ರಣಘಟ್ಟ ಯೋಜನೆ ಕಾಮಗಾರಿ ಚುರುಕುಗೊಳಿಸಿ


Team Udayavani, Apr 25, 2022, 2:57 PM IST

Untitled-1

ಹಳೇಬೀಡು: ರಣಘಟ್ಟ ಶಾಶ್ವತ ನೀರಾವರಿ ಯೋಜನೆ ಕಾಮಗಾರಿಯನ್ನು ಶಾಸಕ ಕೆ.ಎಸ್‌.ಲಿಂಗೇಶ್‌ ವೀಕ್ಷಿಸಿದರು.

ಪಟ್ಟಣದ ಸಮೀಪದ ಪ್ರಸಾದಿಹಳ್ಳಿ ಬಳಿ ಪ್ರಾರಂಭವಾಗಿರುವ ದ್ವಾರ ಸಮುದ್ರ ಕೆರೆಗೆ ನೀರು ಹರಿಸುವ ರಣಘಟ್ಟ ಶಾಶ್ವತ ನೀರಾವರಿ ಯೋಜನೆ ಕಾಮಗಾರಿ ವೀಕ್ಷಿಸಿ ಕಾಮಗಾರಿ ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

128 ಕೋಟಿ ರೂ.ಯೋಜನೆ: ದಶಕಗಳ ಕನಸಾಗಿರುವ ಹಳೇಬೀಡು ಮಾದೀಹಳ್ಳಿ ಹೋಬಳಿ ಸೇರಿ ದಂತೆ ಸುಮಾರು 150ಕ್ಕೂ ಹೆಚ್ಚು ಗ್ರಾಮಗಳಿಗೆ ಅನೂಕೂಲ ಕಲ್ಪಿಸಿಕೊಡುವ ರಣಘಟ್ಟ ಶಾಶ್ವತ ನೀರಾವರಿ ಯೋಜನೆ ಕಾಮಗಾರಿ ಪ್ರಾರಂಭವಾಗಿದೆ. ಬೇ ಲೂರು ಕ್ಷೇತ್ರದ ಶಾಸಕರ ಪ್ರಯತ್ನ, ಇಚ್ಛಾಶಕ್ತಿ ಹಾಗೂ ರೈತರ, ಸ್ವಾಮೀಜಿಗಳ ಅವಿರತ ಹೋರಾಟದ ಫ‌ಲವಾಗಿ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಬಜೆ ಟ್‌ನಲ್ಲಿ 120ಕೋಟಿ ರೂ.ಹಣ ಮೀಸಲಿಟ್ಟರು. ಬಳಿಕ ಮಾಜಿ ಸಿಎಂ ಯಡಿಯೂರಪ್ಪನವರು ಅದಕ್ಕೆ ಮತ್ತಷ್ಟು 8 ಕೋಟಿ ಹಣ ಸೇರಿಸಿ ಕ್ಯಾಬಿನೆಟ್‌ನಲ್ಲಿ ಅನುಮೋದನೆ ನೀಡಿದರು.

ಇದರ ಪ್ರತಿಫ‌ಲವಾಗಿ ಕಾಮಗಾರಿ ಪ್ರಾರಂಭವಾಗಿದ್ದು, ಈ ಕಾಮಗಾರಿ ಪ್ರತಿಯೊಂದು ಹಂತವನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದರು.

