ಗ್ರಾಮೀಣ ವಸತಿ ಯೋಜನೆ: ಅಧಿಕಾರಿಗಳಿಗೆ ಗಡುವು


Team Udayavani, Jun 26, 2019, 12:09 PM IST

hasan-tdy-2..

ಹಾಸನ ಜಿಪಂ ಸಭಾಂಗಣದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಅಧಿಕಾರಿಗಳ ಸಭೆ ನಡೆಸಿದರು. ಜಿಪಂ ಅಧ್ಯಕ್ಷೆ ಶ್ವೇತಾ ಮೊದಲಾದವರಿದ್ದರು.

ಹಾಸನ: ಗ್ರಾಮೀಣ ವಸತಿ ಯೋಜನೆಯಡಿ 9500 ಫ‌ಲಾನುಭವಿಗಳಿಗೆ ಜು.5ರೊಳಗೆ ನಿವೇಶನದ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಪಿಡಿಒ ಗಳ ಸಭೆ ನಡೆಸಿದ ಅವರು, ಈಗಾಗಲೇ ಗುರುತಿಸಿರುವ ಫ‌ಲಾನುಭವಿಗಳಿಗೆ ಹಕ್ಕುಪತ್ರ ನೀಡಬೇಕು. ಆನಂತರ ಮನೆ ನಿರ್ಮಾಣ ಕಾರ್ಯ ಆರಂಭಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

ನಗರ ಪ್ರದೇಶದಲ್ಲಿಯೂ ವಸತಿ ರಹಿತ ಕೂಲಿ ಕಾರ್ಮಿಕರು, ಹೋಟೆಲ್ಗಳ ಕಾರ್ಮಿಕರು, ಆಟೋ, ಟ್ಯಾಕ್ಸಿ ಚಾಲಕರನ್ನು ಗುರುತಿಸಿ ಪಟ್ಟಿ ಮಾಡುವ ಪ್ರಕ್ರಿಯೆ ಜೂ.21ರಿಂದ ಆರಂಭ ವಾಗಿದ್ದು, ಜೂ.29ಕ್ಕೆ ಮುಗಿಯಲಿದೆ. ಆನಂತರ ಅರ್ಹ ಫ‌ಲಾನುಭವಿಗಳಿಗೆ ನಿವೇಶನ ಮಂಜೂರು ಮಾಡಲಾಗುವುದು. ಹಾಸನ ನಗರದಲ್ಲಿ 3ಸಾವಿರ ನಿವೇಶನಗಳನ್ನು ಹಂಚಲು ನಿರ್ಧರಿಸಿದ್ದು, ಹಾಸನ ನಗರಾಭಿವೃದ್ಧಿ ಪ್ರಾಧಿಕಾರ ಎಸ್‌.ಎಂ. ಕೃಷ್ಣ ಉಪ ನಗರ ಬಡಾವಣೆಯಲಿ 500 ನಿವೇಶನಗಳನ್ನು ನೀಡಲಿದೆ. ಇನ್ನುಳಿದಂತೆ ನಗರಸಭೆ ಆಶ್ರಯ ಮತ್ತಿತರ ಯೋಜನೆಗಳಡಿ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ರೈತರ ಸಬಲೀಕರಣಕ್ಕೆ ಕ್ರಮ: ಸರ್ಕಾರದ ಎಲ್ಲಾ ಯೋಜನೆಗಳನ್ನು ಸಕಾಲದಲ್ಲಿ ಅನುಷ್ಠಾನಗೊಳಿಸ ಬೇಕು. ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಪಾಲನೆ ಮತ್ತು ಅರಣ್ಯ ಇಲಾಖೆಗಳು ಜಂಟಿ ಯಾಗಿ ಮಾದರಿ ಸಂಯೋಜಿತ ಬೇಸಾಯ ಯೋಜನೆ ಜಾರಿಗೆ ತರುವ ಮೂಲಕ ರೈತರ ಆರ್ಥಿಕ ಸಬಲೀಕರಣಕ್ಕೆ ಕ್ರಮಕೈಗೊಳ್ಳಬೇಕು ಎಂದ ಅವರು, ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಹೊಸ ಸುಧಾರಣಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರೈತರಲ್ಲಿ ಅತ್ಮಶ್ವಾಸ ತುಂಬಬೇಕಿದೆ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕ ವಾಗಿ ಸದ್ಬಳಕೆ ಮಾಡಿಕೊಂಡು ಅಂತರಿಕ ಬಹು ಬೆಳೆ ಪ್ರಯೋಗ ಜಾರಿಗೆ ತರಬೇಕು ಎಂದು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸಚಿವರು ತಾಕೀತು ಮಾಡಿದರು.

