ಶೀತಪೀಡಿತ ಗ್ರಾಮಸ್ಥರ ಸಮಸ್ಯೆ ಆಲಿಸಿದ ಪ್ರಾದೇಶಿಕ ಆಯುಕ್ತ


Team Udayavani, Dec 31, 2019, 3:00 AM IST

shitapidita

ಬೇಲೂರು: ಯಗಚಿ ಜಲಾಶಯದ ಹಿನ್ನೀರಿನ ಶೀತ ಪೀಡಿತ ಪ್ರದೇಶಗಳಿಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಯಶವಂತ್‌ ಭೇಟಿ ನೀಡಿ ಪರಿಶೀಲಿಸಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು. ತಾಲೂಕಿನ ಶೀತ ಪೀಡಿತ ಪ್ರದೇಶಗಳಾದ ನಾರಾಯಣಪುರ ಮತ್ತು ಮಾಸುವಳ್ಳಿ ಗ್ರಾಮಗಳ ಮನೆಗಳಿಗೆ ಭೇಟಿ ನೀಡಿ ಗ್ರಾಮದ ಜನರ ಸಮಸ್ಯೆಗಳು ಮತ್ತು ಗ್ರಾಮದಲ್ಲಿರುವ ತೊಂದರೆಗಳನ್ನು ಖುದ್ದು ಪರಿಶೀಲಿಸಿದರು.

ಮಳೆಗಾಲದಲ್ಲಿ ತೀವ್ರ ಸಂಕಷ್ಟ: ನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಮುಖಂಡ ಪರಮೇಶ್‌, ಯಗಚಿ ಹಿನ್ನೀರಿನಿಂದಾಗಿ ಗ್ರಾಮದಲ್ಲಿ ವಾಸಿಸಲು ಸಾಧ್ಯವಾಗುತ್ತಿಲ್ಲ . ಮನೆಯಲ್ಲಿ ಶೀತ ಉಂಟಾಗಿ ಮಲಗಲೂ ಸಾಧ್ಯವಾಗುತ್ತಿಲ್ಲ ಮಳೆಗಾಲ ಬಂದರೆ ಮನೆಗಳು ಜಲವೃತಗೊಂಡು ಜೀವನ ದುಸ್ತರವಾಗಿದೆ ಎಂದು ಹೇಳಿದರು.

ಶಾಶ್ವತ ಪರಿಹಾರ ನೀಡಿ: ಕಳೆದ ಹತ್ತಾರು ವರ್ಷಗಳಿಂದ ಗ್ರಾಮದಲ್ಲಿ ಸಮಸ್ಯೆ ಇದ್ದರೂ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹೋಗುತ್ತಾರೆ. ಆದರೆ ಇದುವರೆಗೂ ಶಾಶ್ವತ ಪರಿಹಾರ ನೀಡಿಲ್ಲ. ಕೂಡಲೇ ಗ್ರಾಮವನ್ನು ಸ್ಥಳಾಂತರಿಸಿ ಪರ್ಯಾಯ ಜಾಗ ನೀಡುವಂತೆ ಮನವಿ ಮಾಡಿದರು.

150 ಮನೆಗಳು ಶಿಥಿಲ: ಗ್ರಾಮದಲ್ಲಿ ಸುಮಾರು 150 ಮನೆಗಳಿದ್ದು ಕೆಲವು ಮನೆಗಳು ಸಂಪೂರ್ಣವಾಗಿ ಹಾಳಾಗಿವೆ. ಗ್ರಾಮದ ಮಧ್ಯೆ ಇರುವ ಮೂರು ಬಾವಿಗಳಲ್ಲಿ ನೀರು ತುಂಬುತ್ತಿದೆ ಇದರಿಂದ ಏನಾದರೂ ಅಪಾಯವಾದರೆ ಯಾರು ಹೊಣೆ ಎಂದು ಪ್ರಶ್ನಿಸಿದರು. ಗ್ರಾಮದ ಬಸವಯ್ಯ, ಭಾಗ್ಯ, ರಘು, ಗೋಪಾಲ.ಸೋಮಣ್ಣ, ರಾಜಯ್ಯ, ಸೋಮ ಶೇಖರ ಮತ್ತು ಆನಂದ ಮೊದಲಾದವರ ಮನೆಗಳು ತೀವ್ರ ಶೀತದಿಂದ ಕೂಡಿದ್ದು ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ಮಾಸುವಳ್ಳಿ ಗ್ರಾಮಕ್ಕೆ ಆಯುಕ್ತ ಯಶವಂತ್‌ ಅವರು ಭೇಟಿ ನೀಡಿ ಪರಿಶೀಲಿಸಿದಾಗ ತಾಲೂಕು ಪಂಚಾಯಿತಿ ಸದಸ್ಯೆ ಕಮಲಾ ಅವರು ಆಯುಕ್ತರಿಗೆ ಗ್ರಾಮದ ಸ್ಥಿತಿಗತಿಯನ್ನು ವಿವರಿಸಿದರು.