ನಾಲ್ಕುವರೆ ಕಿ.ಮೀ.ಸುರಂಗ ಮಾರ್ಗ: ಪ್ರತಿಷ್ಠಿತ ಬಿಎಸ್‌ಆರ್‌ ಕಂಪನಿಗೆ 128 ಕೋಟಿ ರೂ.ವೆಚ್ಚದ ಕಾಮಗಾರಿ ಟೆಂಡರ್‌ ನೀಡಿದ್ದು, ದ್ವಾರಸಮುದ್ರ ಕೆರೆಗೆ ನೀರು ಹರಿಯಬೇಕಾದರೆ ಸುಮಾರು ನಾಲ್ಕುವರೆ ಕಿ. ಮೀ.ದೂರದವರೆಗೂ ಸುರಂಗ ಮಾರ್ಗ ಕೊರೆದು ನೀರು ಸರಾಗವಾಗಿ ಸಮತೋಲನ ಮಟ್ಟದಲ್ಲಿ ಹರಿಯುವಂತೆ ಮಾಡಬೇಕಾ ಗಿದ್ದು, ಎಲ್ಲ ರೀತಿಯ ಅತ್ಯಾಧುನಿಕ ಯಂತ್ರೋಪಕರಣಗಳ ಸಹಾಯದಿಂದ ಕಾಮಗಾರಿ ನಡೆಯುತಿದೆ. ಶೀರ್ಘ‌ವಾಗಿ ಪೂರ್ಣಗೊಂಡರೆ ಮೂರು ಹೋಬಳಿಗಳ ರೈತರ ಕನಸು ನನಸಾದಂತಾಗುತ್ತದೆ.

ಕಾಮಗಾರಿ ಚುರುಕಿಗೆ ಸೂಚನೆ: ಈಗಾಗಲೆ ಕಾಮಗಾರಿ ಪ್ರಾರಂಭವಾಗಿ 2 ತಿಂಗಳು ಕಳೆದಿವೆ. ಸುಮಾರು 40ರಿಂದ 50 ಮೀಟರ್‌ ಸುರಂಗ ಕೊರೆದಿದ್ದು, ಮೊದಲ ಹಂತದಲ್ಲಿ ಕಾಮಗಾ ರಿ ವೇಳೆ ಜೇಡಿ ಹಾಗೂ ಸಡಿಲ ಮಣ್ಣು ಸಿಗುತ್ತಿದ್ದು ಕಾಮಗಾರಿ ನಿಧಾನವಾಗಿದೆ. 100 ಮೀ.ಹೋದ ನಂತರದಲ್ಲಿ ಕಾಮಗಾರಿ ಚುರುಕುಗೊಳ್ಳುತ್ತದೆ ಎಂದು ಮುಖ್ಯ ಎಂಜೀನಿಯರ್‌ ಮಾಹಿತಿ ನೀಡಿದರು.

ನಿಗದಿತ ಸಮಯದಲ್ಲಿಯೇ ಕಾಮಗಾರಿ ಪೂರ್ಣಗೊಂಡು ದ್ವಾರಸಮುದ್ರ ಕೆರೆಗೆ ನೀರು ಹರಿಸಬೇಕು. ಹೀಗಾಗಿ ಯಾವುದೇ ಕಾರಣ ಹೇಳದೇ ಕಾಮಗಾರಿ ಚುರುಕುಗೊಳಿಸಬೇಕು. ನಾಲ್ಕು ಕಡೆ ಸುರಂಗ ಮಾರ್ಗ ಕೊರೆಯುವ ಕೆಲಸ ಶೀರ್ಘ‌ದಲ್ಲಿ ಪ್ರಾರಂಭಿಸಬೇಕು. ಮಳೆಗಾಲ, ಚಳಿಗಾಲದ ಕಾರಣ ಹೇಳದೇ ಭೂಮಿಯ ಮೇಲ್ಭಾಗದ ಕಾಮಗಾರಿ ಹಾಗೂ ಸುರಂಗದ ಕಾಮಗಾರಿ ಕೆಲಸ ನಿರಂತರವಾಗಿ ಸಾಗಬೇಕು ಎಂದು ಅಧಿಕಾರಿಗಳಿಗೆ ಹಾಗೂ ಕೆಲಸಗಾರರಿಗೆ ಸೂಚಿಸಿದರು.

