ಪುನರ್ವಸತಿ ಯೋಜನೆ: ದಲಿತರಿಗೆ ಪರಿಹಾರ ನೀಡಿ


Team Udayavani, Aug 19, 2019, 3:55 PM IST

hasan-tdy-2

ಆಲೂರಿನಲ್ಲಿ ನಡೆದ ಪರಿಶಿಷ್ಟರ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಶಾಸಕ ಕುಮಾರ‌ಸ್ವಾಮಿ ಮಾತನಾಡಿದರು.

ಆಲೂರು: ಹೇಮಾವತಿ ಪುನರ್ವಸತಿ ಯೋಜನೆಯಲ್ಲಿ ಮೀಸಲಿರುವ 100 ಎಕರೆ ಪ್ರದೇಶದಲ್ಲಿ 20 ಎಕರೆ ಭೂಮಿಯನ್ನು ದಲಿತರಿಗೆಂದು ತಾಲೂಕಿನ ಬೂದನಹಳ್ಳಿ ಗ್ರಾಮದಲ್ಲಿ ಮೀಸಲಿಟ್ಟು 20 ವರ್ಷ ಕಳೆದಿದ್ದರೂ ಅದನ್ನು ಹಸ್ತಾಂತರಿಸುವಲ್ಲಿ ಅಧಿಕಾರಿ ಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ತಾಲೂಕಿನ ದಲಿತ ಮುಖಂಡರು ಆಪಾದಿಸಿದರು.

ತಾಲೂಕು ಆಡಳಿತದಿಂದ ಏರ್ಪ ಡಿಸಿದ್ದ ಪರಿಶಿಷ್ಟರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದ ಮುಖಂಡರು, ಸರ್ಕಾರದಿಂದ ಮಂಜೂರಾಗಿರುವ ಜಮೀನನ್ನು ಕೂಡಲೇ ಹಸ್ತಾಂತರಿಸಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್‌ ಶಿರೀನ್‌ತಾಜ್‌, ಈಗಾಗಲೇ 6 ತಿಂಗಳ ಹಿಂದೆಯೇ ಇದಕ್ಕೆ ಬದಲಾಗಿ ಬೇರೆ ಸ್ಥಳವನ್ನು ಗುರುತಿಸಿ ಮಾರ್ಕ್‌ ಮಾಡಿ ಸಂಬಂಧಿಸಿದ ಕಡತಗಳನ್ನು ಸಕಲೇಶಪುರ ಉಪವಿಭಾಗಧಿಕಾರಿ ಕಚೇರಿಗೆ ಕಳುಹಿಸಲಾಗಿದೆ. ಅಲ್ಲಿಂದ ಅನುಮತಿ ಸಿಕ್ಕಕೂಡಲೇ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದರು.

ಶಾಸಕ ಎಚ್. ಕೆ. ಕುಮಾರಸ್ವಾಮಿ ಮಾತನಾಡಿ, ಮಂಜೂರಾತಿ, ಪಹಣಿ ಬದಲಾವಣೆ ಕುರಿತಂತೆ ಪ್ರತಿ ತಿಂಗಳು ತಹಶೀಲ್ದಾರ್‌ ನೇತೃತ್ವದಲ್ಲಿ ಹೋಬಳಿ ಮಟ್ಟದಲ್ಲಿ ಸಭೆ ನಡೆಸುವಂತೆ ತಹಶೀ ಲ್ದಾರ್‌ ಸೂಚಿಸಿದರು. ತಹಶೀಲ್ದಾರ್‌ ಶಿರೀನ್‌ ತಾಜ್‌ ಉತ್ತರಿಸಿ, ಈಗಾಗಲೆ ಕಸಬಾ ಹೋಬಳಿ ಹೊರತುಪಡಿಸಿ, ಮೂರು ಹೋಬಳಿ ಗಳಲ್ಲಿ ಗ್ರಾಮ ಸಭೆ ನಡೆಸಲಾಗಿದೆ ಎಂದರು.