ಶೀತಗಾಳಿಯಿಂದ ಅನಾರೋಗ್ಯ: ಗ್ರಾಮದಲ್ಲಿ ಸುಮಾರು 47 ಮನೆಗಳಿದ್ದು, ಹಿನ್ನೀರಿನ ಪ್ರಭಾವದಿಂದ ಶೀತ ಗಾಳಿ ಬೀಸುತ್ತಿದೆ. ಇದರಿಂದ ಮಕ್ಕಳು ಹಾಗೂ ವಯಸ್ಸಾದವರು ಕಾಯಿಲೆಯಿಂದ ನರಳುತ್ತಿದ್ದು, ಪತ್ರಿ ದಿನ ಆಸ್ಪತ್ರೆಗೆ ತಿರುಗುವಂತಾಗಿದೆ ಎಂದರು.

ಶೌಚಾಲಯ ಗುಂಡಿ ತೆಗೆಯಲು ತೊಂದರೆ: ಮಳೆಗಾಲದಲ್ಲಿ ಪಕ್ಕದಲ್ಲಿರುವ ಯಮಸಂಧಿ ಚಾನಲ್‌ ತುಂಬಿ ಗ್ರಾಮದೊಳಗೆ ನೀರು ನುಗ್ಗುತ್ತದೆ. ಈ ಗ್ರಾಮದಲ್ಲಿ ಶೌಚಗುಂಡಿ ತೆಗೆದರೆ ನೀರು ತುಂಬುತ್ತದೆ. ಶೌಚಾಲಯ ನಿರ್ಮಾಣ ಮಾಡಲು ಸಾಧ್ಯವಾಗದೇ ಗ್ರಾಮಸ್ಥರು ತ್ರೀವ್ರ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.

ಆರೋಗ್ಯ ಇಲಾಖೆ ಗ್ರಾಮದಲ್ಲಿ ಆರೋಗ್ಯ ಶಿಬಿರ ಹಮ್ಮಿಕೊಳ್ಳುವುದು ಸೂಕ್ತ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗಿರೀಶ್‌, ಜಿಲ್ಲಾ ಪಂಚಾಯಿತಿ ಸಿಇಒ ಪರಮೇಶ್‌, ಯಗಚಿ ನೀರಾವರಿ ಇಲಾಖೆ ಎಂಜಿನಿಯರ್‌ ತಿಮ್ಮೇಗೌಡ, ಪುಟ್ಟರಾಜಪ್ಪ, ತಾಲೂಕು ಪಂಚಾಯಿತಿ ಇಒ ರವಿಕುಮಾರ್‌ ಮೊದಲಾದವರಿದ್ದರು.

ಬಾವಿಗಳಿಗೆ ಮೆಶ್‌ ಹಾಕಲು ಸೂಚನೆ: ನಾರಾಯಣಪುರ ಮತ್ತು ಮಾಸುವಳ್ಳಿ ಗ್ರಾಮಗಳನ್ನು ಪರೀಶಿಲಿಸಿದ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಯಶವಂತ್‌ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಯಶವಂತ್‌, ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿದ ನಂತರ ಮಾತನಾಡಿದ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಯಶವಂತ್‌, ತಾಲೂಕಿನ ಯಗಚಿ ಜಲಾಶಯದ ಹಿನ್ನೀರಿನ ವ್ಯಾಪ್ತಿಯಲ್ಲಿರುವ ನಾರಾಯಣಪುರ ಮತ್ತು ಮಾಸುವಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ನಾರಾಯಣಪುರದಲ್ಲಿರುವ ತೆರೆದ ಬಾವಿಗಳಲ್ಲಿರುವ ನೀರನ್ನು ತೆರವುಗೊಳಿಸಿ ಬಾವಿಗಳಿಗೆ ಭದ್ರವಾಗಿ ಮೆಶ್‌ ಅಳವಡಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶೀತಪೀಡಿತ ಉಂಟಾಗಿರುವ ಮನೆಗಳನ್ನು ಪರೀಶಿಲಿಸಿದ್ದು , ಸರ್ಕಾರಕ್ಕೆ ಈ ಬಗ್ಗೆ ವರದಿ ನೀಡುವುದಾಗಿ ಆಯುಕ್ತರು ತಿಳಿಸಿದರು. ಮಾಸುವಳ್ಳಿ ಗ್ರಾಮದಲ್ಲಿರುವ ಚಾನಲ್‌ಗೆ ಸಿಮೆಂಟ್‌ ಲೈನ್‌ ನಿರ್ಮಾಣ ಮಾಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮದ ಜನರ ಆರೋಗ್ಯ ದೃಷ್ಟಿಯಿಂದ ಗ್ರಾಮದಲ್ಲಿ ಆರೋಗ್ಯ ಶಿಬಿರ ಏರ್ಪಡಿಸುವಂತೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.