ಚೆನ್ನಮ್ಮನ ಆದರ್ಶ ಯುವ ಪೀಳಿಗೆ ಪಾಲಿಸಲಿ


Team Udayavani, Oct 24, 2020, 4:21 PM IST

Hasan-tdy-1

ಹಾಸನ: ಬ್ರಿಟಿಷರ ವಿರುದ್ಧ ಧ್ವನಿ ಎತ್ತುವ ಮೂಲಕ ಸ್ವಾಭಿಮಾನದ ಪ್ರತೀಕವಾಗಿರುವ ಕಿತ್ತೂರಿನ ವೀರ ಮಹಿಳೆ ರಾಣಿ ಚನ್ನಮ್ಮ ಅವರ ಆದರ್ಶ ಇಂದಿನ ಪೀಳಿಗೆಗೆ ಮನವರಿಕೆ ಮಾಡಿಕೊಡುವುದು ಅತ್ಯವಶ್ಯಕ ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ‌ ಅವರು ಇಂದಿನ ‌ ಪೀಳಿಗೆಯಲ್ಲಿ ದೇಶಾಭಿಮಾನ ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ. ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಹಾಗೂ ಅನೇಕ ದೇಶಭಕ್ತರ ಆದರ್ಶಗಳನ್ನು ಅವರಿಗೆ ತಿಳಿಸುವುದು ಅಗತ್ಯವಾಗಿದೆ ಎಂದ‌ರು.

ಜೀವನದಲ್ಲಿ ಅಳವಡಿಸಿಕೊಳ್ಳಿ: ರಾಣಿ ಚೆನ್ನಮ್ಮ ಅವರು ಮಹಿಳೆಯರೂ ಪುರುಷರಿಗೆ ಸರಿಸಮಾನ ಎಂಬ ಸಂದೇಶವನ್ನು ಸಾರಿ ಅದನ್ನು ಸಾಧಿಸಿ ಮಾದರಿಯಾಗಿದ್ದಾರೆ. ಜಯಂತಿಗಳು ಮಹಾ ಪುರುಷರ ಸಾಧನೆಗಳು ಹಾಗೂ ಅವರು ನಮ್ಮ ದೇಶಕ್ಕೆ ಕೊಡುಗೆಗಳನ್ನು ಮನವರಿಕೆ ಮಾಡಿಕೊಡುವುದಕ್ಕಾಗಿ ಆಚ‌ರಿಸ‌ಲಾಗುತ್ತಿದೆ. ಅವರ ‌ ಆದರ್ಶಗಳನ್ನು ಯುವ ಪೀಳಿಗೆ ಮರೆಯದೆ ಜೀವನದಲ್ಲಿ ಅವುಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಐಪಂ ಸಿಒ ಬಿ.ಎ.ಪರಮೇಶ್‌ ಮಾತನಾಡಿ, ಕೇವಲ 15 ವರ್ಷ  ವಯಸ್ಸಿ ವಿವಾಹ ‌ವಾಗಿದ್ದ ಚನ್ನಮ್ಮ, ಗಂಡ ಹಾಗೂ ಮಗುವನ್ನು ಕಳೆದುಕೊಂಡು, ದತ್ತು ಮಗುವನ್ನು ಪಡೆದು ರಾಜ್ಯದ ಆಳ್ವಿಕೆ ನಡೆಸಿದರು. ಬ್ರಿಟಿಷರ ಕೆಂಗಣ್ಣಿಗೆ ಗುರಿಯಾದರೂ, ಧೈರ್ಯಗೆಡದೆ ಅವರ ವಿರುದ್ಧ ಹೋರಾಡಿ ಜಯಗಳಿಸಿ, 2ನೇ ಬಾರಿಗೆ ತನ್ನವರ ಕುತಂತ್ರದಿಂದ ‌ ಬಲಿಯಾದ ಚೆನ್ನಮ್ಮನ ಕೀರ್ತಿ ಅಪಾರ. ಹಾಗಾಗಿಯೇ ಇಂದಿಗೂ ಅವರ ಹೋರಾಟ ಇತಿಹಾಸದ ಪಠ್ಯವಾಗಿದೆ ಎಂದರು.