ಎಸ್‌ಬಿಐ ವ್ಯವಸ್ಥಾಪಕರ ವಿರುದ್ಧ ಕ್ರಮ: ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ ಕಣತೂರು ಶಾಖೆಯಲ್ಲಿ ಎಸ್ಸಿ,ಎಸ್ಟಿ ಫ‌ಲಾನುಭವಿಗಳಿಗೆ ಸರ್ಕಾರ ದಿಂದ ಮಂಜೂರಾದ ನೀಡಿರುವ ಯೋಜನೆಗಳಿಗೆ ಸಂಬಂಧಿಸಿದಂತೆ ಸಾಲ ಕೊಡುತ್ತಿಲ್ಲ. ಕೇಳಲು ಹೋದರೆ ವ್ಯವಸ್ಥಾಪಕರು ಉಡಾಫೆ ಉತ್ತರ ನೀಡುತ್ತಾರೆ. ಸರಕಾರದ ಯೋಜನೆಗೆ ಸಾಲ ಕೊಡಲು ಗ್ಯಾರಂಟಿ ಕೊಡಬೇಕು ಎನ್ನುತ್ತಾರೆ. ಈ ಕಾರಣದಿಂದ ಹಲವು ಯೋಜನೆಗಳಲ್ಲಿ ಪ್ರೋತ್ಸಾಹಧನ ಸರಕಾರಕ್ಕೆ ವಾಪಾಸು ಹೋಗಿದೆ. ಪಶುಭಾಗ್ಯ ಯೋಜನೆಗೆ ಸಹಕರಿಸುತ್ತಿಲ್ಲ. ಕೂಡಲೇ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡರಾದ ಈರಪ್ಪ, ಬಸವರಾಜು, ರಂಗಯ್ಯ, ಅರಸಯ್ಯ, ವೆಂಕಟಯ್ಯ ಇತರರು ಆಗ್ರಹಿಸಿದರು.

ಶಾಸಕ ಎಚ್. ಕೆ. ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಬ್ಯಾಂಕಿನವರು ಫಲಾನುಭ ವಿಗಳಿಗೆ ತೊಂದರೆ ಕೊಡುವುದು ಸಾಮಾನ್ಯವಾಗಿದೆ. ತಕ್ಷಣ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರನ್ನು ಭೇಟಿ ಮಾಡಿ ತೊಂದರೆ ನಿವಾರಣೆ ಮಾಡಬೇಕು. ಮುಂದಿನ ಸಭೆಗೆ ಪ್ರತಿಯೊಂದು ಬ್ಯಾಂಕಿನ ವ್ಯವಸ್ಥಾಪಕರು, ಲೀಡ್‌ ಬ್ಯಾಂಕ್‌ ಸಿಬ್ಬಂದಿ ಕಡ್ಡಾಯವಾಗಿ ಹಾಜ ರಾಗಬೇಕು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಜಾಗ್ರತೆ ವಹಿಸ ಬೇಕು ಎಂದು ಮೋಹನ್‌ ಅವರಿಗೆ ಸೂಚಿಸಿದರು.

ತಾಲೂಕಿನ ಬೂದನಹಳ್ಳಿಯಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಪ್ರಶ್ನಿಸಿದ ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಅಬಕಾರಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು. ಗಂಗಾಕಲ್ಯಾಣ ಯೋಜನೆಯಲ್ಲಿ ಕೊರೆದ ಕೊಳವೆ ಬಾವಿಗಳಿಗೆ ಕೂಡಲೇ ಮೋಟಾರ್‌ ಅಳ ವಡಿಸಬೇಕು ಎಂದು ಸಭೆಯಲ್ಲಿ ಒತ್ತಾ ಯಿಸಲಾಯಿತು. ಸಭೆಯಲ್ಲಿ ತಾಪಂ ಇಒ ಸತೀಶ್‌, ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು, ಪಿಡಿಒಗಳು, ದಲಿತ ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.