ರಸ್ತೆ ಬದಿ ಆಹಾರ ಆರೋಗ್ಯಕ್ಕೆ ಹಾನಿಕರ


Team Udayavani, Feb 21, 2020, 12:42 PM IST

hasan-tdy-1

ಸಾಂಧರ್ಬಿಕ ಚಿತ್ರ

ಅರಸೀಕೆರೆ: ಇಂದಿನ ಯಾಂತ್ರೀಕೃತ ಜೀವನದಲ್ಲಿ ಮನುಷ್ಯ ಸಮಯದ ಅಭಾವ ಮತ್ತು ಬಾಯಿ ರುಚಿಗೆ ಮರುಳಾಗಿ ಫಾಸ್ಟ್‌ ಫ‌ುಡ್‌ ಸಂಸ್ಕೃತಿಗೆ ಮಾರುಹೋಗಿ ಅನಾರೋಗ್ಯಕ್ಕೆ ಆಹ್ವಾನ ನೀಡುತ್ತಿದ್ದಾನೆ.

ಹಾನಿಕಾರಕ ಪದಾರ್ಥಗಳ ಬಳಕೆ: ನಗರದ ವಿವಿಧ ಹೋಟೆಲ್‌ಗ‌ಳಲ್ಲಿ ಮತ್ತು ಗಾಡಿಗಳಲ್ಲಿ ಇಡ್ಲಿ ಮಾಡುವಾಗ ಬಟ್ಟೆಯ ಬದಲಿಗೆ ಪ್ಲಾಸ್ಟಿಕ್‌ ಬಳಸುವುದು, ಬೊಂಡಾ, ವಡೆ, ಬಜ್ಜಿ ಇನ್ನಿತರ ಕರಿದ ಪದಾರ್ಥಗಳನ್ನು ತಯಾರಿಸಲು ಕಳಪೆ ಗುಣಮಟ್ಟದ ಹಾಗೂ ಮರುಬಳಕೆ ಎಣ್ಣೆಯನ್ನು ಬಳಸುವುದು, ರುಚಿಗಾಗಿ ಟೇಸ್ಟಿಂಗ್‌ ಪೌಡರ್‌, ಹಾನಿಕಾರಕ ಬಣ್ಣಗಳನ್ನು ಬಳಸುವುದರಿಂದ ಕ್ಯಾನ್ಸರ್‌ ಮೊದಲಾದ ರೋಗಗಳು ಬರುವ ಸಾಧ್ಯತೆಯಿರುತ್ತದೆ.

ಅನುಷ್ಠಾನವಾಗದ ಆಹಾರ ಸುರಕ್ಷತಾ ಕಾಯ್ದೆ: ರಾಜ್ಯ ಸರ್ಕಾರ 2011 ರಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯನ್ನು ಜಾರಿಗೆ ತಂದಿದ್ದು, ಕಡ್ಡಾಯವಾಗಿ ಸಂಬಂಧ ಪಟ್ಟ ಇಲಾಖೆಯಿಂದ ಮಾಲೀಕರು ನೋಂದಣಿ ಮಾಡಿಸಿ ಪರವಾನಗಿ ಪಡೆದು ವ್ಯಾಪಾರ ವ್ಯವಹಾರ ನಡೆಸಬೇಕಾಗಿದೆ. ತಪ್ಪಿದಲ್ಲಿ ಲಕ್ಷಾಂತರ ರೂ. ದಂಡವನ್ನು ಸರ್ಕಾರಕ್ಕೆ ಕಟ್ಟಬೇಕಾಗುತ್ತದೆ. ಇಂತಹ ಕಾಯ್ದೆ ಜಾರಿಯಾಗಿದ್ದರೂ ರಸ್ತೆ ಬದಿಯ ತಿಂಡಿ ಗಾಡಿಗಳು ಗೂಡಂಗಡಿಗಳಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಶುದ್ಧ ಕುಡಿಯುವ ನೀರು ಸರಬರಾಜು ಮಾಡದೇ ಇರುವುದು. ತಟ್ಟೆ ಲೋಟಗಳನ್ನೇ ಸರಿಯಾಗಿ ತೊಳೆಯದಿರುವುದು. ನಿಷೇಧಿತ ಪ್ಲಾಸ್ಟಿಕ್‌ ಬಳಸುತ್ತಿರುವುದು. ಕಲಬೆರಕೆ ಟೀ ಪುಡಿ ಬಳಸುತ್ತಿರುವುದರಿಂದ ಆರೋಗ್ಯಕ್ಕೆ ಮಾರಕವಾಗಿ ಪರಿಣಮಿಸಿದೆ.

