ಬೆಲೆ ಏರಿಕೆ ಬಿಸಿಗೆ ಜನತೆ ಜೀವಂತ ಶವವಾಗಿದ್ದಾರೆ: ಡಿ.ಕೆ.ಶಿವಕುಮಾರ್‌

ಪ್ರೀತಂಗೌಡ ಅವರೂ ಅರ್ಜಿ ಹಾಕಿದ್ದಾರಾ ಎಂಬ ಪ್ರಶ್ನೆಗೆ ಅದನ್ನೆಲ್ಲ ಬಹಿರಂಗವಾಗಿ ಹೇಳಲ್ಲ

Team Udayavani, Apr 7, 2022, 6:06 PM IST

ಬೆಲೆ ಏರಿಕೆ ಬಿಸಿಗೆ ಜನತೆ ಜೀವಂತ ಶವವಾಗಿದ್ದಾರೆ: ಡಿ.ಕೆ.ಶಿವಕುಮಾರ್‌

ಹಾಸನ: ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಿಜೆಪಿ ಸರ್ಕಾರ ಜನ ಸಾಮಾನ್ಯರನ್ನು ಜೀವಂತ ಶವಗಳನ್ನಾಗಿ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವ ಕುಮಾರ್‌ ಅವರು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೈಲ ಬೆಲೆ, ರಸಗೊಬ್ಬರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಜನ ಸಂಕಷ್ಟದಲ್ಲಿರುವಾಗಲೇ ಹಿಜಾಬ್‌, ಹಲಾಲ್‌ ಕಟ್‌, ಆಝಾನ್‌ ಅನಗತ್ಯ ವಿಷಯಗಳ ಚರ್ಚೆ ನಡೆಯುತ್ತಿದೆ. ಇದರಿಂದ ರೈತರನ್ನು ಬದುಕಿರುವಾ ಗಲೇ ಸಮಾಧಿ ಮಾಡಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.

ನಮ್ಮ ರೈತರಿಗೆ ನಷ್ಟ: ಹಲಾಲ್‌ ಕಟ್‌ ವಿಚಾರವಾಗಿ ದಾಳಿ ಮಾಡಿದರು. ರಾಜ್ಯದಲ್ಲಿ ಕುರಿ, ಕೋಳಿ ಸಾಕುವವ ರು ರೈತರು. ಇವುಗಳನ್ನು ನಿಗದಿತ ವೇಳೆಗೆ ಮಾರಾಟ ಮಾಡದಿದ್ದರೆ ಮೇವಿನ ಹೊರೆ ಬೀಳಲಿದೆ. ಕೋವಿಡ್‌ ಸಮಯದಲ್ಲಿ ಅಲ್ಪಸಂಖ್ಯಾತರೇ ರೈತರಿಂದ ಮಾವು ಖರೀದಿಸಿದ್ದರು. ಈಗ ಅವರ ವ್ಯಾಪಾರ ನಿಷೇಧ ಮಾಡಿದರೆ ನಷ್ಟ ಆಗುವುದು ನಮ್ಮ ರೈತರಿಗೆ.ಆಗ ಮಾವಿನ ಬೆಲೆ ಏರಿಕೆಯಾಗುತ್ತದೆ. ಕೋವಿಡ್‌ ಸಮಯದಲ್ಲಿ ನಷ್ಟ ಅನುಭವಿಸಿದ ರೈತರಿಗೆ ಸರ್ಕಾರದ
ನೆರವು ಸಿಗಲಿಲ್ಲ ಎಂದು ಆರೋಪಿಸಿದರು.

ಬೆಳೆಗಳಿಗೆ ಬೆಂಬಲ ಬೆಲೆ ನೀಡಿಲ್ಲ: ಬಿಜೆಪಿಗರು ಮತ ಧ್ರುವೀಕರಣಕ್ಕೆ ಸರ್ಕಸ್‌ ಮಾಡುತ್ತಿದ್ದಾರೆ. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದಿದ್ದರು. ಆದರೆ ರಾಗಿ, ಜೋಳ, ತೊಗರಿ ಸೇರಿದಂತೆ ಬೆಳೆಗಳಿಗೆ ಬೆಂಬಲ ಬೆಲೆ ನೀಡಿಲ್ಲ. ಬದಲಿಗೆ ಸರ್ಕಾರ ಬೆಳೆ ಖರೀದಿಗೆ ಮಿತಿ ಹೇರಿದೆ. ನಮ್ಮ ರಾಜ್ಯದವರೇ ಕೇಂದ್ರ ದ ಕೃಷಿ ಸಚಿವರಾಗಿದ್ದರೂ, ಅನ್ಯಾಯ ಮುಂದುವರಿದಿದೆ. ಕೈಗಾರಿಕೆಗಳಿಗೆ ಬಂಡವಾಳ ಹರಿ ದು ಬರುತ್ತಿಲ್ಲ.

