ಮೂಲ ಯೋಜನೆಯಂತೆ ಕೆರೆ ಅಭಿವೃದ್ಧಿ
ದೇವೇಗೌಡರ ಸಲಹೆಯಂತೆ ಚನ್ನಪಟ್ಟಣ ಕೆರೆ ಅಭಿವೃದ್ಧಿಗೆ 144 ಕೋಟಿ ರೂ. ಯೋಜನೆ ಜಾರಿ: ಶಾಸಕ ಪ್ರೀತಂ ಜೆ.ಗೌಡ
Team Udayavani, Feb 3, 2021, 5:36 PM IST
ಹಾಸನ: ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ರೂಪಿಸಿದ್ದ ಮೂಲ ಯೋಜನೆಯಂತೆಯೇ ಚನ್ನಪಟ್ಟಣ ಕೆರೆ ಅಭಿವೃದ್ಧಿ ಮತ್ತು ಉದ್ಯಾನ ನಿರ್ಮಾಣದ 144 ಕೋಟಿ ರೂ.ಯೋಜನೆಯನ್ನು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸಲಹೆಯಂತೆ ಅನುಷ್ಠಾನಗೊಳಿಸಲು ನನ್ನ ಸಮ್ಮತಿ ಇದೆ ಎಂದು ಶಾಸಕ ಪ್ರೀತಂ ಜೆ.ಗೌಡ ಸ್ಪಷ್ಟಪಡಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದಂತೆ ಚನ್ನಪಟ್ಟಣ ಕೆರೆ ಅಭಿವೃದ್ಧಿಯ 144 ಕೋಟಿ ರೂ.ಯೋಜನೆಯನ್ನು ಅನುಷ್ಠಾನಗೊಳಿಸಲು ನನ್ನ ಒಪ್ಪಿಗೆ ಇದೆ. ಮೂಲ ಯೋಜನೆಯಲ್ಲಿ ಕೆರೆ ಅಭಿವೃದ್ಧಿಗೆ 44 ಕೋಟಿ ರೂ. ನಿಗದಿಯಾಗಿತ್ತು. ಅದರಂತೆ ಈಗ ಮಂಜೂರಾಗಿರುವ 144 ಕೋಟಿ ರೂ.ನಲ್ಲಿ ಮೊದಲ ಹಂತದಲ್ಲಿ ಕೆರೆಗೆ ನೀರು ತುಂಬಿಸುವ ಕಾಮಗಾರಿ 40 ಕೋಟಿ ರೂ.ನಲ್ಲಿ ಆರಂಭಿಸಲಾಗುವುದು ಎಂದು ಹೇಳಿದರು.
ಅನುದಾನ ಬಿಡುಗಡೆ ಮಾಡಿಸಲಿ: ಡಿಸೆಂಬರ್ ನಂತರ ಉದ್ಯಾನ ಸೇರಿ ವಿವಿಧ ಕಾಮಗಾರಿಗಳಿಗೆ ಇನ್ನುಳಿದ 100 ಕೋಟಿ ರೂ. ಅನ್ನು ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಚಿವ ರೇವಣ್ಣ ಅವರು ಬಿಡುಗಡೆ ಮಾಡಿಸಿದರೆ ಕಾಮಗಾರಿಯನ್ನು ಹಂತಗಳಲ್ಲಿ ಅನುಷ್ಠಾನ ಗೊಳಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ :ವಿಜೃಂಭಣೆಯ ಯಲ್ಲಮ್ಮ ದೇವಿ ಜಾತ್ರೆ
ಚನ್ನಪಟ್ಟಣ ಕೆರೆ ಅಭಿವೃದ್ಧಿಯ ಮೂಲಕ ನನ್ನ ವಿಧಾನಸಭಾ ಕ್ಷೇತ್ರಕ್ಕೆ 100 ಕೋಟಿ ರೂ. ಹೆಚ್ಚು ಅನುದಾನ ಬರುವುದಿದ್ದರೆ ನಾನೇಕೆ ಬೇಡ ಎನ್ನಲಿ ಎಂದ ಪ್ರೀತಂ ಜೆ.ಗೌಡ, ದೇವೇಗೌಡರ ಮಾರ್ಗ ದರ್ಶನದಲ್ಲಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ಸಹಕರಿಸುವೆ. ದೇವೇಗೌಡರು ಒಂದು ಪಕ್ಷಕ್ಕೆ ಸೀಮಿತವಲ್ಲ. ಅವರು ಜಿಲ್ಲೆಯ ಆಸ್ತಿ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