ ಮನೆ ಬಾಗಿಲಿಗೆ ಬಡಾವಣೆ ನಿವಾಸಿಗಳೂ ಸಾಕಷ್ಟುಬಾರಿ ಅಲೆದರೂ ಅವರು ಓಟ್‌ ಬ್ಯಾಂಕ್‌ ರಾಜ ಕಾರಣ ಮಾಡುತ್ತಿದ್ದಾರೆ. ಇನ್ನು ಶಾಸಕರ ಬೆಂಬಲಿಗರೆನ್ನಲಾದ ಅನಿಲ್‌ ಪತ್ನಿ ರೇಖಾ ವಾರ್ಡ್‌ನಸದಸ್ಯೆ. ಈ ವರೆಗೂ ವಾರ್ಡ್‌ಗೆ ಭೇಟಿ ನೀಡಿ ಜನರಸಮಸ್ಯೆ ಕೇಳುತ್ತಿಲ್ಲ, ಪುರಸಭಾ ಅಧ್ಯಕ್ಷ ನವೀನ್‌ಕೂಡ ಇತ್ತ ಸುಳಿಯುತ್ತಿಲ್ಲ, ಇದನ್ನು ಗಮನಿಸಿದರೆಜನಪ್ರತಿನಿಧಿಗಳು ರಾಜಕಾಲುವೆ ಒತ್ತುವರಿ ಮಾಡಿರುವ ಪ್ರಭಾವಿಗಳ ಪರ ಇರುವುದು ಮೇಲ್ನೋ ಟಕ್ಕೆತಿಳಿಯುತ್ತಿದೆ ಎಂದು ಹೇಳಿದರು.

ಕೋರ್ಟ್‌ ಮೆಟ್ಟಿಲೇರಲು ಚಿಂತನೆ: ವಾರ್ಡ್‌ನಲ್ಲಿಸಮುದಾಯ ಭವನ ಇದ್ದು, ತಿಂಗಳಲ್ಲಿ ಹತ್ತಾರುವಿವಾಹಗಳು ನಡೆಯುತ್ತಿವೆ. ಅಲ್ಲಿನ ಕೊಳಚೆ ನೀರು ಮುಂದೆ ಹರಿಯುತ್ತಿಲ್ಲ. ಇದರಿಂದ ಸಾಕಷ್ಟು ತೊಂದರೆ ಆಗುತ್ತಿದೆ. 8 ವರ್ಷದಿಂದ ಸಮಸ್ಯೆ ಬಗೆಹರಿಸದೇ ಅಧಿಕಾರಿಗಳು ಹಣವಂತರ ಪರವಾಗಿ ನಿಲ್ಲುತ್ತಿದ್ದಾರೆ. ಇದೇ ರೀತಿಯಲ್ಲಿ ಮುಂದುವರಿದರೆ ಮಿನಿ ವಿಧಾನಸೌಧ, ಪುರಸಭೆ ಮುಂದೆ ಧರಣಿ ನಡೆಸಲಾಗುವುದು. ಇಲ್ಲವೆ, ಲೋಕಾಯುಕ್ತ ಕೋರ್ಟ್‌ ಮೆಟ್ಟಿಲು ಏರಲಾಗುವುದು ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಉದಯಗಿರಿಬಡಾವಣೆ ವಾಸಿ ಗಳಾದ ನಾಗರಾಜು, ಚೇತನ್‌, ಆನಂದ್‌, ಮಂಜು ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.