ಎರಡು ವರ್ಷಗಳಲ್ಲಿ ಕಾಮಗಾರಿ ಪೂರ್ಣ: ರಣಘಟ್ಟ ಶಾಶ್ವತ ನೀರಾವರಿ ಯೋಜನೆ ಕಾಮಗಾರಿಯನ್ನು 24 ತಿಂಗಳಲ್ಲಿ ಮುಗಿಸಿ ಬೇಲೂರಿನ ಯಗಚಿ ನದಿಯಿಂದ ವಿಶ್ವಪ್ರಸಿದ್ಧ ರಾಷ್ಟ್ರಕೂಟರ ಕಾಲದಲ್ಲಿ ನಿರ್ಮಾಣಗೊಂಡಿರುವ ದ್ವಾರಸಮುದ್ರ ಕೆರೆಗೆ ನೀರು ಹರಿಸುವ ಕಾರ್ಯ ಪೂರ್ಣಗೊಳಿಸಬೇಕು. ಈ ಕಾಮಗಾರಿ ಪೂರ್ಣಗೊಂಡರೆ ಸುಮಾರು ಸಾವಿರಾರು ಹೆಕ್ಟೇರ್‌ ಜಮೀನಿಗೆ ನೀರು ಹರಿಸಿದಂತಾಗುತ್ತದೆ. ಜತೆಗೆ ಸಾವಿರಾ ರು ಕೊಳವೆ ಬಾಗಳಲ್ಲಿ ಅಂತರ್ಜಲ ಹೆಚ್ಚಿ ಲಕ್ಷಾಂತರ ರೈತರ ಬದುಕು ಹಸನಾಗುತ್ತದೆ. ಹೀಗಾಗಿ ನಿಗದಿತ ಕಾಲಮಾನದಲ್ಲಿಯೇ ಕಾಮಗಾರಿ ಮುಗಿಸಿದರೆ ರೈತರಿಗೆ ನಾನು ಕೊಟ್ಟ ಭರವಸೆ ಉಳಿಸಿಕೊಂಡಂತಾಗುತ್ತದೆ. ಈ ನಿಟ್ಟಿನಲ್ಲಿ ವಾರಕ್ಕೊಮ್ಮೆ ರಣಘಟ್ಟ ಕಾಮಗಾರಿಗೆ ವೀಕ್ಷಣೆಗೆ ಬರುತ್ತಿದ್ದೇನೆ ಎಂದು ಸುದ್ದಿ ಮಾಧ್ಯಮದವರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ್‌, ಸೊಪ್ಪಿನಹಳ್ಳಿ ಶಿವಣ್ಣ, ಮಹೇಶ್‌, ದಿಲೀಪ್‌, ಕಾಂತರಾಜ್‌ , ಈಶ್ವರ್‌, ಪ್ರೇಮಣ್ಣ ಮುಂತಾದವರು ಹಾಜರಿದ್ದರು.

ಮಾಜಿ ಸಿಎಂ ಎಚ್‌ಡಿಕೆ, ಬಿಎಸ್‌ವೈ ಕೊಡುಗೆ ಸ್ಮರಣೆ : ಚುನಾವಣೆಗೂ ಮೊದಲು ನಾನು ರಣಘಟ್ಟ ಯೋಜನೆ ಜಾರಿ ಬಗ್ಗೆ ಮಾತು ಕೊಟ್ಟಿದ್ದೆ. ಹಾಗೆ ಶಾಸಕನಾದ ಮೂರೇ ತಿಂಗಳಲ್ಲಿ ಸರ್ಕಾರದ ಗಮನ ಸೆಳೆದು, ಒತ್ತಡ ಹೇರಿದಕ್ಕೆ ಯೋಜನೆಗೆ ಮಾಜಿ ಸಿಎಂ ಕುಮಾರಸ್ವಾಮಿ 120 ಕೋಟಿ ರೂ. ಬಜೆಟ್‌ನಲ್ಲಿ ಮೀಸಲಿರಿಸಿದರು. ಯಡಿಯೂರಪ್ಪನವರು ಅನುಮೋದನೆ ದೊರಕಿಸಿಕೊಟ್ಟರು. ಅದರ ಪ್ರತಿಫ‌ಲ ಇಂದು ರಣಘಟ್ಟ ಯೋಜನೆ ಕಾಮಗಾರಿ ಆರಂಭವಾಗಿದೆ. ಶೀಘ್ರದಲ್ಲೇ ಜನತೆ ಈ ಯೋಜನೆ ಲಾಭ ಪಡೆಯಲಿದ್ದಾರೆ. – ಕೆ.ಎಸ್‌.ಲಿಂಗೇಶ್‌ ಬೇಲೂರು ಶಾಸಕ

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.