ಪಿಡಿಒಗಳು ಕಾರ್ಯನಿರ್ವಹಿಸಲಿ: ಗ್ರಾಮ ಪಂಚಾಯಿತಿ ಗಳಲ್ಲಿ ಪಿಡಿಒಗಳು ಹೆಚ್ಚು ಸಮರ್ಥ ವಾಗಿ ಕೆಲಸಮಾಡಬೇಕು. ಯೋಜನೆಗಳ ಪರಿಣಾ ಮಕಾರಿ ಅನುಷ್ಠಾನದ ಜೊತೆಗೆ ಗ್ರಾಮ ಪಂಚಾ ಯತಿ ವ್ಯಾಪ್ತಿಯ ಸ್ವತ್ತುಗಳನ್ನು ಸುರಕ್ಷಿತಗೊಳಿಸ ಬೇಕು. ರೈತರ ಜಮೀನಿನಲ್ಲೂ ತೋಟಗಾರಿಕೆ ಇಲಾಖೆ ಫಾರಂಗಳಲ್ಲಿಯೂ ಮಾದರಿ ಬೇಸಾಯ ಜಾರಿಗೊಳ್ಳಬೇಕು ಅದಕ್ಕೆ ಅಗತ್ಯರುವ ಅನುದಾನ ಒದಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ತೋಟಗಾರಿಕೆ ಕಾಲೇಜು ಆರಂಭಿಸಿ: ಸೋಮನ ಹಳ್ಳಿ ಕಾವಲ್ನಲ್ಲಿ ತೋಟಗಾರಿಕೆ ಕಾಲೇಜು ಪ್ರಾರಂಭಕ್ಕೂ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದ ಅವರು, ಜಿಲ್ಲೆಯಲ್ಲಿ ಆಲೂಗೆಡ್ಡೆ ಬೇಸಾಯ ಪ್ರದೇಶ ಕ್ಷೀಣಿಸುತ್ತಿದೆ, ಇದನ್ನು ತಪ್ಪಿಸಲು ಸೂಕ್ತ ಪ್ರೋತ್ಸಾಹ ಕ್ರಮಗಳನ್ನು ಜಾರಿಗೊಳಿಸಿ, ಸಬ್ಸಿಡಿ ಹಣವನ್ನು ತ್ವರಿತವಾಗಿ ರೈತರ ಖಾತೆಗಳಿಗೆ ವರ್ಗಾಯಿಸಿ ಎಂದರು.

ಜಿಲ್ಲೆಯಲ್ಲಿ ಜಲಾಮೃತ, ಜಲ ಸಂವರ್ಧನೆ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿ ಗೊಳಿಸಬೇಕು ದೇಶದ ನಾನಾ ಭಾಗಗಳಲ್ಲಾಗಿರುವ ಯಶೋಗಾಥೆಗಳನ್ನು ಪರಿಶೀಲಿಸಿ ಜಿಲ್ಲೆ ಯಲ್ಲೂ ಅದನ್ನು ಸಾಧ್ಯತೆ ಆಧಾರದ ಮೇಲೆ ಜಾರಿಗೊಳಿಸಬೇಕು. ಪಶುಸಂಗೋ ಪನೆ ಯನ್ನು ಪ್ರೋತ್ಸಾಸಿ ಎಂದು ರೇವಣ್ಣ ಹೇಳಿದರು.

ಜಿಪಂ ಅಧ್ಯಕ್ಷೆ ಶ್ವೇತಾ, ಉಪಾಧ್ಯಕ್ಷ ಸ್ವರೂಪ್‌, ಜಿಪಂ ಸಿಇಒ ಪುಟ್ಟಸ್ವಾಮಿ, ಎಡೀಸಿ ವೈಶಾಲಿ, ಎಸಿಗಳಾದ ನಾಗರಾಜ್‌, ಕವಿತಾ ರಾಜಾರಾಂ ಹಾಗೂ ವಿವಿಧ ಇಲಾಖಾ ಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.