ವ್ಯಾಪಾರಸ್ಥರಿಗೂ ತೊಂದರೆ ಆಗಿದೆ. ಪ್ರತಿ ಜಿಲ್ಲೆಯಲ್ಲಿ ಕೋಮುವಾದ ಹರಡಿ ಎಲ್ಲೆಡೆ 144 ಸೆಕ್ಷನ್‌ ಹಾಕಿದರೆ ಯಾರು ವ್ಯಾಪಾರ ಮಾಡುತ್ತಾರೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ನಮ್ಮ ಮಾನವ ಸಂಪನ್ಮೂಲ ಬೇರೆ ದೇಶಗಳಿಗೆ ವಲಸೆ ಹೋಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ: ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ಪ್ರಕಟಿಸುತ್ತೇವೆ. ಮಲೆನಾ ಡು, ಕರಾವಳಿ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಹಾಗೂ ಬಯಲು ಸೀಮೆ ಕರ್ನಾಟಕಕ್ಕೆ ಪ್ರತ್ಯೇಕ ಕಾರ್ಯಕ್ರಮ ರೂಪಿಸುತ್ತೇವೆ. ಸಿದ್ದು ಸರ್ಕಾರದಲ್ಲಿ ನಾವು ಕೊಟ್ಟ ಭರವಸೆ ಶೇ.90 ರಷ್ಟು ಈಡೇರಿಸಿದ್ದೇವೆ. ಆದರೆ, ಬಿಜೆಪಿಗರು ಜನಾದೇಶವಿಲ್ಲದಿದ್ದರೂ, ವಾಮಮಾರ್ಗದಲ್ಲಿ ಬಿಜೆಪಿಗರು ಅಧಿಕಾರ ಹಿಡಿದಿದ್ದಾರೆ ಎಂದು ಲೇವಡಿ ಮಾಡಿದರು.

ಜಲಧಾರೆ ಯಶಸ್ವಿಯಾಗಲಿ: ಜೆಡಿಎಸ್‌ ಜಲಧಾರೆ ವಿಚಾರವಾಗಿ ಪ್ರಶ್ನೆ ಕೇಳಿದಾಗ ಬಹಳ ಸಂತೋಷ. ಒಳ್ಳೆಯ ದಾಗಲಿ. ಇದರಿಂದ ನಮ್ಮ ರಾಜ್ಯದ ರೈತರಿಗೆ ಅನುಕೂಲ ಆಗಬೇಕು. ಅವರ ಜಲಧಾರೆ ಎಲ್ಲೆಡೆ ಸಾಗಲಿ. ಅವರ ಕಾರ್ಯಕ್ರಮ ಯಶಸ್ವಿಯಾಗಲಿ. ನಮ್ಮ ತಕರಾರಿಲ್ಲ ಎಂದು ಶುಭ ಹಾರೈಸಿದರು.

ಜನತೆಗೆ ಕಾಂಗ್ರೆಸ್‌ ಸರ್ಕಾರ ಅಪೇಕ್ಷೆ: ಚುನಾವಣೆ ನಂತರ ಮೈತ್ರಿ ಮಾಡಿಕೊಳ್ಳುವ ಆಲೋಚನೆ ಇದೆಯೇ ಎಂಬ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ನಮ್ಮ ಕಾಲ ಮೇಲೆ, ಸ್ವಂತ ಬಲದ ಸರ್ಕಾರ ರಚನೆ ಮಾ ಡುತ್ತೇವೆ. ಜನ ಕಾಂಗ್ರೆಸ್‌ ಸರ್ಕಾರ ಬರಬೇಕು ಎಂದು ಅಪೇಕ್ಷಿಸುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಸೇರಲು ಅರ್ಜಿಗಳು ಬಂದಿವೆ: ಜೆಡಿಎಸ್‌, ಬಿಜೆಪಿ ಪಕ್ಷದ ಶಾಸಕರು, ಮುಖಂಡರು ಕಾಂಗ್ರೆಸ್‌ ಸೇರಲು ಅರ್ಜಿ ಹಾಕಿ ದ್ದಾರೆ. ಹಾಸನದ ಶಾಸಕ ಪ್ರೀತಂಗೌಡ ಅವರೂ ಅರ್ಜಿ ಹಾಕಿದ್ದಾರಾ ಎಂಬ ಪ್ರಶ್ನೆಗೆ ಅದನ್ನೆಲ್ಲ ಬಹಿರಂಗವಾಗಿ ಹೇಳಲ್ಲ. ಅದು ಗೌಪ್ಯ ವಿಚಾರ. ನಮಗೆ ದೊಡ್ಡ ನಾಯಕರುಗಳೇ ಬರಬೇಕು ಎಂಬ ನಿರೀಕ್ಷೆ ಇಲ್ಲ. 5-10 ಮತಗಳಿಂದ 2-3 ಸಾವಿರ ಮತ ತರುವ ಕಾರ್ಯಕರ್ತರು ಪಕ್ಷ ಸೇರಿದರೆ ಸಾಕು. ಈ ವಿಚಾರದಲ್ಲಿ ನಾವು ಸ್ಥಳೀಯ ನಾಯಕರು, ಕಾರ್ಯಕರ್ತರ ಅಭಿಪ್ರಾಯ ಪಡೆಯುತ್ತೇವೆ. ಪಕ್ಷದ ಸ್ಥಳೀಯ ಕಾರ್ಯಕರ್ತರ ಜತೆ ಅವರು ಬೆರೆಯಬೇಕು ಎಂದರು.

63 ಲಕ್ಷ ಸದಸ್ಯತ್ವ ನೋಂದಣಿ: ರಾಜ್ಯದಲ್ಲಿ 63 ಲಕ್ಷ ಕಾಂಗ್ರೆಸ್‌ ಪಕ್ಷದ ಡಿಜಿಟಲ್‌ ಸದಸ್ಯತ್ವ ನೋಂದಣಿ ಮಾಡಲಾಗಿದೆ. ಪ್ರತಿ ಬೂತ್‌ನಲ್ಲಿ ನೋಂದಾಣಿದಾರರ ನೇಮಕ ಮಾಡಿ ಮತದಾರರ ಪಟ್ಟಿ ತೆಗೆದುಕೊಂಡು ಮನೆ ಮನೆಗೂ ಹೋಗಿ ನೋಂದಣಿ ಮಾಡಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ನೋಂದಣಿ 70 ಲಕ್ಷ ದಾಟಲಿದೆ: ಹಾಸನದಲ್ಲಿ 2,35,000 ಸದಸ್ಯತ್ವ ನೋಂದಣಿ ಆಗಿದೆ. ಇನ್ನು 9 ದಿನ ಕಾಲಾವಕಾಶ ಇದ್ದು, ಎಲ್ಲರೂ ಉತ್ಸಾಹದಿಂದ ಸದಸ್ಯತ್ವ ನೋಂದಣಿ ಮಾಡಿ, ಸುಮಾರು 70 ಲಕ್ಷ ಗಡಿ ಮುಟ್ಟುವ ವಿಶ್ವಾಸವಿದೆ ಎಂದರು.

ಕೈ ಅಧಿಕಾರಕ್ಕೆ ತರಲು ನೋಂದಣಿ: ಪಂಚರಾಜ್ಯ ಚುನಾವಣೆಯಲ್ಲಿ ® ಫ‌ಲಿತಾಂಶ ನಂತರವೂ 30 ಲಕ್ಷ ಸದಸ್ಯರು ಕಾಂಗ್ರೆಸ್‌ಗೆ ನೋಂದಣಿ ಆಗಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ತರಲು ಅವರೆಲ್ಲ ಸದಸ್ಯರಾಗುತ್ತಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವ ನಾರಾಯಣ, ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಜಾವ ಗಲ್‌ ಮಂಜುನಾಥ್‌, ಮಾಜಿ ಸಚಿವ ಬಿ.ಶಿವರಾಮು, ಜಿಲ್ಲೆಯ ಕಾಂಗ್ರೆಸ್‌ ಮುಖಂಡರಾದ ಎಚ್‌.ಕೆ.ಜವರೇಗೌಡ, ಎಂ.ಎ.ಗೋಪಾಲಸ್ವಾಮಿ, ವಕೀಲ ದೇವರಾಜೇಗೌಡ, ಎಚ್‌. ಕೆ.ಮಹೇಶ್‌, ಬಿ.ಕೆ.ರಂಗಸ್ವಾಮಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.