ವೀರಶೈವ ಲಿಂಗಾಯತ ಸಮುದಾಯದ ‌ ಪ್ರಧಾನ ಕಾರ್ಯದ‌ರ್ಶಿ ಭುವನಾಕ್ಷ ಮಾತನಾಡಿ, ಬ್ರಿಟಿಷರು  ನಮ್ಮನ್ನು ದಾಸ್ಯದಲ್ಲಿಟ್ಟು  ಅವರ ವಿರುದ್ಧ ಧ್ವನಿ ಎತ್ತುವ ಸಾಹಸ ಮಾಡಿದ ಕೀರ್ತಿ ರಾಣಿ ಚೆನ್ನಮ್ಮನಿಗೆ ಸಲ್ಲುತ್ತದೆ. ಹಾಗಾಗಿ ಮುಂದಿನ ಪೀಳಿಗೆಗೆ ರಾಣಿ ಚನ್ನಮ್ಮನ ಆದರ್ಶ ದಾರಿದೀಪವಾಗಬೇಕು ಎಂದರು.

ವೀರ ಶೈವ ಸಮಾಜ ಮುಖಂಡ ಬಸವರಾಜು, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಉಪಭಾಗಾಧಿಕಾರಿ ಬಿ.ಎ.ಜಗದೀಶ್‌, ಸ್ವಾತಂತ್ರ್ಯ ಹೋರಾಟಗಾರ ಎಚ್‌. ಎಂ.ಶಿವಣ್ಣ, ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ರಾಣಿ ಚೆನ್ನಮ್ಮನ ಹೋರಾಟ ಮಹಿಳೆಯರಿಗೆ ಮಾದರಿ :

ಹಾಸನ: ರಾಜ್ಯದ ಸ್ವಾತಂತ್ರ್ಯ ರಕ್ಷಣೆಗಾಗಿ ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ಅಮರಳಾದ ರಾಣಿ ಚೆನ್ನಮ್ಮ ಮಹಿಳೆಯರಿಗಷ್ಟೇ ಅಲ್ಲ. ಪುರುಷರಿಗೂ ಮಾದರಿಯಾಗಿದ್ದಾರೆ ಎಂದು ಮಾಜಿ ಶಾಸಕ ಬಿ.ಆರ್‌.ಗುರುದೇವ್‌ ಹೇಳಿದರು.

ನಗರದ ಹೇಮಾವತಿ ಪ್ರತಿಮೆ ಮುಂಭಾಗ ವೀರಶೈವ ಲಿಂಗಾಯತ ಯುವ ಸೇನೆಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ವೀರರಾಣಿ ಚೆನ್ನಮ್ಮ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡುಮಾತನಾಡಿದ ಅವರು, ಸಾಮಾಜಿಕವಾಗಿ, ರಾಜಕೀಯವಾಗಿ ಮಹಿಳೆಗೆ ಮುಕ್ತವಾದ ಅವಕಾಶವೇಇಲ್ಲದ ಕಾಲದಲ್ಲಿಪರಕೀಯರ ದಾಸ್ಯದ ವಿರುದ್ಧ ಸಿಡಿದೆದ್ದು, ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಅಧ್ಯಾಯವನ್ನೇ ರಾಣಿ ಚನ್ನಮ್ಮ ಅವರು ಬರೆದಿದ್ದಾರೆ. ದೇಶದ ಸ್ವಾತಂತ್ಯ ಹೋರಾಟದ ಕ್ರಾಂತಿಗೆ ಕಿಚ್ಚು ಹೊತ್ತಿಸಿದ ಪ್ರಪಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಎಂದು ವಿವರಿಸಿದರು.

