ಖನಿಜ ಬಳಕೆಗೆ ರಾಜಧನ ಕಡಿತ ಕಡ್ಡಾಯ
Team Udayavani, Jan 26, 2019, 7:50 AM IST
ಹಾಸನ: ಸರ್ಕಾರಿ ಕಾಮಗಾರಿಗಳಿಗೆ ಬಳಸುವ ಮರಳು ಮತ್ತು ಉಪ ಖನಿಜಗಳಿಗೆ ನಿಯಮಾನುಸಾರ ರಾಜಧನ ಮತ್ತು ಜಿಲ್ಲಾ ಖನಿಜ ನಿಧಿ ತೆರಿಗೆ ಕಡ್ಡಾಯವಾಗಿ ಕಡಿತಗೊಳಿಸಿ ಪಾವತಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ರಸ್ತೆ ಹಾಗೂ ಇತರೆ ಸರ್ಕಾರಿ ಕಾಮಗಾರಿಗೆ ಅನುಗುಣವಾಗಿ ರಾಜಧನ, ಡಿಎಂಎಫ್ ಹಾಗೂ ಇತರೆ ತೆರಿಗೆಗಳನ್ನು ಕಟಾಯಿಸುತ್ತಿರುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿ ಅವರು, ಸರ್ಕಾರಿ ಕಾಮಗಾರಿಗಳಲ್ಲಿ ಹೆಚ್ಚಾಗಿ ಎಂ ಸ್ಯಾಂಡ್ ಬಳಕೆಗೆ ಆದ್ಯತೆ ಮತ್ತು ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.
ಕಡ್ಡಾಯ ಕ್ರಮ: ಲೋಕೋಪಯೋಗಿ ಇಲಾಖೆ, ಜಿಪಂ ಎಂಜಿನಿಯರಿಂಗ್ ವಿಭಾಗ, ರಾಷ್ಟ್ರೀಯ ಹೆದ್ದಾರಿ, ಎತ್ತಿನ ಹೊಳೆ ಯೋಜನೆ ಸೇರಿದಂತೆ ಸರ್ಕಾರಿ ಕಾಮಗಾರಿಗೆ ಬಳಸಲಾಗುತ್ತಿರುವ ಮರಳು ಮತ್ತು ಇತರ ಖನಿಜಗಳಿಗೆ ನಿಖರವಾಗಿ ರಾಜಧನ ಕಡಿತಗೊಳಿಸದೇ ಇರುವುದು ಮತ್ತು ಜಿಲ್ಲಾ ಖನಿಜ ನಿಧಿಗೆ ಹಣ ಪಾವತಿ ಮಾಡದೆ ಇರುವುದನ್ನು ಗಮನಿಸಲಾಗಿದೆ. ಎಲ್ಲಾ ಇಲಾಖೆಗಳು ಈ ಬಗ್ಗೆ ಕಡ್ಡಾಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಸಿಂಧೂರಿ ನಿರ್ದೇಶನ ನೀಡಿದರು.
ರಾಜಧನ ಸಂದಾಯ: ಎತ್ತಿನಹೊಳೆ ಯೋಜನೆಯಡಿ ಜಿಲ್ಲೆಯ ಮರಳು ಬಳಸಿ ರಾಜಧನವನ್ನು ಚಿತ್ರದುರ್ಗ ಕಚೇರಿಯಲ್ಲಿ ಕಡಿತ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ವರದಿ ನೀಡುತ್ತಿದ್ದಾರೆ. ಆಯಾಯಾ ಜಿಲ್ಲೆಗೆ ಅದು ಸಂದಾಯವಾಗಬೇಕು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಲೋಪ ಸರಿಪಡಿಸಿ: ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸ್ಥಳೀಯ ಆಡಳಿತದ ಗಮನಕ್ಕೆ ತಾರದೆ, ಸಾಮಗ್ರಿಗಳನ್ನು ಸಂಗ್ರಹಿಸದೆ ನಗರದ ಮಧ್ಯಭಾಗದಲ್ಲಿ ಅಗೆದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿರುವುದು ಸಮರ್ಪಕವಲ್ಲ. ಕೂಡಲೇ ಲೋಪ ಸರಿಪಡಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ರಾಜಧನ ಸಂದಾಯ ಮಾಡಿ: ಸಭೆಯಲ್ಲಿ 2016-17 ರಿಂದ 2018-19ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಸರ್ಕಾರಿ ಕಾಮಗಾರಿಗಳಿಗೆ ಉಪಯೋಗಿಸುತ್ತಿರುವ, ನಿರ್ವಹಿಸುತ್ತಿರುವ ಹಾಗೂ ಪ್ರಾರಂಭವಾಗಬೇಕಿರುವ ಸರ್ಕಾರಿ ಕಾಮಗಾರಿಗಳಿಗೆ ಅವಶ್ಯವಿರುವ ಉಪಖನಿಜಗಳ ಕುರಿತು ಚರ್ಚೆ ನಡೆಯಿತು. ಉಪಖನಿಜ ಸಾಗಾಣಿಕಾ ಪರವಾನಗಿಯನ್ನು ಪಡೆಯದೆ ಸರ್ಕಾರಿ ಕಾಮಗಾರಿಗಳಲ್ಲಿ ಒಳಸುವ ಉಪಖನಿಜಗಳ ಗಾತ್ರಕ್ಕೆ ಕರ್ನಾಟಕ ಉಪಖನಿಜ ರಿಯಾಯ್ತಿ ನಿಯಮಾವಳಿ-1994ರ ತಿದ್ದುಪಡಿ ಅಧಿನಿಯಮ 2017ರ ನಿಯಮ 44(4)ರಂತೆ ರಾಜಧನದ ಐದುಪಟ್ಟು ದಂಡದ ಮೊತ್ತವನ್ನು ಕಟಾಯಿಸಿ ಸರ್ಕಾರಕ್ಕೆ ಸಂದಾಯ ಮಾಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಕೆಎಂಎಂಸಿಆರ್ 1994ರ ತಿದ್ದುಪಡಿ ಆಧಿನಿಯಮ 2016 ನಿಯಮ 36ರಲ್ಲಿ ಕಡ್ಡಾಯವಾಗಿ ಉಪಖನಿಜ ಅಂದರೆ ಮಣ್ಣು, ಜೆಲ್ಲಿ, ಕಟ್ಟಡಕಲ್ಲು, ಮರಳಿಗೆ ಕಡ್ಡಾಯವಾಗಿ ಉಪಖನಿಜ ಸಾಗಾಣಿಕಾ ಪರವಾನಗಿಯನ್ನು ಪಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು. ಲೋಕೋಪಯೋಗಿ, ಜಿಪಂ ಎಂಜಿನಿಯರಿಂಗ್ ವಿಭಾಗ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರು, ಗಣಿ ಮತ್ತು ಭೂಜ್ಞಾನ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!