ಸೊಸೆ ಮೇಲೆ ಮಾವನಿಂದ ಅತ್ಯಾಚಾರ: ಆರೋಪ


Team Udayavani, Feb 9, 2021, 3:01 PM IST

Rape

ಹಾಸನ: ಮಾವನಿಂದ ಅತ್ಯಾಚಾರಕ್ಕೊಳಗಾದ ಸೊಸೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬೇಲೂರು ತಾಲೂಕಿನ ಹೊಸಹಳ್ಳಿಯ ಲಕ್ಷ್ಮೀ(30) ಎಂಬಾಕೆಯ ಮೇಲೆ ಆಕೆಯ ಮಾವ ವೆಂಕಟೇಶ ಜೋಗಿ ಎಂಬಾತ ಸಂಕ್ರಾಂತಿ ಹಬ್ಬದ ಮುನ್ನಾದಿನ ಅತ್ಯಾಚಾರ ಎಸಗಿದ್ದ ಎನ್ನಲಾಗಿದ್ದು, ಮಾವನ ದುಷ್ಕೃತ್ಯದಿಂದ ಮನನೊಂದ ಲಕ್ಷ್ಮೀ ಸಂಕ್ರಾಂತಿಯ ದಿನ ತವರು ಮನೆಗೆ ಹೊರಟಾಗಲೇ ವಿಷ ಸೇವಿಸಿ ಆಸ್ವಸ್ಥಳಾಗಿದ್ದಳು. ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕೆ, ಚಿಕಿತ್ಸೆ ಫ‌ಲಕಾರಿಯಾಗದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾಳೆ.

ಪ್ರಕರಣದ ವಿವರ: ಮೈಸೂರು ಜಿಲ್ಲೆ, ಕೆ.ಆರ್‌. ನಗರ ತಾಲೂಕಿನ ಕಾಕನಹಳ್ಳಿ ಗ್ರಾಮದ ಲಕ್ಷ್ಮೀ ಯನ್ನು ಬೇಲೂರು ತಾಲೂಕಿನ ಪುಟ್ಟರಾಜು ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ಕಳೆದ ಜ. 13 ರಂದು ತನ್ನ ತವರು ಮನೆಗೆ ಹೊರಟಿದ್ದ ಲಕ್ಷ್ಮೀ ಹೊರಟ್ಟಿದ್ದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವೆಂಕಟೇಶ ಜೋಗಿ ಲಕ್ಷ್ಮೀ ಯ ಮೇಲೆ ಅತ್ಯಾಚಾರ ಎಸಗಿದ್ದನೆಂದು, ವಿಷಯ ವನ್ನು ಬಹಿರಂಗಪಡಿಸಿದರೆ ಕೊಲೆ ಮಾಡುವ ಬೆದರಿಕೆ ಒಡ್ಡದ್ದನೆನ್ನಲಾಗಿದೆ.ಅತ್ಯಾಚಾರಕ್ಕೊಳಗಾದ ಮರುದಿನ ವಾದ ಸಂಕ್ರಾಂತಿಯ ದಿನ ತನ್ನ ತವರು ಮನೆಗೆ ಹೋಗುವಾಗಲೇ ಲಕ್ಷ್ಮೀ ವಿಷ ಸೇವಿಸಿದ್ದರಿಂದ ಮಾರ್ಗ ಮಧ್ಯೆ ಹೊಳೆನರಸೀಪುರ ಸಮೀಪ ಅಸ್ವಸ್ಥಳಾಗಿದ್ದಳೆಂದು, ಆಕೆಗೆ ಹೊಳೆ ನರಸೀಪುರದ ಸರ್ಕಾರಿ ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹಿಮ್ಸ್‌ಗೆ ದಾಖಲು ಮಾಡಲಾಗಿತ್ತು. ಆದರೆ, ಆಕೆ ಗುಣಮುಖ ರಾಗದ ಕಾರಣ, ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅಲ್ಲಿಯೂ ಚಿಕಿತ್ಸೆ  ಲಕಾರಿಯಾಗದೆ ಲಕ್ಷ್ಮಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ :ಸಾಲ ಯೋಜನೆ ಉದ್ಯೋಗಾವಕಾಶಕ್ಕೆ ಉತ್ತಮ ಹೆಜ್ಜೆ

ಮನೆ ಮುಂದೆ ಶವ ಸಂಸ್ಕಾರಕ್ಕೆ ಯತ್ನ: ಲಕ್ಷ್ಮೀಯ ತವರು ಮನೆಯವರು ಸೋಮವಾರ ಹೊಸಹಳ್ಳಿಗೆ ಲಕ್ಷ್ಮೀ ಶವವನ್ನು ತಂದು ಅತ್ಯಾಚಾರ ಎಸಗಿದ್ದಾನೆ  ಎನ್ನಲಾದ ಆಕೆಯ ಮಾವ ವೆಂಕಟೇಶ ಜೋಗಿ ಮನೆ ಮುಂದೆಯೇ ಹೂಳಲು ಯತ್ನಿಸಿದರು. ಈ ವೇಳೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬೇಲೂರು ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.

ಅಂತಿಮವಾಗಿ ವೆಂಕಟೇಶ ಜೋಗಿ ಮನೆ ಹಿಂಭಾ ಗದ ಜಮೀನಿನಲ್ಲಿ ಲಕ್ಷ್ಮೀ ಶವ ಸಂಸ್ಕಾರ ಮಾಡಲಾ ಯಿತು. ಲಕ್ಷ್ಮೀ ತವರು ಮನೆಯವರ ದೂರಿನ ಮೇರೆಗೆ ಪೊಲೀಸರು ವೆಂಕಟೇಶ ಜೋಗಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.