ಶೀತಪೀಡಿತ ಗ್ರಾಮಸ್ಥರ ಸಮಸ್ಯೆ ಆಲಿಸಿದ ಪ್ರಾದೇಶಿಕ ಆಯುಕ್ತ


Team Udayavani, Dec 31, 2019, 3:00 AM IST

shitapidita

ಬೇಲೂರು: ಯಗಚಿ ಜಲಾಶಯದ ಹಿನ್ನೀರಿನ ಶೀತ ಪೀಡಿತ ಪ್ರದೇಶಗಳಿಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಯಶವಂತ್‌ ಭೇಟಿ ನೀಡಿ ಪರಿಶೀಲಿಸಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು. ತಾಲೂಕಿನ ಶೀತ ಪೀಡಿತ ಪ್ರದೇಶಗಳಾದ ನಾರಾಯಣಪುರ ಮತ್ತು ಮಾಸುವಳ್ಳಿ ಗ್ರಾಮಗಳ ಮನೆಗಳಿಗೆ ಭೇಟಿ ನೀಡಿ ಗ್ರಾಮದ ಜನರ ಸಮಸ್ಯೆಗಳು ಮತ್ತು ಗ್ರಾಮದಲ್ಲಿರುವ ತೊಂದರೆಗಳನ್ನು ಖುದ್ದು ಪರಿಶೀಲಿಸಿದರು.

ಮಳೆಗಾಲದಲ್ಲಿ ತೀವ್ರ ಸಂಕಷ್ಟ: ನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಮುಖಂಡ ಪರಮೇಶ್‌, ಯಗಚಿ ಹಿನ್ನೀರಿನಿಂದಾಗಿ ಗ್ರಾಮದಲ್ಲಿ ವಾಸಿಸಲು ಸಾಧ್ಯವಾಗುತ್ತಿಲ್ಲ . ಮನೆಯಲ್ಲಿ ಶೀತ ಉಂಟಾಗಿ ಮಲಗಲೂ ಸಾಧ್ಯವಾಗುತ್ತಿಲ್ಲ ಮಳೆಗಾಲ ಬಂದರೆ ಮನೆಗಳು ಜಲವೃತಗೊಂಡು ಜೀವನ ದುಸ್ತರವಾಗಿದೆ ಎಂದು ಹೇಳಿದರು.

ಶಾಶ್ವತ ಪರಿಹಾರ ನೀಡಿ: ಕಳೆದ ಹತ್ತಾರು ವರ್ಷಗಳಿಂದ ಗ್ರಾಮದಲ್ಲಿ ಸಮಸ್ಯೆ ಇದ್ದರೂ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹೋಗುತ್ತಾರೆ. ಆದರೆ ಇದುವರೆಗೂ ಶಾಶ್ವತ ಪರಿಹಾರ ನೀಡಿಲ್ಲ. ಕೂಡಲೇ ಗ್ರಾಮವನ್ನು ಸ್ಥಳಾಂತರಿಸಿ ಪರ್ಯಾಯ ಜಾಗ ನೀಡುವಂತೆ ಮನವಿ ಮಾಡಿದರು.

150 ಮನೆಗಳು ಶಿಥಿಲ: ಗ್ರಾಮದಲ್ಲಿ ಸುಮಾರು 150 ಮನೆಗಳಿದ್ದು ಕೆಲವು ಮನೆಗಳು ಸಂಪೂರ್ಣವಾಗಿ ಹಾಳಾಗಿವೆ. ಗ್ರಾಮದ ಮಧ್ಯೆ ಇರುವ ಮೂರು ಬಾವಿಗಳಲ್ಲಿ ನೀರು ತುಂಬುತ್ತಿದೆ ಇದರಿಂದ ಏನಾದರೂ ಅಪಾಯವಾದರೆ ಯಾರು ಹೊಣೆ ಎಂದು ಪ್ರಶ್ನಿಸಿದರು. ಗ್ರಾಮದ ಬಸವಯ್ಯ, ಭಾಗ್ಯ, ರಘು, ಗೋಪಾಲ.ಸೋಮಣ್ಣ, ರಾಜಯ್ಯ, ಸೋಮ ಶೇಖರ ಮತ್ತು ಆನಂದ ಮೊದಲಾದವರ ಮನೆಗಳು ತೀವ್ರ ಶೀತದಿಂದ ಕೂಡಿದ್ದು ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ಮಾಸುವಳ್ಳಿ ಗ್ರಾಮಕ್ಕೆ ಆಯುಕ್ತ ಯಶವಂತ್‌ ಅವರು ಭೇಟಿ ನೀಡಿ ಪರಿಶೀಲಿಸಿದಾಗ ತಾಲೂಕು ಪಂಚಾಯಿತಿ ಸದಸ್ಯೆ ಕಮಲಾ ಅವರು ಆಯುಕ್ತರಿಗೆ ಗ್ರಾಮದ ಸ್ಥಿತಿಗತಿಯನ್ನು ವಿವರಿಸಿದರು.

