ಮತದಾರರ ಪಟ್ಟಿ ಪರಿಷ್ಕರಣೆ: ಜಾಗೃತಿ ಜಾಥಾ
Team Udayavani, Sep 24, 2019, 4:29 PM IST
ಹಾಸನ: ಮತದಾರರ ಜಾಗೃತಿ ಜಾಥಾ ಕಾರ್ಯ ಕ್ರಮ ನಗರದಲ್ಲಿ ಸೋಮವಾರ ನಡೆಯಿತು. ವಿವಿಧ ಶಾಲೆಗಳ ಮಕ್ಕಳು ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಇಒ ಕೃಷ್ಣ ಅವರು ಅ. 5ರ ವರೆಗೂ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಯುತ್ತಿದೆ. ಪಟ್ಟಿಯಲ್ಲಿ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ ಮಾಡಿಕೊಳ್ಳುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಕುರಿತು ಜಿಲ್ಲಾಧಿಕಾರಿ ಆದೇಶದಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು