ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ
Team Udayavani, May 20, 2020, 6:50 AM IST
ಅರಸೀಕೆರೆ: ನಗರದ ಪ್ರಮುಖ ರಸ್ತೆಯಾದ ರೈಲ್ವೆ ನಿಲ್ದಾಣದ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದ್ದು, ಅತ್ಯಂತ ತ್ವರಿತವಾಗಿ ಉತ್ತಮ ಗುಣಮಟ್ಟದ ಕೆಲಸ ಕಾರ್ಯಗಳನ್ನು ಮಾಡುವ ಮೂಲಕ ಪೂರೈಸಬೇಕೆಂದು ಶಾಸಕ ಕೆ.ಎಂ.ಶಿವಲಿಂಗೇ ಗೌಡ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ರೈಲ್ವೆ ನಿಲ್ದಾಣದ ಕಾಂಕ್ರೀಟ್ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಮಂಗಳ ವಾರ ಪರಿಶೀಲಿಸಿದ ನಂತರ ಮಾತನಾಡಿದ ಶಾಸಕರು, ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ನಾಲ್ಕೈದು ತಿಂಗಳು ಕಳೆದಿದೆ, ಸರ್ಕಾರ ಲಾಕ್ಡಾನ್ ಘೋಷಣೆ ಮಾಡಿರುವ ಕಾರಣದಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತ ಗೊಳಿಸಲಾಗಿತ್ತು,
ಆದರೆ ಈಗ ಪ್ರಾರಂಭ ವಾಗಿರುವ ಒಳಚರಂಡಿ ಪೈಪ್ಲೈನ್ ಜೋಡಣೆ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಜೋಡಣೆ ಕಾರ್ಯ ಅತ್ಯಂತ ತ್ವರಿತವಾಗಿ ನಗರಸಭೆ ಆಡಳಿತ ಅಳವಡಿಸಿದರೆ ನಿಗದಿತ ಸಮಯದಲ್ಲಿ ಅತ್ಯಂತ ತ್ವರಿತವಾಗಿ ಉತ್ತಮ ಗುಣಮಟ್ಟದ ಕ್ರೀಟ್ ರಸ್ತೆ ಹಾಗೂ ರಸ್ತೆಯ ಎರಡೂ ಬದಿಯಲ್ಲಿ ಚರಂಡಿಗಳನ್ನು ನಿರ್ಮಿ ಸಲು ಸಂಬಂಧಪಟ್ಟ ಗುತ್ತಿಗೆದಾರರಿಗೆ ಒಂದು ವಾರದೊಳಗೆ ಕಾಂಕ್ರೀಟ್ ರಸ್ತೆ ನಿರ್ಮಿಸಲು ತಾವುಸೂಚನೆ ನೀಡುವುದಾಗಿ ಹೇಳಿದರು.
ಈ ಸಂಧರ್ಭದಲ್ಲಿ ಪೌರಾಯುಕ್ತ ಕಾಂತ ರಾಜ್ ನಗರಸಭೆ ಸದಸ್ಯ ಗಿರೀಶ್, ಜೆಡಿಎಸ್ ಮುಖಂಡ ಧರ್ಮಶೇಖರ್, ಬಿಜೆಪಿ ಮುಖಂಡ ರಮೇಶ್ ಬಾಬು ನಾಯ್ಡು, ನಗರ ನೀರು ಸರಬರಾಜು ಮತ್ತು ಒಳಚರಂಡಿ ಅಭಿ ವೃದ್ಧಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರ ಜಗದೀಶ್, ಸಹಾಯಕ ಅಭಿಯಂತರ ಕೃಷ್ಣಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