ಶೀತಗಾಳಿಯಿಂದ ಅನಾರೋಗ್ಯ: ಗ್ರಾಮದಲ್ಲಿ ಸುಮಾರು 47 ಮನೆಗಳಿದ್ದು, ಹಿನ್ನೀರಿನ ಪ್ರಭಾವದಿಂದ ಶೀತ ಗಾಳಿ ಬೀಸುತ್ತಿದೆ. ಇದರಿಂದ ಮಕ್ಕಳು ಹಾಗೂ ವಯಸ್ಸಾದವರು ಕಾಯಿಲೆಯಿಂದ ನರಳುತ್ತಿದ್ದು, ಪತ್ರಿ ದಿನ ಆಸ್ಪತ್ರೆಗೆ ತಿರುಗುವಂತಾಗಿದೆ ಎಂದರು.

ಶೌಚಾಲಯ ಗುಂಡಿ ತೆಗೆಯಲು ತೊಂದರೆ: ಮಳೆಗಾಲದಲ್ಲಿ ಪಕ್ಕದಲ್ಲಿರುವ ಯಮಸಂಧಿ ಚಾನಲ್‌ ತುಂಬಿ ಗ್ರಾಮದೊಳಗೆ ನೀರು ನುಗ್ಗುತ್ತದೆ. ಈ ಗ್ರಾಮದಲ್ಲಿ ಶೌಚಗುಂಡಿ ತೆಗೆದರೆ ನೀರು ತುಂಬುತ್ತದೆ. ಶೌಚಾಲಯ ನಿರ್ಮಾಣ ಮಾಡಲು ಸಾಧ್ಯವಾಗದೇ ಗ್ರಾಮಸ್ಥರು ತ್ರೀವ್ರ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.

ಆರೋಗ್ಯ ಇಲಾಖೆ ಗ್ರಾಮದಲ್ಲಿ ಆರೋಗ್ಯ ಶಿಬಿರ ಹಮ್ಮಿಕೊಳ್ಳುವುದು ಸೂಕ್ತ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗಿರೀಶ್‌, ಜಿಲ್ಲಾ ಪಂಚಾಯಿತಿ ಸಿಇಒ ಪರಮೇಶ್‌, ಯಗಚಿ ನೀರಾವರಿ ಇಲಾಖೆ ಎಂಜಿನಿಯರ್‌ ತಿಮ್ಮೇಗೌಡ, ಪುಟ್ಟರಾಜಪ್ಪ, ತಾಲೂಕು ಪಂಚಾಯಿತಿ ಇಒ ರವಿಕುಮಾರ್‌ ಮೊದಲಾದವರಿದ್ದರು.

ಬಾವಿಗಳಿಗೆ ಮೆಶ್‌ ಹಾಕಲು ಸೂಚನೆ: ನಾರಾಯಣಪುರ ಮತ್ತು ಮಾಸುವಳ್ಳಿ ಗ್ರಾಮಗಳನ್ನು ಪರೀಶಿಲಿಸಿದ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಯಶವಂತ್‌ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಯಶವಂತ್‌, ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿದ ನಂತರ ಮಾತನಾಡಿದ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಯಶವಂತ್‌, ತಾಲೂಕಿನ ಯಗಚಿ ಜಲಾಶಯದ ಹಿನ್ನೀರಿನ ವ್ಯಾಪ್ತಿಯಲ್ಲಿರುವ ನಾರಾಯಣಪುರ ಮತ್ತು ಮಾಸುವಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ನಾರಾಯಣಪುರದಲ್ಲಿರುವ ತೆರೆದ ಬಾವಿಗಳಲ್ಲಿರುವ ನೀರನ್ನು ತೆರವುಗೊಳಿಸಿ ಬಾವಿಗಳಿಗೆ ಭದ್ರವಾಗಿ ಮೆಶ್‌ ಅಳವಡಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶೀತಪೀಡಿತ ಉಂಟಾಗಿರುವ ಮನೆಗಳನ್ನು ಪರೀಶಿಲಿಸಿದ್ದು , ಸರ್ಕಾರಕ್ಕೆ ಈ ಬಗ್ಗೆ ವರದಿ ನೀಡುವುದಾಗಿ ಆಯುಕ್ತರು ತಿಳಿಸಿದರು. ಮಾಸುವಳ್ಳಿ ಗ್ರಾಮದಲ್ಲಿರುವ ಚಾನಲ್‌ಗೆ ಸಿಮೆಂಟ್‌ ಲೈನ್‌ ನಿರ್ಮಾಣ ಮಾಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮದ ಜನರ ಆರೋಗ್ಯ ದೃಷ್ಟಿಯಿಂದ ಗ್ರಾಮದಲ್ಲಿ ಆರೋಗ್ಯ ಶಿಬಿರ ಏರ್ಪಡಿಸುವಂತೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hassan

Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sakaleshpura

National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.