ತಿಂಗಳ ಮೊದಲ ದಿನವೇ ಶಿಕ್ಷಕ ವೇತನ ಬ್ಯಾಂಕ್ ಗೆ ಜಮಾ


Team Udayavani, Jan 2, 2022, 2:41 PM IST

ತಿಂಗಳ ಮೊದಲ ದಿನವೇ ಶಿಕ್ಷಕ ವೇತನ ಬ್ಯಾಂಕ್ ಗೆ ಜಮಾ

ಅರಸೀಕೆರೆ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2022ನೇ ಸಾಲಿನಿಂದ ಪ್ರತಿ ತಿಂಗಳ 1ನೇ ತಾರೀಖಿನಂದು ವೇತನವನ್ನು ಬ್ಯಾಂಕ್‌ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು ಅರಸೀಕೆರೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಾವಗಲ್‌ ಹೋಬಳಿ ನಿರ್ದೇಶಕ ಹಾಗೂ ಸಂಪನ್ಮೂಲ ವ್ಯಕ್ತಿ ಅಶೋಕ್‌ ಹೇಳಿದರು.

ಜಾವಗಲ್‌ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣಇಲಾಖೆ ಬೆಂಗಳೂರು, ಡಿಎಸ್‌ಇಆರ್‌ಟಿ , ಪ್ರಥಮ್‌ ಎನ್‌ಜಿಒ ಹಾಗೂ ಜಾವಗಲ್‌ ಕ್ಲಸ್ಟರ್‌ ಸಹಯೋಗದೊಂದಿಗೆ ಹೋಬಳಿಯ 4, 5ನೇ ತರಗತಿಯ ಬೋಧನಾ ಶಿಕ್ಷಕರಿಗೆ ಏರ್ಪಡಿಸಿದ ಓದು ಕರ್ನಾಟಕ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳಲ್ಲಿ ಬುನಾದಿ ಸಾಮರ್ಥ್ಯ ಅಭಿವೃದ್ಧಿ ಪಡಿಸಲು ಈ ತರಬೇತಿ ಕಾರ್ಯ ಕ್ರಮವನ್ನು ಆಯೋಜಿಸಲಾಗಿದೆ ಎಂದರು. ಶಿಕ್ಷಕರು ಬದಲಾವಣೆಗೆ ಹೊಂದಿಕೊಂಡು ಇಷ್ಟಪಟ್ಟು ಗುಣಮಟ್ಟ ಶಿಕ್ಷಣ ನೀಡಬಹುದು. ಓದು ಕರ್ನಾಟಕ ಕನ್ನಡ – ಗಣಿತ ವಿಷಯಗಳಿಗೆ ಸಂಬಂಧಿಸಿದ ಕಿಟ್‌ಗಳನ್ನು ಬಳಸಿ ಶಾಲಾ ಕೊಠಡಿಗಳಲ್ಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಶಿಕ್ಷಕರು ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದರು.

ಬಿಆರ್‌ಪಿ ಹಾಗೂ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಚೇತನ್‌ ಮಾತನಾಡಿ, ಶಿಕ್ಷಣವೆಂದರೆ ಪರಿವರ್ತನೆ, ಅಪೇಕ್ಷಿತ ಬದಲಾವಣೆ, ಹೊಸತನವಾಗಿದೆ. 4, 5ನೇ ತರಗತಿ ವಿದ್ಯಾರ್ಥಿಗಳಿಗೆ ಸರಳ ಕನ್ನಡ ಹಾಗೂ ಸರಳ ಗಣಿತ ವಿಷಯಗಳ ಬಗ್ಗೆ ಕೊಠಡಿಗಳಲ್ಲಿ ಪರಿಣಾಮಕಾರಿಯಾಗಿ ಬೋಧನೆ ಮಾಡಲು ಈ ತರಬೇತಿ ನೀಡಲಾಗುತ್ತಿದೆ ಎಂದರು.

ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳು ಹಾಗೂ ಮುಂದುವರಿದ ವಿದ್ಯಾರ್ಥಿಗಳಿದ್ದು ,ಆರಂಭಿಕ ಹಂತ -1, ಮುಂದುವರಿದ ಹಂತ -2 ಎಂಬ ವಿಭಿನ್ನ ಚಟುವಟಿಕೆಗಳಿರುತ್ತವೆ ಎಂದರುಪ್ರತಿ ಮಗುವಿಗೆ ಮೂಲ ಓದುವಿಕೆ , ಸರಳ ಪಠ್ಯಓದುವಿಕೆ ಅರ್ಥ ಗ್ರಹಿಕೆ ಸಾಧ್ಯತೆ , ಮಗುವು ಲಿಖೀತಮತ್ತು ಮೌಖೀಕ ರೂಪದಲ್ಲಿ ಸ್ವಂತ ಭಾವನೆಯನ್ನು ವ್ಯಕ್ತಪಡಿಸುವಂತೆ ಮಾಡುವುದು ಕಾರ್ಯಕ್ರಮದ ಮೂಲುದ್ದೇಶವಾಗಿದೆ ಎಂದು ತಿಳಿಸಿದರು.

ಮಗುವಿನ ಕಲಿಕ ಮಟ್ಟ ಗುರುತಿಸುವಿಕೆ, ಆ ಮಟ್ಟಕ್ಕೆ ತಕ್ಕ ಚಟುವಟಿಕೆ ಆಟಗಳ ವ್ಯವಸ್ಥೆ ಮಾಡುವುದು 60 ದಿನಗಳ ಬೋಧನಾ ಕಾರ್ಯಕ್ರಮ ತರಬೇತಿಯ ಮುಖ್ಯಾಂಶವಾಗಿದೆ ಎಂದರು.

ಜೆಎಸ್‌ ರವಿಶಂಕರ್‌, ಪೋಷಕ ವಾಸು ಮಾತನಾಡಿ, ತರಬೇತಿಯಲ್ಲಿ ಶಿಕ್ಷಕರುಕಡ್ಡಾಯವಾಗಿ ಭಾಗವಹಿಸಿ ತರಬೇತಿಯಲ್ಲಿ ಪಡೆದ ಜ್ಞಾನವನ್ನು ಶಾಲಾ ಕೊಠಡಿಗಳಲ್ಲಿಪರಿಣಾಮಕಾರಿಯಾಗಿ ಕಲಿಸಿದಾಗ ತರಬೇತಿಯು ಸಾರ್ಥಕತೆ ಪಡೆದುಕೊಳ್ಳತ್ತದೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡಲಾಗುತ್ತಿದೆ ಎಂದರು.

ಜಾವಗಲ್‌ ಹೋಬಳಿಯ ಸಿಆರ್‌ಪಿಗಳಾದ ಮಾರುತಿ, ಜಗದೀಶ್‌, ಶಿವಕುಮಾರ್‌, ಗಂಗಾಧರ್‌, ಮಂಜುನಾಥ್‌ ಹಾಗೂ 50ಕ್ಕೂ ಹೆಚ್ಚು ಶಾಲೆಗಳ ಶಿಕ್ಷಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.