ಬೆಳಗಾವಿ ಜಿಲ್ಲೆಯ ಕಾಕತಿಯಲ್ಲಿ 1778 ಅಕ್ಟೋಬರ್‌ 23 ರಂದು ಜನಿಸಿದ ಮಲ್ಲಮ್ಮ ಅವರು, ಯುದ್ಧ ಕಲೆ ಹಾಗೂ ಭಾಷಾ ಪಾಂಡಿತ್ಯದಲ್ಲಿ ಪರಿಣಿತಿಯನ್ನು ಪಡೆದಿದ್ದರು. ಕಿತ್ತೂರಿನ ಮಲ್ಲಸರ್ಜ ದೇಸಾಯಿಯನ್ನು ಮದುವೆಯಾದ ಚೆನ್ನಮ್ಮ ಗಂಡನ ಅಕಾಲಿಕ ನಿಧನದ ನಂತರ ಸಂಸ್ಥಾನದ ರಾಜ್ಯ ಭಾರವನ್ನು ವಹಿಸಿಕೊಂಡು ನಾಡ ರಕ್ಷಣೆಗಾಗಿ ಹೋರಾಟ ನಡೆಸಿದ ದಿಟ್ಟ ಮಹಿಳೆ ಚೆನ್ನಮ್ಮ ಅವರು, ಕಿತ್ತೂರು ಎಂಬ ಪುಟ್ಟ ರಾಜ್ಯದ ಸ್ವಾತಂತ್ರ್ಯ ರಕ್ಷಣೆಗಾಗಿಬ್ರಿಟಿಷರವಿರುದ್ಧಕೆಚ್ಚೆದೆಯಿಂದ ಹೋರಾಡಿ ಅಮರರಾದರು ಎಂದು ಸ್ಮರಿಸಿದರು.

ಜವೇನಹಳ್ಳಿ ಮಠದ ಸಂಗಮೇಶ್ವರ ಸ್ವಾಮೀಜಿ, ಜಯದೇವ ಸ್ವಾಮೀಜಿ, ವೀರಶೈವ ಲಿಂಗಾಯತ ಹಾಸನ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್‌, ಮುಖಂಡರಾದ ಬಿ.ಆರ್‌.ಉದಯಕುಮಾರ್‌, ಶೋಭನ್‌ ಬಾಬು, ವೀರಶೈವ ಲಿಂಗಾಯತ ಯುವ ಸೇನೆಯ ಜಿಲ್ಲಾಧ್ಯಕ್ಷ ಎನ್‌.ಲೋಕೇಶ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್‌.ಅವಿನಾಶ್‌, ಉಪಾ ಧ್ಯಕ್ಷಶರತ್‌ಭೂಷಣ್‌,ವೀರೇಶ್‌ಕುಮಾರ್‌, ಎಚ್‌.ಎನ್‌.ನಾಗೇಶ್‌ ಉಪಸ್ಥಿತರಿದ್ದರು

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsad

Hassan; ನೀರಿಗಾಗಿ ಪ್ರತಿಭಟನೆ ನಡೆಸಿದ ಜೆಡಿಎಸ್: ಎಚ್ಚರಿಕೆ

Lok Sabha Election: ತಪ್ಪು ತಿದ್ದಿಕೊಳ್ಳಲು ಅವಕಾಶ ಕೊಡಿ: ಎಚ್‌ಡಿಕೆ

Lok Sabha Election: ತಪ್ಪು ತಿದ್ದಿಕೊಳ್ಳಲು ಅವಕಾಶ ಕೊಡಿ: ಎಚ್‌ಡಿಕೆ

ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ… ಗ್ಯಾಸ್ ಸೋರಿಕೆ, ಅಗ್ನಿಶಾಮಕ ಸಿಬ್ಬಂದಿ ದೌಡು

ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ… ಗ್ಯಾಸ್ ಸೋರಿಕೆ, ಅಗ್ನಿಶಾಮಕ ಸಿಬ್ಬಂದಿ ದೌಡು

Stamp paper: ರೈತರು, ಜನರಿಗೆ ಛಾಪಾಕಾಗದ ದರ ಏರಿಕೆ ಬರೆ

Stamp paper: ರೈತರು, ಜನರಿಗೆ ಛಾಪಾಕಾಗದ ದರ ಏರಿಕೆ ಬರೆ

21

Hijab controversy: ಹಾಸನದ ಖಾಸಗಿ ಕಾಲೇಜಿನಲ್ಲಿ  ಹಿಜಾಬ್‌- ಕೇಸರಿ ಶಾಲು ವಿವಾದ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.