ಎಲ್ಲೆಲ್ಲಿ ತಿಂಡಿ, ತಿನಿಸು ಮಾರಾಟ? : ನಗರದ ರೈಲ್ವೆ ನಿಲ್ದಾಣ ಮತ್ತು ಬಸ್‌ ನಿಲ್ದಾಣದ ರಸ್ತೆಗಳ ಅಕ್ಕಪಕ್ಕದಲ್ಲಿ ಹಾಗೂ ಪ್ರಮುಖ ವೃತ್ತಗಳ ಬಳಿಯಲ್ಲಿ ತಲೆಯೆತ್ತಿರುವ ರಸ್ತೆ ಬದಿಯ ತಿಂಡಿ ಗಾಡಿಗಳು ಹಾಗೂ ಗೂಡಂಗಡಿಗಳಲ್ಲಿ ತಯಾರಿಸುವ ಇಡ್ಲಿ, ವಡೆ, ಪೂರಿ, ಬೋಡಾ, ಚಿತ್ರಾನ್ನ ಮೊಸರನ್ನ, ಪಲಾವ್‌ ಮತ್ತು ಕೋಳಿ ಮಾಂಸದ ಆಹಾರ ಜೊತೆಗೆ ಮೀನು ಮೊಟ್ಟೆಯಿಂದ ಮಾಡಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತದೆ.

ಚರಂಡಿ ಪಕ್ಕದಲ್ಲಿ ಪಾನಿಪುರಿ ಮಾರಾಟ: ನಗರದ ಅನೇಕ ಕಡೆಗಳಲ್ಲಿ ಚರಂಡಿಗಳ ಪಕ್ಕದಲ್ಲಿಯೇ ಪಾನಿಪೂರಿ ಮಾರಾಟವನ್ನು ಮಾಡುತ್ತಿದ್ದಾರೆ. ಚರಂಡಿಯಲ್ಲಿನ ದುರ್ವಾಸನೆಯನ್ನು ಲೆಕ್ಕಿಸದೇ ಜನರು ಅಲ್ಲಿಯೇ ಪಾನಿ ಪುರಿ ಸೇವನೆಗೆ ಮುಂದಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.

ಹೋಟೆಲ್‌ ಹಾಗೂ ರಸ್ತೆ ಬದಿ ವ್ಯಾಪಾರಿಗಳು ಆರೋಗ್ಯ ಇಲಾಖೆಯಿಂದ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ತಿಂಡಿ ಗಾಡಿಗಳ ಮಾಲೀಕರು ನೋಂದಣಿ ಮಾಡಿಕೊಂಡಿಲ್ಲ. ಆಹಾರ ತಯಾರಿಕೆ ಹಾಗೂ ವಿತರಣೆಯಲ್ಲಿ ಸ್ವತ್ಛತೆ ಕಾಪಾಡಬೇಕು ಎಂದು ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ತೆರಳಿ ಸೂಚನೆ ನೀಡಲಾಗಿದೆ. ಡಾ.ಜಿ.ಎಸ್‌. ನಾಗಪ್ಪ, ತಾಲೂಕು ಆಹಾರ ಸುರಕ್ಷತಾಧಿಕಾರಿ

ಬಡ ಜನರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರವನ್ನು ಗ್ರಾಹಕರ ಎದುರೇ ತಯಾರಿಸಿ ಕೊಡುತ್ತಿದ್ದೇವೆ. ಸ್ವಚ್ಛತೆ ಕಾಪಾಡುವುದರೊಂದಿಗೆ ಶುದ್ಧ ಕುಡಿಯುವ ನೀರನ್ನು ಗ್ರಾಹಕರಿಗೆ ನೀಡುತ್ತಿದ್ದೇವೆ. ನಗರಸಭೆ ಮತ್ತು ಆಹಾರ ಇಲಾಖೆಯಿಂದ ಪರವಾನಗಿ ಪಡೆಯಲು ಕಚೇರಿಗೆ ನಾವು ಅಲೆದಾಡಲು ಸಾಧ್ಯವಾಗುತ್ತಿಲ್ಲ, ಈ ಬಗ್ಗೆ ನಮಗೆ ಸೂಕ್ತ ಮಾರ್ಗದರ್ಶನ ಕೊರತೆ ಇದೆ. ಶಾಂತಕುಮಾರ್‌, ರಸ್ತೆ ಬದಿ ವ್ಯಾಪಾರಿ

 

-ರಾಮಚಂದ್ರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.