ಹಾಸನ ಬಳಿ ಭೀಕರ ಅಪಘಾತ : 5 ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ಸಾವು
ಧರ್ಮಸ್ಥಳ ದೇವರ ದರ್ಶನ ಪಡೆದು ವಾಪಸ್ಸಾಗುತ್ತಿದ್ದ ವೇಳೆ ಅಪಘಾತ
Team Udayavani, Oct 16, 2022, 7:35 AM IST
ಹಾಸನ : ಟೆಂಪೋ ಟ್ರಾವೆಲರ್, ಹಾಲಿನ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 9 ಜನರು ಮೃತಪಟ್ಟ ಘಟನೆ ಅರಸೀಕೆರೆ ತಾಲೂಕು ಬಾಣಾವರ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ.
ಬಾಣಾವರ ಸಮೀಪದ ಹಳ್ಳಕೆರೆ ಬಳಿ ಬಿ.ಎಚ್.ರಸ್ತೆ ಯಲ್ಲಿ ಧರ್ಮಸ್ಥಳ ದಿಂದ ಬೆಂಗಳೂರಿಗೆ ತೆರಳುತ್ತಿದ್ದ ಟೆಂಪೋ ಟ್ರಾವಲರ್ ಗೆ ಬಸ್ ಢಿಕ್ಕಿ ಹೊಡೆದಿದ್ದರಿಂದ 5 ಮಕ್ಕಳು ಮತ್ತು 4 ಮಂದಿ ವಯಸ್ಕರು ಮೃತಪಟ್ಟಿದ್ದಾರೆ.
ಟಿಟಿ ವಾಹನದಲ್ಲಿದ್ದ ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ಧ್ರುವ (2), ವಂದನಾ (20), ದೊಡ್ಡಯ್ಯ (60), ಭಾರತಿ (50) ಮೃತ ದುರ್ದೈವಿಗಳು.
ಬಾಣಾವರ ಠಾಣೆ ಪೋಲೀಸರು ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ಅರಸೀಕೆರೆ ಮತ್ತು ಹಾಸನದ ಆಸ್ಪತ್ರೆಗೆ ರವಾನಿಸಿದ್ದಾರೆ
ಇದನ್ನೂ ಓದಿ : ಮೂರನೇ ಅವಧಿಗೆ ಜಿನ್ಪಿಂಗ್ಗೆ ಅಧ್ಯಕ್ಷಗಿರಿ? ಅಧ್ಯಕ್ಷ ಆಯ್ಕೆ ಕುರಿತು ಇಂದಿನಿಂದ ಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