ಜಿಲ್ಲೆಯಲ್ಲಿನ್ನು ರೇವಣ್ಣ ಪಾರುಪತ್ಯ


Team Udayavani, Jun 7, 2018, 2:01 PM IST

has-1.jpg

ಹಾಸನ: ಜಿಲ್ಲೆಯಲ್ಲಿ ಇನ್ನು ಎಚ್‌.ಡಿ.ರೇವಣ್ಣ ಅವರದೇ ಪಾರುಪತ್ಯ. ಒಂದು ದಶಕದಿಂದ ವಿರೋಧ ಪಕ್ಷದಲ್ಲಿದ್ದರೂ ಜಿಲ್ಲೆಯ ಆಡಳಿತದ ಮೇಲೆ ಹಿಡಿತವಿಟ್ಟುಕೊಂಡಿದ್ದ ರೇವಣ್ಣ ಅವರು ಈಗ ಸಚಿವರಾಗಿರುವುದರಿಂದ ಜಿಲ್ಲೆಯ ಅಧಿಕಾರಿ
ವರ್ಗದಲ್ಲಿ ತಳಮಳ ಶುರುವಾಗಿದೆ.

ರಾಜಕೀಯವಾಗಿಯೂ ಈಗ ಜಿಲ್ಲೆಯಲ್ಲಿ ಜೆಡಿಎಸ್‌ ಸಂಪೂರ್ಣ ಹಿಡಿತ ಸಾಧಿಸಿದೆ. 7 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳನ್ನು ತನ್ನ ಮಡಿಲಿಗೆ ಹಾಕಿಕೊಂಡಿರುವ ಜೆಡಿಎಸ್‌ ಕಾಂಗ್ರೆಸ್‌ಗೆ ದನಿ ಇಲ್ಲದಂತೆ ಮಾಡಿದೆ. ಇನ್ನು ಒಬ್ಬ ಬಿಜೆಪಿ ಶಾಸಕರಿದ್ದರೂ ಬಲಾಡ್ಯ 6 ಮಂದಿ ಜೆಡಿಎಸ್‌ ಶಾಸಕರೆದುರು ಹೋರಾಡುವಷ್ಟು ರಾಜಕೀಯ ಶಕ್ತಿ ಅವರಿಗಿಲ್ಲ. ಇದೇ ಮೊದಲ ಬಾರಿಗೆ ಶಾಸಕರಾಗಿರುವ ಬಿಜೆಪಿಯ ಪ್ರೀತಂ ಜೆ.ಗೌಡ ಅವರಿಗೆ ಇನ್ನೂ ರಾಜಕೀಯ ಹಾಗೂ ಆಡಳಿತದ ಆಳ ಅರಿವು ಗೊತ್ತಿಲ್ಲ. ಹಾಗಾಗಿ ಸಚಿವ ರೇವಣ್ಣ ಎದರು ಜಿಲ್ಲೆಯಲ್ಲಿ ದನಿ ಎತ್ತುವವರೇ ಇಲ್ಲ.

ಗತಕಾಲದ ಸಾಧನೆ: ಒಂದು ದಶಕದ ನಂತರ ಜಿಲ್ಲಾ ಉಸ್ತುವಾರಿ ಸಚಿವರಾಗುತ್ತಿರುವ ಎಚ್‌.ಡಿ.ರೇವಣ್ಣ ಅವರಿಂದ ಜಿಲ್ಲೆಯ ಜನರು ಭಾರೀ ನಿರೀಕ್ಷೆಯಿಟ್ಟುಕೊಂಡಿದ್ದಾರೆ. 2004 ರಿಂದ 2008 ರವರೆಗೆ ರೇವಣ್ಣ ಅವರು ಜಿಲ್ಲೆಯ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳನ್ನು ಈಗಲೂ ಮೆಲುಕು ಹಾಕುತ್ತಿರುವ ಜಿಲ್ಲೆಯ ಜನರು ಈಗ ಇನ್ನಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. ಧರಂ ಸಿಂಗ್‌ ನೇತೃತ್ವದ ಕಾಂಗ್ರೆಸ್‌ – ಜೆಡಿಎಸ್‌ ಸಚಿವ ಸಂಪುಟದಲ್ಲಿ ಲೋಕೋಪಯೋಗಿ ಹಾಗೂ ಇಂಧನ ಸಚಿವರಾಗಿದ್ದ ರೇವಣ್ಣ ಎಚ್‌.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್‌- ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲೂ ಅದೇ ಖಾತೆಗಳನ್ನು ನಿರ್ವಹಿಸಿದ್ದರು. ಆ 36 ತಿಂಗಳ ಆಡಳಿತದಲ್ಲಿ ಹಾಸನಕ್ಕೆ ಸರ್ಕಾರಿ ಮೆಡಿಕಲ್‌ ಕಾಲೇಜು, 2 ನರ್ಸಿಂಗ್‌ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು, ಕೃಷಿ ಕಾಲೇಜು, ಪಶುವೈದ್ಯಕೀಯ ಕಾಲೇಜು, ಗೃಹ ವಿಜ್ಞಾನ ಕಾಲೇಜು, ಕಾನೂನು ಕಾಲೇಜು, ಮಹಿಳಾ ಕಾಲೇಜು, ಪ್ರತಿ ಹೋಬಳಿ ಕೇಂದ್ರಗಳಿಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಬರುವಂತೆ ಮಾಡಿದ್ದರು.

