ಶೀಘ್ರದಲ್ಲೇ 300 ಕೃಷಿ ಅಧಿಕಾರಿಗಳ ನೇಮಕಾತಿ ಆರಂಭ: ಬಿ.ಸಿ.ಪಾಟೀಲ್
Team Udayavani, Jul 4, 2022, 10:04 PM IST
ಹಾಸನ: ಶೀಘ್ರದಲ್ಲಿಯೇ 300 ಕೃಷಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ನಗರದ ಸಂತೆಪೇಟೆಯಲ್ಲಿರುವ ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಹಾಸನ ಹಾಗೂ ಸಕಲೇಶಪುರದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸೆಂಟರ್ ಫಾರ್ ಎಕ್ಸಲೆನ್ಸ್ ಕೇಂದ್ರಗಳ ಶಿಲಾನ್ಯಾಸದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷಿ ಅಧಿಕಾರಿಗಳ ನೇಮಕಕ್ಕೆ ಸರಕಾರದ ಅನುಮೋದನೆ ದೊರೆತಿದೆ ಎಂದು ತಿಳಿಸಿದರು.
ಹಾಸನದಲ್ಲಿ 3.83 ಕೋಟಿ ರೂ.ಹಾಗೂ ಸಕಲೇಶಪುರದಲ್ಲಿ 2.19 ಕೋಟಿ ರೂ. ವೆಚ್ಚದಲ್ಲಿ ಸೆಂಟರ್ ಫಾರ್ ಎಕ್ಸಲೆನ್ಸ್ ಕಟ್ಟಡಗಳು ನಿರ್ಮಾಣಗೊಳ್ಳಲಿವೆ.
ಕಳಪೆ ರಸಗೊಬ್ಬರ, ಬಿತ್ತನೆ ಬೀಜ ಮಾರಾಟ ತಡೆಗೆ ಮೈಸೂರಿನಲ್ಲಿ ಜಂಟಿ ಕೃಷಿ ನಿರ್ದೇಶಕರನ್ನು ಒಳಗೊಂಡ ಪ್ರತ್ಯೇಕ ಕೃಷಿ ಜಾಗೃತ ದಳ ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…