ಹೆಚ್ಚಿದ ನಿರೀಕ್ಷೆ: ಹೈನುಗಾರಿಕೆ ಅಭಿವೃದ್ಧಿಯಲ್ಲಿ ರೇವಣ್ಣ ಅವರನ್ನು ಮೀರಿಸುವವರಿಲ್ಲ ಎಂಬಂತೆ ಅಭಿವೃದ್ಧಿ ಮಾಡಿ ಹಾಸನ ಜಿಲ್ಲೆ ಈಗ ರಾಜ್ಯದಲ್ಲಿಯೇ ಹಾಲು ಉತ್ಪಾದನೆಯಲ್ಲಿ 2 ನೇ ಸ್ಥಾನ ಪಡೆದುಕೊಂಡಿದೆ. ಹಾಸನ ಡೇರಿ ಮೆಗಾ ಡೇರಿ ರೂಪ ಪಡೆದಿದೆ. ಈಗ ಅದೇ ವೇಗದ ಅಭಿವೃದ್ಧಿಯನ್ನು ಜಿಲ್ಲೆಯ ಜನರು ರೇವಣ್ಣ ಅವರಿಂದ ನಿರೀಕ್ಷಿಸುತ್ತಿದ್ದಾರೆ.

ಎಚ್ಚರಿಸುವ ವಿರೋಧಪಕ್ಷದ ಕೊರತೆ: ಕಳೆದ ಒಂದು ದಶಕದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಸರ್ಕಾರಗಳು ಹಾಸನ ಜಿಲ್ಲೆಯ ಅಭಿವೃದ್ಧಿಯನ್ನು ನಿರ್ಲಕ್ಷಿಸಿವೆ ಎಂದು ಆರೋಪಿಸುತ್ತಾ ಬಂದಿದ್ದ ರೇವಣ್ಣ ಅವರು, ಜಿಲ್ಲೆ ತಾವು ಉಸ್ತುವಾರಿ ಸಚಿವರಾಗಿದ್ದಾಗ ಏನೇನು ಆಗಿತ್ತು, ಜಿಲ್ಲೆಗೆ ಬಿಜೆಪಿ ಮತ್ತು ಕಾಂಗ್ರೆಸ್‌ ಸರ್ಕಾರಗಳು ಏನೇನು ಅನ್ಯಾಯ ಮಾಡಿದವರು ಎಂದು ಪಟ್ಟಿ ಮಾಡುತ್ತಾ ಹೋಗುತ್ತಿದ್ದರು. ಈಗ ಅವುಗಳನ್ನೆಲ್ಲಾ ಈಡೇರಿಸುವ ಹೊಣೆ ರೇವಣ್ಣ ಅವರ ಮೇಲಿದೆ. ಆದರೆ ಈಗ ಅವರ ಹೊಣೆಗಾರಿಕೆಯನ್ನು ನೆನಪಿಸುವ ಪ್ರಬಲ ವಿರೋಧ ಪಕ್ಷವೇ ಜಿಲ್ಲೆಯಲ್ಲಿ ಇಲ್ಲ. 

ರೇವಣ್ಣ ನಡೆದು ಬಂದ ಹಾದಿ ಹೊಳೆನರಸೀಪುರ ತಾಲೂಕು ಪಡುವಲ ಹಿಪ್ಪೆಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷನಾಗಿ 80 ರ ದಶಕದಲ್ಲಿ ಸಾರ್ವಜನಿಕ ಸೇವಾ ಕ್ಷೇತ್ರ ಪ್ರವೇಶಿಸಿದ ರೇವಣ್ಣ, 1986 ರಲ್ಲಿ ಹಾಸನ ಜಿಪಂ ಸದಸ್ಯರಾಗಿ ಆಯ್ಕೆಯಾದರು. ಹೊಳೆನರಸೀಪುರ ಕ್ಷೇತ್ರದಿಂದ 1994 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿದು ಒಟ್ಟು 5 ಬಾರಿ, 2004 ರಿಂದ ಸತತ ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿರುವ ಅವರು 4ನೇ ಬಾರಿ ಸಚಿವರಾಗುತ್ತಿದ್ದಾರೆ. 1994 ರಲ್ಲಿ ಪ್ರಥಮ ಬಾರಿಗೆ ರೇವಣ್ಣ ಅವರು ವಿಧಾನಸಭೆ ಪ್ರವೇಶಿಸಿದಾಗ ಅವರ ತಂದೆ ಎಚ್‌.ಡಿ.ದೇವೇಗೌಡರು ಮುಖ್ಯಮಂತ್ರಿ. 

1996 ರ ಜೂನ್‌ 1 ರಂದು ದೇವೇಗೌಡರು ಪ್ರಧಾನಿಯಾದಾಗ ರಾಜ್ಯದಲ್ಲಿ ಜೆ.ಎಚ್‌.ಪಟೇಲ್‌ ನೇತೃತ್ವದ ಜನತಾದಳ ಸರ್ಕಾರದಲ್ಲಿ ಎಚ್‌.ಡಿ.ರೇವಣ್ಣ ಸಂಪುಟ ದರ್ಜೆ ಸಚಿವರಾಗಿ ವಸತಿ ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಧರಂಸಿಂಗ್‌ ಸರ್ಕಾರದಲ್ಲಿ ಲೋಕೋಪಯೋಗಿ ಮತ್ತು ಇಂಧನ ಸಚಿವ. ಎಚ್‌.ಡಿ.ಕುಮಾರಸ್ವಾಮಿ ಅವರ ಸರ್ಕಾರದಲ್ಲೂ ಆ ಎರಡೂ ಮಹತ್ವದ ಖಾತೆಗಳನ್ನು ನಿರ್ವಹಿಸಿದ್ದರು. ಈ ಬಾರಿಯೂ ಲೋಕೋಪಯೋಗಿ ಖಾತೆ ನಿರೀಕ್ಷಿಸಿದ್ದಾರೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.